Homeಮುಖಪುಟ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ...

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಸರ್ಕಾರವು ಉದ್ದೇಶಪೂರ್ವಕವಾಗಿ ಜನರನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರವು ನಿಜವಾಗಿಯೂ ಸಂವಿಧಾನವನ್ನು ನಂಬಿದರೆ, ಅದು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ತಮ್ಮ ಭಾಷಣದ ಸಮಯದಲ್ಲಿ, ಇತ್ತಿಚೆಗೆ ಬಿಡುಗಡೆಯಾದ ಮಲಯಾಳಂ ಸಿನಿಮಾ ಎಂಪುರಾನ್ ಅನ್ನು ಉಲ್ಲೇಖಿಸಿದ ಬ್ರಿಟ್ಟಾಸ್, ಬಿಜೆಪಿ ಸಂಸದ ಸುರೇಶ್ ಗೋಪಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ನಿಮ್ಮ ವಿಷವನ್ನು ಕೇರಳ

ಸದನದಲ್ಲಿರುವ ಬಿಜೆಪಿ ಸದಸ್ಯರಲ್ಲಿ ಎಂಪೂರನ್‌ ಸಿನಿಮಾದ ‘ಮುನ್ನಾ’ ಎಂಬ ಪಾತ್ರಧಾರಿಯಂತ ವ್ಯಕ್ತಿಯಿದ್ದಾರೆ ಎಂದು ಬ್ರಿಟ್ಟಾಸ್ ಪರೋಕ್ಷವಾಗಿ ಬಿಜೆಪಿ ಸಂಸದ ಸುರೇಶ್ ಗೋಪಿಯನ್ನು ಉಲ್ಲೇಖಿಸಿದ್ದಾರೆ. ನಂತರ ಅವರು,“ನಾವು ನಿಮ್ಮ ವಿಷವನ್ನು ಕೇರಳದಿಂದ ದೂರವಿಟ್ಟಿದ್ದೇವೆ. ಆದಾಗ್ಯೂ, ಒಬ್ಬ ವ್ಯಕ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಶೀಘ್ರದಲ್ಲೇ ಆ ಖಾತೆಯನ್ನು ಸಹ ಮುಚ್ಚಲಾಗುವುದು.” ಎಂದು ಹೇಳಿದ್ದಾರೆ. ನಿಮ್ಮ ವಿಷವನ್ನು ಕೇರಳ

ಜಾನ್ ಬ್ರಿಟ್ಟಾಸ್ ಅವರ ಭಾಷಣದ ಆಯ್ದ ಭಾಗಗಳು:

“ಕಳೆದ ವರ್ಷವೊಂದರಲ್ಲೇ, ಕ್ರಿಶ್ಚಿಯನ್ನರ ಮೇಲೆ ಸುಮಾರು 700 ದಾಳಿಗಳು ನಡೆದಿವೆ. ಮಣಿಪುರದಲ್ಲಿ, ಅವರು 200 ಕ್ಕೂ ಹೆಚ್ಚು ಚರ್ಚ್‌ಗಳನ್ನು ಸುಟ್ಟುಹಾಕಿದರು. ಕಳೆದ ಎರಡು ಅಥವಾ ಮೂರು ದಿನಗಳಿಂದ ಬಿಜೆಪಿ ಇದ್ದಕ್ಕಿದ್ದಂತೆ ಕ್ರಿಶ್ಚಿಯನ್ನರು ಮತ್ತು ಮುನಂಬಮ್ ಪ್ರದೇಶದ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ನಾವು ಸ್ಟಾನ್ ಸ್ವಾಮಿಯನ್ನು ಮರೆಯಲು ಸಾಧ್ಯವೆ? ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ, ಸಹಾಯವಿಲ್ಲದೆ ಒಂದು ಹನಿ ನೀರು ಕುಡಿಯಲು ಸಾಧ್ಯವಾಗದ ಅವರಿಗೆ ಒಂದು ಸ್ಟ್ರಾ ಕೂಡಾ ನೀಡದೆ ಜೈಲಿನಲ್ಲಿ ಸಾಯಲು ಬಿಡಲಿಲ್ಲವೇ? ನಾವು ಗ್ರಹಾಂ ಸ್ಟೇನ್ಸ್ ಅವರನ್ನು ಮರೆಯಲು ಸಾಧ್ಯವೇ? ಅವರನ್ನು ಅವರ ಮಕ್ಕಳೊಂದಿಗೆ ಜೀವಂತವಾಗಿ ಸುಟ್ಟುಹಾಕಲಿಲ್ಲವೇ? ಇಂದಿಗೂ ದಾಳಿಗಳು ಮುಂದುವರೆದಿವೆ.”

