Homeಮುಖಪುಟಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

- Advertisement -
- Advertisement -

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ. 

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಗುರುವಾರ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಂದಿನ ಮತ್ತು 13 ನೇ ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನಲ್ಲಿ ಸುಮಾರು 10 ದಿನಗಳ ಸಸ್ಪೆನ್ಸ್, ಆಂತರಿಕ ಲಾಬಿ ಮತ್ತು ತೀವ್ರ ಊಹಾಪೋಹಗಳಿಗೆ ಅಂತ್ಯ ಹಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಾ ದಾಸ್ ಮುನ್ಷಿ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ಹೊಸ ನಾಯಕರ ನೇಮಕಾತಿಗೆ ಅಧಿಕಾರ ನೀಡಿದ್ದು, ಎಲ್ಲಾ ಚರ್ಚೆಗಳ ನಂತರ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಲೆಜಿಸ್ಲೇಟಿವ್ ಪಾರ್ಟಿ (ಸಿಎಲ್‌ಪಿ) ನಾಯಕರಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದರು.

ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಸತೀಶನ್ ಅವರು ಯುಡಿಎಫ್ ಅಭಿಯಾನವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸೇರಿದಂತೆ ಮಿತ್ರಪಕ್ಷಗಳ ಬಲವಾದ ಬೆಂಬಲವನ್ನು ಪಡೆದಿದ್ದರು. 

ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರಂತಹ ಹಿರಿಯ ನಾಯಕರ ನಡುವಿನ ಸ್ಪರ್ಧೆಯ ನಂತರ ಹೈಕಮಾಂಡ್ ಅವರನ್ನು ಆಯ್ಕೆ ಮಾಡಿದೆ.

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ವಿ.ಡಿ. ಸತೀಶನ್ ಅವರು ಈ ಜವಾಬ್ದಾರಿಯನ್ನು “ದೊಡ್ಡ ಜವಾಬ್ದಾರಿ ಮತ್ತು ದೈವಿಕ ನಿಯೋಜನೆ” ಎಂದು ಬಣ್ಣಿಸಿದ್ದಾರೆ. 

ಪಕ್ಷದ ನಾಯಕತ್ವ, ಯುಡಿಎಫ್ ಮಿತ್ರಪಕ್ಷಗಳು, ಕಾರ್ಯಕರ್ತರು ಮತ್ತು ಕೇರಳ ಜನತೆಯ ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸಿದ ಅವರು, ಈ ಗೆಲುವು ಸಾಮೂಹಿಕ ಪ್ರಯತ್ನದ ಫಲವೆಂದು ಹೇಳಿದರು. 

ರಮೇಶ್ ಚೆನ್ನಿತ್ತಲ ಅವರನ್ನು “ಪ್ರೀತಿಯ ನಾಯಕ” ಎಂದು ಉಲ್ಲೇಖಿಸಿದ ಅವರು, ಕೆ.ಸಿ. ವೇಣುಗೋಪಾಲ್ ಅವರಿಗೂ ವಿಶೇಷ ಮನ್ನಣೆ ನೀಡಿದರು.

ಕೇರಳ ಪ್ರಸ್ತುತ “ಸಂಕೀರ್ಣ ಪರಿಸ್ಥಿತಿ”ಯನ್ನು ಎದುರಿಸುತ್ತಿದೆ ಎಂದು ಒತ್ತಿ ಹೇಳಿದ ಸತೀಶನ್, ಹೊಸ ಸರ್ಕಾರ ಜನರ ಜೀವನ ಮಟ್ಟ ಸುಧಾರಿಸಲು ಸಕ್ರಿಯವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ವಿರೋಧ ಪಕ್ಷಗಳ ಸಹಕಾರವನ್ನೂ ಅವರು ಕೋರಿದರು.ಕೆ.ಸಿ. ವೇಣುಗೋಪಾಲ್ ಅವರು ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುತ್ತಾ, “ಮೊದಲು ಕಾಂಗ್ರೆಸ್” ಎಂದು ಹೇಳಿ ಸತೀಶನ್ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದರು. ಆದರೆ ರಮೇಶ್ ಚೆನ್ನಿತ್ತಲ ಅವರು ನಾಯಕತ್ವ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.

