Homeಮುಖಪುಟಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

- Advertisement -
- Advertisement -

ನೀತಿ ಆಯೋವು ನಾಲ್ಕನೇ ಆರೋಗ್ಯ ಸೂಚ್ಯಂಕ ಬಿಡುಗಡೆ ಮಾಡಿದ್ದು, ದೊಡ್ಡ ರಾಜ್ಯಗಳ ಪೈಕಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರಸ್ಥಾನದಲ್ಲಿದೆ. ಆದರೆ ಉತ್ತರ ಪ್ರದೇಶ ರಾಜ್ಯವು ಆರೋಗ್ಯ ಕ್ಷಮತೆಯಲ್ಲಿ ಕಡೆಯ ಸ್ಥಾನದಲ್ಲಿದೆ.

ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಅತ್ಯುತ್ತಮ ರಾಜ್ಯಗಳಾಗಿ ಹೊರಹೊಮ್ಮಿವೆ ಎಂದು ಸರ್ಕಾರದ ತಜ್ಞರು ಹೇಳಿದ್ದಾರೆ.

ಆರೋಗ್ಯ ನಿಯತಾಂಕಗಳಲ್ಲಿ ಕಳಪೆ ಪ್ರದರ್ಶನ ನೀಡಿದ ರಾಜ್ಯಗಳ ಪೈಕಿ ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಆದರೆ 2018-19ಕ್ಕೆ ಹೋಲಿಸಿದೆ 2019-20ರ ಅವಧಿಯಲ್ಲಿ ಉತ್ತರ ಪ್ರದೇಶವು ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಗಮನ ಸೆಳೆದಿದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಪೈಕಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಣ್ಣ ರಾಜ್ಯಗಳ ಪೈಕಿ, ಮಿಜೋರಾಂ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಆರೋಗ್ಯ ಕ್ಷಮತೆಯಲ್ಲಿ ಅಭಿವೃದ್ಧಿ ಕಾಣಬೇಕಾಗಿದೆ. ಆದರೆ ಕಾರ್ಯಕ್ಷಮತೆಯ ವಿಷಯದಲ್ಲಿ ಉತ್ತಮ ಪ್ರದರ್ಶನ ತೋರುತ್ತಿವೆ.

ಒಟ್ಟಾರೆಯಾಗಿ ಸತತ ನಾಲ್ಕನೇ ಸುತ್ತಿನಲ್ಲಿ ಕೇರಳ ಅತ್ಯುತ್ತಮ ಪ್ರದರ್ಶನ ತೋರಿದೆ. ವರದಿಯ ಪ್ರಕಾರ, ಕೇರಳ ಮತ್ತು ತಮಿಳುನಾಡು ರಾಜ್ಯಗಳು 2019-20ಕ್ಕೆ ಹೋಲಿಸಿದರೆ ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರ ಸ್ಥಾನದಲ್ಲಿವೆ. ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಕ್ರಮವಾಗಿ ಹನ್ನೆರಡನೇ ಮತ್ತು ಎಂಟನೇ ಸ್ಥಾನದಲ್ಲಿವೆ.

ತೆಲಂಗಾಣವು ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಎರಡೂ ವಿಭಾಗಗಳಲ್ಲೂ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ರಾಜಸ್ಥಾನ ದುರ್ಬಲ ಪ್ರದರ್ಶನ ತೋರಿದೆ. ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ಮತ್ತು ತ್ರಿಪುರಾ ಕಾರ್ಯಕ್ಷಮತೆಯಲ್ಲಿ ಗಮನ ಸೆಳೆದಿವೆ. ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಸುಧಾರಣೆಗಳನ್ನು ಕಂಡಿವೆ.


ಇದನ್ನೂ ಓದಿರಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...