Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...