ವಿ.ಡಿ. ಸತೀಶನ್ ಅವರು ಅನುಭವಿ ರಾಜಕಾರಣಿ ಮತ್ತು ವಕೀಲರಾಗಿದ್ದು, ಪರವೂರು ಕ್ಷೇತ್ರದಿಂದ ಬಹುಬಾರಿ ಆಯ್ಕೆಯಾಗಿದ್ದಾರೆ. ಅವರ ನೇತೃತ್ವದಲ್ಲಿ ಕೇರಳದಲ್ಲಿ ಹೊಸ ಯುಗ ಆರಂಭವಾಗುವ ನಿರೀಕ್ಷೆ ಹೆಚ್ಚಿದೆ. ಪ್ರಮಾಣ ವಚನ ಸಮಾರಂಭದ ದಿನಾಂಕ ಶೀಘ್ರದಲ್ಲಿ ಪ್ರಕಟವಾಗಲಿದೆ.

ವಿ.ಡಿ. ಸತೀಶನ್ : ಕೇರಳದ 13ನೇ ಮುಖ್ಯಮಂತ್ರಿ, ವಿದ್ಯಾರ್ಥಿ ಚಳವಳಿಯಿಂದ ಅಧಿಕಾರದ ಶೃಂಗಕ್ಕೆ

ವಿದ್ಯಾರ್ಥಿ ಚಳವಳಿಯಿಂದ ಆರಂಭಿಸಿ ದಶಕಗಳ ಕಾಲದ ಶಾಸಕಾಂಗ ಅನುಭವ, ವಕೀಲ ವೃತ್ತಿ ಮತ್ತು ಆಕ್ರಮಣಕಾರಿ ವಿರೋಧ ಪಕ್ಷದ ನಾಯಕತ್ವದ ಮೂಲಕ ಸತೀಶನ್ ಅವರು ರಾಜ್ಯ ರಾಜಕೀಯದ ಪ್ರಮುಖ ಮುಖವಾಗಿ ಬೆಳೆದಿದ್ದಾರೆ.

ದಿವಂಗತ ಕೆ. ದಾಮೋದರ ಮೆನನ್ ಮತ್ತು ವಿ. ವಿಲಾಸಿನಿ ಅಮ್ಮನವರ ಮಗನಾಗಿ ಜನಿಸಿದ ವಿ.ಡಿ. ಸತೀಶನ್, ನೆಟ್ಟೂರು ಮತ್ತು ಪನಂಗಾಡ್‌ನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ತೇವರದ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡಿದ ನಂತರ ರಾಜಗಿರಿ ಸಮಾಜ ವಿಜ್ಞಾನ ಕಾಲೇಜಿನಿಂದ ಸಮಾಜ ಸೇವೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ, ತಿರುವನಂತಪುರದ ಕಾನೂನು ಅಕಾಡೆಮಿಯಿಂದ ಎಲ್‌ಎಲ್‌ಬಿ ಮತ್ತು ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್‌ಎಲ್‌ಎಂ ಪದವಿ ಪಡೆದರು. 

ಕೇರಳ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದ ಸತೀಶನ್, 2001ರಲ್ಲಿ ಉತ್ತರ ಪರವೂರಿನಿಂದ ಕೇರಳ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು. ಅಂದಿನಿಂದಲೂ ಅವರು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ನಲ್ಲಿ ಪ್ರಮುಖ ವ್ಯಕ್ತಿಯಾಗಿ ಮುಂದುವರಿದಿದ್ದಾರೆ.

ಅವರ ರಾಜಕೀಯ ಪಯಣ ವಿದ್ಯಾರ್ಥಿ ದಿನಗಳಲ್ಲೇ ಆರಂಭವಾಯಿತು. ಕೇರಳ ವಿದ್ಯಾರ್ಥಿ ಒಕ್ಕೂಟ (ಕೆಎಸ್‌ಯು) ಮೂಲಕ ಚಳವಳಿಗೆ ತೊಡಗಿದ ಅವರು, ಎಂಜಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ)ನೊಂದಿಗೆ ಸಂಬಂಧ ಬೆಳೆಸಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ ಮತ್ತು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿ ಪಕ್ಷದಲ್ಲಿ ಬಲವಾದ ಸ್ಥಾನವನ್ನು ಗಳಿಸಿದರು.

