Homeಮುಖಪುಟಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

- Advertisement -
- Advertisement -

ನೀತಿ ಆಯೋವು ನಾಲ್ಕನೇ ಆರೋಗ್ಯ ಸೂಚ್ಯಂಕ ಬಿಡುಗಡೆ ಮಾಡಿದ್ದು, ದೊಡ್ಡ ರಾಜ್ಯಗಳ ಪೈಕಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರಸ್ಥಾನದಲ್ಲಿದೆ. ಆದರೆ ಉತ್ತರ ಪ್ರದೇಶ ರಾಜ್ಯವು ಆರೋಗ್ಯ ಕ್ಷಮತೆಯಲ್ಲಿ ಕಡೆಯ ಸ್ಥಾನದಲ್ಲಿದೆ.

ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಅತ್ಯುತ್ತಮ ರಾಜ್ಯಗಳಾಗಿ ಹೊರಹೊಮ್ಮಿವೆ ಎಂದು ಸರ್ಕಾರದ ತಜ್ಞರು ಹೇಳಿದ್ದಾರೆ.

ಆರೋಗ್ಯ ನಿಯತಾಂಕಗಳಲ್ಲಿ ಕಳಪೆ ಪ್ರದರ್ಶನ ನೀಡಿದ ರಾಜ್ಯಗಳ ಪೈಕಿ ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಆದರೆ 2018-19ಕ್ಕೆ ಹೋಲಿಸಿದೆ 2019-20ರ ಅವಧಿಯಲ್ಲಿ ಉತ್ತರ ಪ್ರದೇಶವು ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಗಮನ ಸೆಳೆದಿದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಪೈಕಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಣ್ಣ ರಾಜ್ಯಗಳ ಪೈಕಿ, ಮಿಜೋರಾಂ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಆರೋಗ್ಯ ಕ್ಷಮತೆಯಲ್ಲಿ ಅಭಿವೃದ್ಧಿ ಕಾಣಬೇಕಾಗಿದೆ. ಆದರೆ ಕಾರ್ಯಕ್ಷಮತೆಯ ವಿಷಯದಲ್ಲಿ ಉತ್ತಮ ಪ್ರದರ್ಶನ ತೋರುತ್ತಿವೆ.

ಒಟ್ಟಾರೆಯಾಗಿ ಸತತ ನಾಲ್ಕನೇ ಸುತ್ತಿನಲ್ಲಿ ಕೇರಳ ಅತ್ಯುತ್ತಮ ಪ್ರದರ್ಶನ ತೋರಿದೆ. ವರದಿಯ ಪ್ರಕಾರ, ಕೇರಳ ಮತ್ತು ತಮಿಳುನಾಡು ರಾಜ್ಯಗಳು 2019-20ಕ್ಕೆ ಹೋಲಿಸಿದರೆ ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರ ಸ್ಥಾನದಲ್ಲಿವೆ. ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಕ್ರಮವಾಗಿ ಹನ್ನೆರಡನೇ ಮತ್ತು ಎಂಟನೇ ಸ್ಥಾನದಲ್ಲಿವೆ.

ತೆಲಂಗಾಣವು ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಎರಡೂ ವಿಭಾಗಗಳಲ್ಲೂ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ರಾಜಸ್ಥಾನ ದುರ್ಬಲ ಪ್ರದರ್ಶನ ತೋರಿದೆ. ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ಮತ್ತು ತ್ರಿಪುರಾ ಕಾರ್ಯಕ್ಷಮತೆಯಲ್ಲಿ ಗಮನ ಸೆಳೆದಿವೆ. ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಸುಧಾರಣೆಗಳನ್ನು ಕಂಡಿವೆ.


ಇದನ್ನೂ ಓದಿರಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...