“ಕೇವಲ ಮೂವತ್ತು ಬೆಳ್ಳಿಯ ತುಂಡುಗಳಿಗಾಗಿ ಯೇಸು ಕ್ರಿಸ್ತನಿಗೆ ದ್ರೋಹ ಮಾಡಿದ ಪಾತ್ರವೊಂದು ಬೈಬಲ್‌ನಲ್ಲಿದೆ. ಇಲ್ಲಿ ಕೆಲವರು ಹಾಗೆ ಇದ್ದಾರೆ. ಕೆಲವು ದಿನಗಳ ಹಿಂದೆ, ಕೆಲವು ವ್ಯಕ್ತಿಗಳು ಶಿಲುಬೆ ಮತ್ತು ಕ್ರಿಶ್ಚಿಯನ್ನರ ಬಗ್ಗೆ ಮಾತನಾಡಿದರು, ಆದರೆ ವಾಸ್ತವದಲ್ಲಿ, ಅವರು ಕ್ರಿಸ್ತನಿಗೆ ದ್ರೋಹ ಮಾಡಿದ ಯೂದನಂತಿದ್ದಾರೆ.”

“ಇತ್ತೀಚೆಗೆ, ನಾವು ಎಂಪುರಾನ್ ಚಿತ್ರದ ಬಗ್ಗೆ ಮಾತನಾಡಿದ್ದೆವು. ಆ ಚಿತ್ರದಲ್ಲಿ ಮುನ್ನಾ ಎಂಬ ಪಾತ್ರವಿದೆ. ಮುನ್ನಾ ಯಾರೆಂದು ನಿಮಗೆ ತಿಳಿದಿದೆಯೇ? ಆ ಪಾತ್ರವನ್ನು ನೀವು ಇಲ್ಲಿಯೇ(ಬಿಜೆಪಿ ಪೀಢಗಳ ಮೇಲೆ) ನೋಡಬಹುದು. ಕೇರಳದ ಜನರು ಈ ಮುನ್ನಾ ಪಾತ್ರಧಾರಿಯನ್ನು ಗುರುತಿಸುತ್ತಾರೆ. ಅದು ಕೇರಳದ ಇತಿಹಾಸ. ನಾವು ನಿಮ್ಮ ವಿಷವನ್ನು ನಮ್ಮ ರಾಜ್ಯದಿಂದ ದೂರವಿಟ್ಟಿದ್ದೇವೆ. ಹೌದು, ಒಬ್ಬ ವ್ಯಕ್ತಿ ಗೆದ್ದಿದ್ದಾನೆ, ವಿಧಾನಸಭೆಯಲ್ಲಿ ಕೂಡಾ ಒಂದು ಖಾತೆ ಇತ್ತು, ಅದನ್ನು ನಾವು ಮುಚ್ಚಿದ್ದೇವೆ. ಅದನ್ನು ಮುಚ್ಚಿದಂತೆ, ಶೀಘ್ರದಲ್ಲೇ ಲೋಕಸಭೆಯ ಈ ಖಾತೆಯನ್ನು ಸಹ ಮುಚ್ಚುತ್ತೇವೆ. ಕೇರಳದಲ್ಲಿ ಒಂದು ತಪ್ಪು ಸಂಭವಿಸಿದೆ, ಆದರೆ ನಾವು ಅದನ್ನು ಶೀಘ್ರದಲ್ಲೇ ಸರಿಪಡಿಸುತ್ತೇವೆ – ಚಿಂತಿಸುವ ಅಗತ್ಯವಿಲ್ಲ.”

ಬ್ರಿಟ್ಟಾಸ್ ಅವರ ಈ ಹೇಳಿಕೆ ಸಂಸದ ಸುರೇಶ್ ಗೋಪಿ ಅವರ ತ್ರಿಶೂರ್‌ ಕ್ಷೇತ್ರದ ಬಗ್ಗೆಯಾಗಿದೆ. ಅವರು ಕೇರಳದ ಮೊದಲ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು.

ಮುನಂಬಮ್ ಬಗ್ಗೆ ಭರವಸೆ:

ಬ್ರಿಟಸ್ ಮುನಂಬಮ್ ಪ್ರದೇಶದ ಜನರಿಗೆ ಇದೇ ವೇಳೆ ಭರವಸೆ ನೀಡಿದ್ದಾರೆ. “ಮುನಂಬಮ್‌ನಲ್ಲಿ ಯಾರೂ ತಮ್ಮ ಮನೆಯನ್ನು ಕಳೆದುಕೊಳ್ಳುವುದಿಲ್ಲ. ಇದು ಎಡಪಂಥೀಯ ಸರ್ಕಾರದ ಬದ್ಧತೆಯಾಗಿದೆ. ಐದು ಲಕ್ಷ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಶಕ್ತಿ ಮತ್ತು ಪ್ರಾಮಾಣಿಕತೆ ನಮಗಿದ್ದರೆ, ಮುನಂಬಮ್‌ನ ಜನರನ್ನು ರಕ್ಷಿಸುವ ಜವಾಬ್ದಾರಿಯೂ ನಮಗಿದೆ.” ಎಂದು ಘೋಷಿಸಿದ್ದಾರೆ.