ತಮ್ಮ ವಾಗ್ಮಿತೆ ಮತ್ತು ಶಾಸಕಾಂಗ ಹಸ್ತಕ್ಷೇಪಗಳಿಗೆ ಹೆಸರುವಾಸಿಯಾದ ಸತೀಶನ್, 2021ರಿಂದ 2026ರವರೆಗೆ ವಿರೋಧ ಪಕ್ಷದ ನಾಯಕರಾಗಿ ತೀವ್ರ ಆಕ್ರಮಣಕಾರಿ ನಿಲುವು ತಳೆದಿದ್ದರು. ಈ ಅವಧಿಯಲ್ಲಿ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದ ಎರಡಕ್ಕೂ ವಿರುದ್ಧ ದೃಢ ನಿಲುವು ತೆಗೆದುಕೊಂಡ ಅವರು, ಚುನಾವಣಾ ಲಾಭಕ್ಕಾಗಿ ಜಾತ್ಯತೀತ ಮೌಲ್ಯಗಳನ್ನು ರಾಜಿ ಮಾಡಿಕೊಳ್ಳಬಾರದು ಎಂದು ಪದೇ ಪದೇ ಒತ್ತಾಯಿಸಿದರು. 

ಆಡಳಿತಾರೂಢ ಸಿಪಿಐ(ಎಂ) ಸರ್ಕಾರವನ್ನು ರಾಜಕೀಯ ಅವಕಾಶವಾದ ಮತ್ತು ತುಷ್ಟೀಕರಣ ತಂತ್ರಗಳ ಆರೋಪದೊಂದಿಗೆ ತೀವ್ರವಾಗಿ ಟೀಕಿಸಿದ ಅವರು, ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ “ಬಹುಸಂಖ್ಯಾತ ಕೋಮುವಾದ”ವನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿದ್ದರು. 

ವಿರೋಧ ಪಕ್ಷದ ನಾಯಕರಾಗಿ ಯುಡಿಎಫ್‌ನ ಪುನರ್ನಿರ್ಮಾಣಕ್ಕೆ ನಾಯಕತ್ವ ನೀಡಿದ ಸತೀಶನ್, 2026ರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ನಿರ್ಣಾಯಕ ಬಹುಮತ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ರಾಜಕೀಯದ ಜೊತೆಗೆ ಟ್ರೇಡ್ ಯೂನಿಯನ್ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದ ಅವರು, FACT, ಕೊಚ್ಚಿನ್ ರಿಫೈನರೀಸ್, TELK ಸೇರಿದಂತೆ ಹಲವು ಸಾರ್ವಜನಿಕ ಮತ್ತು ಖಾಸಗಿ ಕೈಗಾರಿಕೆಗಳ ಕಾರ್ಮಿಕ ಸಂಘಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 

ಅತ್ಯಾಸಕ್ತಿಯ ಓದುಗ, ಪ್ರಕೃತಿ ಪ್ರೇಮಿ ಮತ್ತು ಚಾರಣಿಗರಾದ ಸತೀಶನ್ ಅವರು ಶಾಸಕಾಂಗ ಕಾರ್ಯಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವುಗಳಲ್ಲಿ ಎ.ಎ. ರಹೀಮ್ ಸ್ಮಾರಕ ಪ್ರಶಸ್ತಿ, ಚೆರಿಯನ್ ಜೆ. ಕಪ್ಪನ್ ಸ್ಮಾರಕ ಪ್ರಶಸ್ತಿ ಮತ್ತು ಫೋಕಾನಾ, ಗ್ಲೋಬಲ್ ಮಲಯಾಳಿ ಕೌನ್ಸಿಲ್‌ನಂತಹ ಸಂಸ್ಥೆಗಳ ಗೌರವಗಳು ಸೇರಿವೆ. 

ಉತ್ತರ ಪರವೂರಿನಲ್ಲಿ ಶೈಕ್ಷಣಿಕ, ಆರೋಗ್ಯ ಮತ್ತು ಅಭಿವೃದ್ಧಿ ಉಪಕ್ರಮಗಳ ಮೂಲಕ ಬಲವಾದ ಕ್ಷೇತ್ರದ ಬೆಂಬಲವನ್ನು ವಿ.ಡಿ. ಸತೀಶನ್ ಕಾಯ್ದುಕೊಂಡಿದ್ದಾರೆ. 

