Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...