Homeಅಂತರಾಷ್ಟ್ರೀಯವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಈಗ ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ಗುರುತಿಸಿರುವ ವಿಶ್ವದ 50 ಉನ್ನತ ಚಿಂತಕರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ.

ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್, ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಆಫ್ರಿಕನ್ ಅಮೆರಿಕನ್ ಕಾದಂಬರಿಕಾರ್ತಿ ಮೂರು ಬಾರಿ ಹ್ಯೂಗೋ ಪ್ರಶಸ್ತಿ ವಿಜೇತೆ ಎನ್. ಕೆ. ಜೆಮಿಸಿನ್, ಐರಿಶ್ ನಟಿ ಸ್ಯಾಲಿ ರೂನಿ ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಸೇರಿದ್ದಾರೆ.

ಕಳೆದ ನಾಲ್ಕು ದಶಕಗಳಲ್ಲಿ ಹೆಚ್ಚಿನ ಭಾಗ ಭಾರತದಲ್ಲೇ ಇರುವ ಸ್ಕಾಟಿಷ್ ಇತಿಹಾಸಕಾರ ಡಾಲ್ರಿಂಪಲ್ ಅವರನ್ನು ಬಿಟ್ಟರೆ, ಈ ಪಟ್ಟಿಯಲ್ಲಿ ಇಪ್ಪತ್ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.


ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ


ನಿಯತಕಾಲಿಕವು ತನ್ನ ಮುಂದಿನ ಸಂಚಿಕೆಯಲ್ಲಿ (ಸೆಪ್ಟೆಂಬರ್ 1) ವರ್ಷದ ಉನ್ನತ ಚಿಂತಕ ಮತ್ತು ಟಾಪ್ -10 ಚಿಂತಕರನ್ನು ಹೆಸರಿಸಲಿದೆ. ಆಯ್ಕೆಯು ಓದುಗರ ಮತಗಳು ಮತ್ತು ಸಂಪಾದಕೀಯ ಸಮಿತಿಯ ಆಲೋಚನೆಗಳನ್ನು ಆಧರಿಸಿರುತ್ತದೆ.

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದುದ್ದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಕೊರೊನಾ ಸೋಂಕು ಚೀನಾದಲ್ಲಿ ವರದಿಯಾಗುತ್ತಿದ್ದಂತೆ ಕೇರಳವು ಯಾವುದೇ ಸಮಯ ವ್ಯರ್ಥ ಮಾಡಿರಲಿಲ್ಲ. ಮುಂಬರುವ ಸವಾಲುಗಳನ್ನು ಎದುರಿಸಲು ತಜ್ಞರ ಸಲಹೆ ಪಡೆದು ಅದಕ್ಕೆ ಬೇಕಾದ ಮುನ್ನೆಚ್ಚರಿಕೆಗಳನ್ನು ರಾಜ್ಯವು ತೆಗೆದುಕೊಂಡಿತು. ಅದರಂತೆ ಮೊದಲ ಕೊರೊನಾ ಪ್ರಕರಣವು ಜನವರಿ 27 ರಂದು ಕೇರಳದಲ್ಲಿ ವರದಿಯಾದಾಗಲೇ ವೈರಸ್ ಎದುರಿಸಲು ರಾಜ್ಯವು ಸಿದ್ಧವಾಗಿತ್ತು.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಪ್ರೋಟೋಕಾಲ್ ಅನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರಿಂದ ಪರೀಕ್ಷೆ, ಜಾಡು, ಪ್ರತ್ಯೇಕಿಸುವಿಕೆ ಮತ್ತು ಬೆಂಬಲ ಮತ್ತು ಬ್ರೇಕ್ ದಿ ಚೈನ್ ಅಭಿಯಾನಗಳು ರಾಜ್ಯದಾದ್ಯಂತ ನಡೆದಿತ್ತು.

ಕೇರಳದಲ್ಲಿ 2018 ರ ನಿಫಾ ವೈರಸ್ ಅನ್ನು ನಿಭಾಯಿಸಿದರಿಂದ ಗಳಿಸಿದ ಅನುಭವದಿಂದ ಅವರಿಗೆ ಬಹಳ ಸಹಾಯವಾಯಿತು.

ಪ್ರಸ್ತುತ ಕೊರೊನಾ ವೈರಸ್‌ನಿಂದಾಗಿ ಉಂಟಾದ ಸಾವಿನ ಪ್ರಮಾಣವು ಕೇರಳದಲ್ಲಿ ಶೇಕಡಾ 0.3 ರಷ್ಟಿದ್ದರೆ, ಭಾರತದ ಉಳಿದ ಭಾಗಗಳಲ್ಲಿ ಇದು ಶೇಕಡಾ 2.25 ಕ್ಕಿಂತ ಹೆಚ್ಚಿದೆ.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...