Homeಅಂತರಾಷ್ಟ್ರೀಯವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಈಗ ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ಗುರುತಿಸಿರುವ ವಿಶ್ವದ 50 ಉನ್ನತ ಚಿಂತಕರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ.

ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್, ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಆಫ್ರಿಕನ್ ಅಮೆರಿಕನ್ ಕಾದಂಬರಿಕಾರ್ತಿ ಮೂರು ಬಾರಿ ಹ್ಯೂಗೋ ಪ್ರಶಸ್ತಿ ವಿಜೇತೆ ಎನ್. ಕೆ. ಜೆಮಿಸಿನ್, ಐರಿಶ್ ನಟಿ ಸ್ಯಾಲಿ ರೂನಿ ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಸೇರಿದ್ದಾರೆ.

ಕಳೆದ ನಾಲ್ಕು ದಶಕಗಳಲ್ಲಿ ಹೆಚ್ಚಿನ ಭಾಗ ಭಾರತದಲ್ಲೇ ಇರುವ ಸ್ಕಾಟಿಷ್ ಇತಿಹಾಸಕಾರ ಡಾಲ್ರಿಂಪಲ್ ಅವರನ್ನು ಬಿಟ್ಟರೆ, ಈ ಪಟ್ಟಿಯಲ್ಲಿ ಇಪ್ಪತ್ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.


ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ


ನಿಯತಕಾಲಿಕವು ತನ್ನ ಮುಂದಿನ ಸಂಚಿಕೆಯಲ್ಲಿ (ಸೆಪ್ಟೆಂಬರ್ 1) ವರ್ಷದ ಉನ್ನತ ಚಿಂತಕ ಮತ್ತು ಟಾಪ್ -10 ಚಿಂತಕರನ್ನು ಹೆಸರಿಸಲಿದೆ. ಆಯ್ಕೆಯು ಓದುಗರ ಮತಗಳು ಮತ್ತು ಸಂಪಾದಕೀಯ ಸಮಿತಿಯ ಆಲೋಚನೆಗಳನ್ನು ಆಧರಿಸಿರುತ್ತದೆ.

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದುದ್ದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಕೊರೊನಾ ಸೋಂಕು ಚೀನಾದಲ್ಲಿ ವರದಿಯಾಗುತ್ತಿದ್ದಂತೆ ಕೇರಳವು ಯಾವುದೇ ಸಮಯ ವ್ಯರ್ಥ ಮಾಡಿರಲಿಲ್ಲ. ಮುಂಬರುವ ಸವಾಲುಗಳನ್ನು ಎದುರಿಸಲು ತಜ್ಞರ ಸಲಹೆ ಪಡೆದು ಅದಕ್ಕೆ ಬೇಕಾದ ಮುನ್ನೆಚ್ಚರಿಕೆಗಳನ್ನು ರಾಜ್ಯವು ತೆಗೆದುಕೊಂಡಿತು. ಅದರಂತೆ ಮೊದಲ ಕೊರೊನಾ ಪ್ರಕರಣವು ಜನವರಿ 27 ರಂದು ಕೇರಳದಲ್ಲಿ ವರದಿಯಾದಾಗಲೇ ವೈರಸ್ ಎದುರಿಸಲು ರಾಜ್ಯವು ಸಿದ್ಧವಾಗಿತ್ತು.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಪ್ರೋಟೋಕಾಲ್ ಅನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರಿಂದ ಪರೀಕ್ಷೆ, ಜಾಡು, ಪ್ರತ್ಯೇಕಿಸುವಿಕೆ ಮತ್ತು ಬೆಂಬಲ ಮತ್ತು ಬ್ರೇಕ್ ದಿ ಚೈನ್ ಅಭಿಯಾನಗಳು ರಾಜ್ಯದಾದ್ಯಂತ ನಡೆದಿತ್ತು.

ಕೇರಳದಲ್ಲಿ 2018 ರ ನಿಫಾ ವೈರಸ್ ಅನ್ನು ನಿಭಾಯಿಸಿದರಿಂದ ಗಳಿಸಿದ ಅನುಭವದಿಂದ ಅವರಿಗೆ ಬಹಳ ಸಹಾಯವಾಯಿತು.

ಪ್ರಸ್ತುತ ಕೊರೊನಾ ವೈರಸ್‌ನಿಂದಾಗಿ ಉಂಟಾದ ಸಾವಿನ ಪ್ರಮಾಣವು ಕೇರಳದಲ್ಲಿ ಶೇಕಡಾ 0.3 ರಷ್ಟಿದ್ದರೆ, ಭಾರತದ ಉಳಿದ ಭಾಗಗಳಲ್ಲಿ ಇದು ಶೇಕಡಾ 2.25 ಕ್ಕಿಂತ ಹೆಚ್ಚಿದೆ.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...