“ನಾವು ಅದನ್ನು ಮಾಡಲಿದ್ದು, ನಮಗೆ ಯಾರ ಸಹಾನುಭೂತಿಯೂ ಅಗತ್ಯವಿಲ್ಲ. ಕೇರಳದಲ್ಲಿ ಯಾವುದೇ ಮಸೀದಿಯನ್ನು ಬಲವಂತವಾಗಿ ಮುಚ್ಚಲಾಗುವುದಿಲ್ಲ. ಯಾವುದೇ ಪೂಜಾ ಸ್ಥಳವನ್ನು ಮರೆಮಾಡಲಾಗುವುದಿಲ್ಲ. ಯಾರೂ ಭಯದಿಂದ ಬದುಕಬೇಕಾಗಿಲ್ಲ. ಕೇರಳದಲ್ಲಿ ಸಹೋದರತ್ವದ ವಾತಾವರಣವನ್ನು ನಾವು ಖಚಿತಪಡಿಸುತ್ತೇವೆ. ಅದು ಅಲ್ಲಿ ಅಸ್ತಿತ್ವದಲ್ಲಿದ್ದು, ಅದನ್ನು ಹೇಗೆ ನಿರ್ವಹಿಸಬೇಕೆಂದು ನಮಗೆ ತಿಳಿದಿದೆ. ನೀವು ಈಗ ಕ್ರಿಶ್ಚಿಯನ್ನರಿಗಾಗಿ ಮೊಸಳೆ ಕಣ್ಣೀರು ಸುರಿಸಿರಬಹುದು, ಆದರೆ ಕೇರಳದ ಜನರು ನಿಮ್ಮ ವಂಚನೆಯನ್ನು ನೋಡುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ.”

ಬಿಜೆಪಿಯ ಕೋಮು ರಾಜಕೀಯದ ಟೀಕೆ:

ದೇಶದಲ್ಲಿ ನಿರಾಶ್ರಿತರಾಗಿರುವ ಜನರ ದುಃಸ್ಥಿತಿಯನ್ನು ಎತ್ತಿ ತೋರಿಸಿದ ಜಾನ್ ಬ್ರಿಟ್ಟಾಸ್, “ನೀವು ಈ ಮಸೂದೆಯನ್ನು ಮಂಡಿಸುವಾಗ ‘ಮುನಂಬಂ, ಮುನಂಬಂ’ ಎಂದು ಪುನರಾವರ್ತಿಸುತ್ತಿದ್ದೀರಿ. ಆದರೆ ಉತ್ತರ ಭಾರತದಲ್ಲಿ, ನೀವು ಹತ್ತಾರು ಸಾವಿರ ಜನರನ್ನು ಸ್ಥಳಾಂತರಗೊಳಿಸಿ, ನಿರಾಶ್ರಿತರನ್ನಾಗಿ ಮಾಡಿದ್ದೀರಿ. ಮಣಿಪುರದಲ್ಲಿ 50,000 ಕ್ಕೂ ಹೆಚ್ಚು ಜನರು ಈಗ ನಿರಾಶ್ರಿತರಾಗಿದ್ದಾರೆ. ಅನೇಕರು ದೇಶವನ್ನು ಬಿಟ್ಟು ಓಡಿಹೋಗಿದ್ದಾರೆ. ಅವರ ಬಗ್ಗೆ ನೀವು ಏನೂ ಹೇಳುತ್ತಿಲ್ಲ. ನೀವು ಹಲವಾರು ಚರ್ಚುಗಳನ್ನು ನಾಶಪಡಿಸಿದ್ದೀರಿ. ನೀವು ಎಂಪುರಾನ್‌ನ ಮುನ್ನಾ ಪಾತ್ರಧಾರಿಯಾಗಿದ್ದೀರಿ. ಆದರೆ ಕೇರಳದ ಜನರು ನಿಮ್ಮಲ್ಲಿರುವ ಈ ಮುನ್ನಾಗಳನ್ನು ಗುರುತಿಸುವ ಶಕ್ತಿಯನ್ನು ಹೊಂದಿದ್ದಾರೆ.”

“ನಿಜವಾಗಿಯೂ ಭಾರತೀಯ ಸಂವಿಧಾನವನ್ನು ನೀವು ನಂಬಿದರೆ, ಈ ಮಸೂದೆಯನ್ನು ಹಿಂತೆಗೆದುಕೊಳ್ಳಿ. ನೀವು ಕೋಮು ಸಾಮರಸ್ಯವನ್ನು ಬಯಸಿದರೆ, ಎಲ್ಲಾ ಜನರನ್ನು ಮತ್ತು ಎಲ್ಲಾ ನಂಬಿಕೆಗಳನ್ನು ಸಮಾನವಾಗಿ ಪರಿಗಣಿಸುವಲ್ಲಿ ನಂಬಿಕೆಯಿದ್ದರೆ, ಈ ಮಸೂದೆಯನ್ನು ಹಿಂತೆಗೆದುಕೊಳ್ಳಿ” ಎಂದು ಬ್ರಿಟ್ಟಾಸ್ ನೇರ ಮನವಿಯೊಂದಿಗೆ ತನ್ನ ಭಾಷಣವನ್ನು ಮುಕ್ತಾಯಗೊಳಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...