Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....