Homeಮುಖಪುಟಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

- Advertisement -
- Advertisement -

ನೀತಿ ಆಯೋವು ನಾಲ್ಕನೇ ಆರೋಗ್ಯ ಸೂಚ್ಯಂಕ ಬಿಡುಗಡೆ ಮಾಡಿದ್ದು, ದೊಡ್ಡ ರಾಜ್ಯಗಳ ಪೈಕಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರಸ್ಥಾನದಲ್ಲಿದೆ. ಆದರೆ ಉತ್ತರ ಪ್ರದೇಶ ರಾಜ್ಯವು ಆರೋಗ್ಯ ಕ್ಷಮತೆಯಲ್ಲಿ ಕಡೆಯ ಸ್ಥಾನದಲ್ಲಿದೆ.

ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಅತ್ಯುತ್ತಮ ರಾಜ್ಯಗಳಾಗಿ ಹೊರಹೊಮ್ಮಿವೆ ಎಂದು ಸರ್ಕಾರದ ತಜ್ಞರು ಹೇಳಿದ್ದಾರೆ.

ಆರೋಗ್ಯ ನಿಯತಾಂಕಗಳಲ್ಲಿ ಕಳಪೆ ಪ್ರದರ್ಶನ ನೀಡಿದ ರಾಜ್ಯಗಳ ಪೈಕಿ ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಆದರೆ 2018-19ಕ್ಕೆ ಹೋಲಿಸಿದೆ 2019-20ರ ಅವಧಿಯಲ್ಲಿ ಉತ್ತರ ಪ್ರದೇಶವು ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಗಮನ ಸೆಳೆದಿದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಪೈಕಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಣ್ಣ ರಾಜ್ಯಗಳ ಪೈಕಿ, ಮಿಜೋರಾಂ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಆರೋಗ್ಯ ಕ್ಷಮತೆಯಲ್ಲಿ ಅಭಿವೃದ್ಧಿ ಕಾಣಬೇಕಾಗಿದೆ. ಆದರೆ ಕಾರ್ಯಕ್ಷಮತೆಯ ವಿಷಯದಲ್ಲಿ ಉತ್ತಮ ಪ್ರದರ್ಶನ ತೋರುತ್ತಿವೆ.

ಒಟ್ಟಾರೆಯಾಗಿ ಸತತ ನಾಲ್ಕನೇ ಸುತ್ತಿನಲ್ಲಿ ಕೇರಳ ಅತ್ಯುತ್ತಮ ಪ್ರದರ್ಶನ ತೋರಿದೆ. ವರದಿಯ ಪ್ರಕಾರ, ಕೇರಳ ಮತ್ತು ತಮಿಳುನಾಡು ರಾಜ್ಯಗಳು 2019-20ಕ್ಕೆ ಹೋಲಿಸಿದರೆ ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರ ಸ್ಥಾನದಲ್ಲಿವೆ. ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಕ್ರಮವಾಗಿ ಹನ್ನೆರಡನೇ ಮತ್ತು ಎಂಟನೇ ಸ್ಥಾನದಲ್ಲಿವೆ.

ತೆಲಂಗಾಣವು ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಎರಡೂ ವಿಭಾಗಗಳಲ್ಲೂ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ರಾಜಸ್ಥಾನ ದುರ್ಬಲ ಪ್ರದರ್ಶನ ತೋರಿದೆ. ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ಮತ್ತು ತ್ರಿಪುರಾ ಕಾರ್ಯಕ್ಷಮತೆಯಲ್ಲಿ ಗಮನ ಸೆಳೆದಿವೆ. ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಸುಧಾರಣೆಗಳನ್ನು ಕಂಡಿವೆ.


ಇದನ್ನೂ ಓದಿರಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...