1957ರಲ್ಲಿ ಕೇರಳ ರಾಜ್ಯ ರಚನೆಯಾದಾಗಿನಿಂದ ಒಟ್ಟು 12 ಮುಖ್ಯಮಂತ್ರಿಗಳನ್ನು ಕಂಡ ಕೇರಳವು ಈಗ ವಿ.ಡಿ. ಸತೀಶನ್ ಅವರ ಮೂಲಕ 13ನೇ ಮುಖ್ಯಮಂತ್ರಿಯನ್ನು ಪಡೆದಿದೆ. ಇದರೊಂದಿಗೆ ರಾಜ್ಯ ರಾಜಕೀಯದಲ್ಲಿ ಹೊಸ ನಿರೀಕ್ಷೆಗಳು ಹುಟ್ಟಿವೆ.

ಕೇರಳದಲ್ಲಿ ಈವರೆಗೆ ಅಧಿಕಾರ ನಡೆಸಿದ ಮುಖ್ಯಮಂತ್ರಿಗಳು ಮತ್ತು ಕಾಲಘಟ್ಟ

ಇ.ಎಂ.ಎಸ್. ನಂಬೂದಿರಿಪಾಡ್ (ಸಿಪಿಐ) — 1957–1959

ಪತ್ತಂ ಎ. ಥಾನು ಪಿಳ್ಳೈ (ಪಿಎಸ್‌ಪಿ) — 1960–1962

ಆರ್. ಶಂಕರ್ (ಐಎನ್‌ಸಿ) — 1962–1964

ಇ.ಎಂ.ಎಸ್. ನಂಬೂದಿರಿಪಾಡ್ (ಸಿಪಿಐ(ಎಂ)) — 1967–1969

ಸಿ. ಅಚ್ಯುತ ಮೇನನ್ (ಸಿಪಿಐ) — 1969–1970

ಸಿ. ಅಚ್ಯುತ ಮೇನನ್ (ಸಿಪಿಐ) — 1970–1977

ಕೆ. ಕರುಣಾಕರನ್ (ಐಎನ್‌ಸಿ) — 1977

ಎ.ಕೆ. ಆಂಟನಿ (ಐಎನ್‌ಸಿ) — 1977–1978

ಪಿ.ಕೆ. ವಾಸುದೇವನ್ ನಾಯರ್ (ಸಿಪಿಐ) — 1978–1979

ಸಿ.ಹೆಚ್. ಮುಹಮ್ಮದ್ ಕೋಯ (ಐಯುಎಂಎಲ್) — 1979

ಇ.ಕೆ. ನಾಯನಾರ್ (ಸಿಪಿಐ(ಎಂ)) — 1980–1981

ಕೆ. ಕರುಣಾಕರನ್ (ಐಎನ್‌ಸಿ) — 1981–1982

ಕೆ. ಕರುಣಾಕರನ್ (ಐಎನ್‌ಸಿ) — 1982–1987

ಇ.ಕೆ. ನಾಯನಾರ್ (ಸಿಪಿಐ(ಎಂ)) — 1987–1991

ಕೆ. ಕರುಣಾಕರನ್ (ಐಎನ್‌ಸಿ) — 1991–1995

ಎ.ಕೆ. ಆಂಟನಿ (ಐಎನ್‌ಸಿ) — 1995–1996

ಇ.ಕೆ. ನಾಯನಾರ್ (ಸಿಪಿಐ(ಎಂ)) — 1996–2001

ಎ.ಕೆ. ಆಂಟನಿ (ಐಎನ್‌ಸಿ) — 2001–2004

ಉಮ್ಮನ್ ಚಾಂಡಿ (ಐಎನ್‌ಸಿ) — 2004–2006

ವಿ.ಎಸ್. ಅಚ್ಯುತಾನಂದನ್ (ಸಿಪಿಐ(ಎಂ)) — 2006–2011

ಉಮ್ಮನ್ ಚಾಂಡಿ (ಐಎನ್‌ಸಿ) — 2011–2016

ಪಿನರಾಯಿ ವಿಜಯನ್ (ಸಿಪಿಐ(ಎಂ)— 2016–2021

ಪಿನರಾಯಿ ವಿಜಯನ್ (ಸಿಪಿಐ(ಎಂ) — 2021–2026 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...