Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...