Homeಮುಖಪುಟಕೇರಳ: ಶಬರಿಮಲೆ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲಿನ ಪ್ರಕರಣ ರದ್ದು

ಕೇರಳ: ಶಬರಿಮಲೆ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲಿನ ಪ್ರಕರಣ ರದ್ದು

- Advertisement -
- Advertisement -

2018 ರ ಸುಪ್ರೀಂ ಕೋರ್ಟ್‌‌ ತೀರ್ಪಿನ ನಂತರ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವುದರ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾದ ನೂರಾರು ಪ್ರಕರಣಗಳನ್ನು ರದ್ದುಗೊಳಿಸಲು ಕೇರಳ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಆನ್‌ಮನೋರಮ ವರದಿ ಮಾಡಿದೆ.

ಇದರ ಜೊತೆಗೆ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆದ ಆಂದೋಲನದ ಸಮಯದಲ್ಲಿ ದಾಖಲಾದ ಕೇಸುಗಳನ್ನು ಕೂಡಾ ರದ್ದು ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಅದಾಗ್ಯೂ, ಪ್ರತಿಭಟನೆಯ ಸಮಯದಲ್ಲಿ ಗಂಭೀರ ಅಪರಾಧಗಳು ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಕೈ ಬಿಡಲಾಗುವುದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಪತ್ತನಂತಿಟ್ಟದಲ್ಲಿರುವ ಪ್ರಸಿದ್ಧ ಶಬರಿಮಲೆ ದೇವಸ್ಥಾನಕ್ಕೆ ಸುಪ್ರೀಂಕೋರ್ಟ್‌ನ ಆದೇಶದಂತೆ ಇಬ್ಬರು ಮಹಿಳೆಯರನ್ನು ಪ್ರವೇಶಿಸಿದ ನಂತರ 2019 ರ ಜನವರಿಯಲ್ಲಿ ರಾಜ್ಯದ ಅನೇಕ ಕಡೆ ಹಿಂಸಾತ್ಮಕ ಘಟನೆಗಳು ನಡೆದಿದ್ದು, 1,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿ, 3,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು.

ಅದೇ ರೀತಿ ದೇಶದ ಸಂಸತ್ತು 2019 ರಲ್ಲಿ ವಿವಾದಾತ್ಮಕ ಸಿಎಎ ಅಂಗೀಕರಿಸಿದ ನಂತರ ದೇಶಾದ್ಯಂತ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ದಾಖಲಾಗಿದ್ದವು. ಈ ಸಂದರ್ಭ ಕೇರಳದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆದ್ದಿದ್ದವು.

ಕೇರಳ ಸಚಿವ ಸಂಪುಟದ ನಿರ್ಧಾರವನ್ನು ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಲ ಸ್ವಾಗತಿಸಿದ್ದು, “ಸರ್ಕಾರ ಈಗ ಪ್ರತಿಪಕ್ಷಗಳ ದೀರ್ಘಕಾಲದ ಬೇಡಿಕೆಗಳನ್ನು ಒಪ್ಪಿಕೊಳ್ಳುತ್ತಿದೆ” ಎಂದು ಹೇಳಿದ್ದಾರೆ.

ಬಿಜೆಪಿಯ ರಾಜ್ಯ ಘಟಕವು ಶಬರಿಮಲೆ ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುತ್ತಿರುವುದನ್ನು ಸ್ವಾಗತಿಸಿತಾದರೂ, ಸಿಎಎ ವಿರೋಧಿ ಆಂದೋಲನಕಾರರ ವಿರುದ್ಧದ ಪ್ರಕರಣಗಳ ರದ್ದುಪಡಿಸುತ್ತಿರುವುದನ್ನು ವಿರೋಧಿಸಿದೆ. ಎರಡೂ ಪ್ರಕರಣಗಳನ್ನು ಒಂದೇ ರೀತಿಯಲ್ಲಿ ನಡೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...