Homeಅಂತರಾಷ್ಟ್ರೀಯವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಈಗ ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ಗುರುತಿಸಿರುವ ವಿಶ್ವದ 50 ಉನ್ನತ ಚಿಂತಕರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ.

ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್, ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಆಫ್ರಿಕನ್ ಅಮೆರಿಕನ್ ಕಾದಂಬರಿಕಾರ್ತಿ ಮೂರು ಬಾರಿ ಹ್ಯೂಗೋ ಪ್ರಶಸ್ತಿ ವಿಜೇತೆ ಎನ್. ಕೆ. ಜೆಮಿಸಿನ್, ಐರಿಶ್ ನಟಿ ಸ್ಯಾಲಿ ರೂನಿ ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಸೇರಿದ್ದಾರೆ.

ಕಳೆದ ನಾಲ್ಕು ದಶಕಗಳಲ್ಲಿ ಹೆಚ್ಚಿನ ಭಾಗ ಭಾರತದಲ್ಲೇ ಇರುವ ಸ್ಕಾಟಿಷ್ ಇತಿಹಾಸಕಾರ ಡಾಲ್ರಿಂಪಲ್ ಅವರನ್ನು ಬಿಟ್ಟರೆ, ಈ ಪಟ್ಟಿಯಲ್ಲಿ ಇಪ್ಪತ್ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.


ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ


ನಿಯತಕಾಲಿಕವು ತನ್ನ ಮುಂದಿನ ಸಂಚಿಕೆಯಲ್ಲಿ (ಸೆಪ್ಟೆಂಬರ್ 1) ವರ್ಷದ ಉನ್ನತ ಚಿಂತಕ ಮತ್ತು ಟಾಪ್ -10 ಚಿಂತಕರನ್ನು ಹೆಸರಿಸಲಿದೆ. ಆಯ್ಕೆಯು ಓದುಗರ ಮತಗಳು ಮತ್ತು ಸಂಪಾದಕೀಯ ಸಮಿತಿಯ ಆಲೋಚನೆಗಳನ್ನು ಆಧರಿಸಿರುತ್ತದೆ.

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದುದ್ದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಕೊರೊನಾ ಸೋಂಕು ಚೀನಾದಲ್ಲಿ ವರದಿಯಾಗುತ್ತಿದ್ದಂತೆ ಕೇರಳವು ಯಾವುದೇ ಸಮಯ ವ್ಯರ್ಥ ಮಾಡಿರಲಿಲ್ಲ. ಮುಂಬರುವ ಸವಾಲುಗಳನ್ನು ಎದುರಿಸಲು ತಜ್ಞರ ಸಲಹೆ ಪಡೆದು ಅದಕ್ಕೆ ಬೇಕಾದ ಮುನ್ನೆಚ್ಚರಿಕೆಗಳನ್ನು ರಾಜ್ಯವು ತೆಗೆದುಕೊಂಡಿತು. ಅದರಂತೆ ಮೊದಲ ಕೊರೊನಾ ಪ್ರಕರಣವು ಜನವರಿ 27 ರಂದು ಕೇರಳದಲ್ಲಿ ವರದಿಯಾದಾಗಲೇ ವೈರಸ್ ಎದುರಿಸಲು ರಾಜ್ಯವು ಸಿದ್ಧವಾಗಿತ್ತು.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಪ್ರೋಟೋಕಾಲ್ ಅನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರಿಂದ ಪರೀಕ್ಷೆ, ಜಾಡು, ಪ್ರತ್ಯೇಕಿಸುವಿಕೆ ಮತ್ತು ಬೆಂಬಲ ಮತ್ತು ಬ್ರೇಕ್ ದಿ ಚೈನ್ ಅಭಿಯಾನಗಳು ರಾಜ್ಯದಾದ್ಯಂತ ನಡೆದಿತ್ತು.

ಕೇರಳದಲ್ಲಿ 2018 ರ ನಿಫಾ ವೈರಸ್ ಅನ್ನು ನಿಭಾಯಿಸಿದರಿಂದ ಗಳಿಸಿದ ಅನುಭವದಿಂದ ಅವರಿಗೆ ಬಹಳ ಸಹಾಯವಾಯಿತು.

ಪ್ರಸ್ತುತ ಕೊರೊನಾ ವೈರಸ್‌ನಿಂದಾಗಿ ಉಂಟಾದ ಸಾವಿನ ಪ್ರಮಾಣವು ಕೇರಳದಲ್ಲಿ ಶೇಕಡಾ 0.3 ರಷ್ಟಿದ್ದರೆ, ಭಾರತದ ಉಳಿದ ಭಾಗಗಳಲ್ಲಿ ಇದು ಶೇಕಡಾ 2.25 ಕ್ಕಿಂತ ಹೆಚ್ಚಿದೆ.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...