Homeಮುಖಪುಟತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

- Advertisement -
- Advertisement -

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಮತ್ತು ಪ್ರತಿಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ  ಸರಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ರಾಜ್ಯಪಾಲರನ್ನು ಬಳಕೆ ಮಾಡುತ್ತಿರುವ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳದ ಎಡ ಪ್ರಜಾಸತ್ತಾತ್ಮಕ ರಂಗದ ನಾಯಕರು ಮತ್ತು ಶಾಸಕರು ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಡಿಎಂಕೆ ಮುಖಂಡರಾದ ತಿರುಚ್ಚಿ ಶಿವ ಮತ್ತು ಪಳನಿವೇಲ್ ತ್ಯಾಗರಾಜನ್ ಸೇರಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಪಿಣರಾಯ್‌ ವಿಜಯನ್, ಪ್ರತಿಭಟನೆಗಳು ಉತ್ತರ-ದಕ್ಷಿಣ ಎಂಬ ವಿಭಜನೆಯನ್ನು ಉತ್ತೇಜಿಸುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ರಾಜ್ಯದ ಜನರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಇಲ್ಲಿದ್ದೇವೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೆರಿಗೆಯ ಪಾಲನ್ನು ನೀಡುತ್ತಿಲ್ಲ ಮತ್ತು ಸರ್ಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬಳಸಲಾಗುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಆರೋಪಿಸಿದ್ದಾರೆ.

ಭಾರತದ ಒಕ್ಕೂಟ ರಚನೆಯನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗೂಡಿದ್ದೇವೆ. ಕೇಂದ್ರವು ಹಲವಾರು ಕ್ಷೇತ್ರಗಳಲ್ಲಿ ರಾಜ್ಯಗಳ ಅಧಿಕಾರ ಮತ್ತು ಕರ್ತವ್ಯಗಳನ್ನು ಅತಿಕ್ರಮಿಸುವ ಕಾನೂನುಗಳನ್ನು ರೂಪಿಸುತ್ತಿದೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಇಚ್ಛೆಯಂತೆ ವರ್ತಿಸುತ್ತಿದ್ದಾರೆ ಮತ್ತು ರಾಜ್ಯ ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ರಾಜ್ಯ ಸರಕಾರದ ಬಗೆಗೆ ಕೇಂದ್ರದ ಮನಸ್ಥಿತಿಯು ಪ್ರತಿಪಕ್ಷಗಳ ಆಡಳಿತದ ರಾಜ್ಯಗಳಾದ್ಯಂತ ರಾಜ್ಯಪಾಲರು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ. ಸಾಂವಿಧಾನಿಕವಾಗಿ, ರಾಜ್ಯಪಾಲರು ರಾಜ್ಯ ಸಚಿವ ಸಂಪುಟಗಳ ಸಲಹೆಯ ಮೇರೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಆದರೆ ಪ್ರತಿಪಕ್ಷಗಳ ಆಡಳಿತದ ರಾಜ್ಯದಲ್ಲಿ ರಾಜ್ಯಪಾಲರು ತಮ್ಮನ್ನು ನೇಮಿಸಿದ ಕೇಂದ್ರ ಸರ್ಕಾರದ ಆದೇಶದಂತೆ ವರ್ತಿಸುವ ಈ ವಿದ್ಯಮಾನವನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು ಹೀಗೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪವನ್ನು ನೋಡಿದ್ದೇವೆ. ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಶಾಸಕಾಂಗದ ಕಾರ್ಯದಲ್ಲಿ ಮಧ್ಯಪ್ರವೇಶಿಸುವ ಮೂಲಕ ಸಾಂವಿಧಾನಿಕ ಆದೇಶವನ್ನು ಮೀರಲು ಪ್ರಯತ್ನಿಸುತ್ತಿರುವುದನ್ನು ನಾವು ನೋಡಿದ್ದೇವೆ. ಇದು ರಾಜ್ಯಗಳ ವಿರುದ್ಧದ ತಾರತಮ್ಯದ ವಿರುದ್ಧ ಪ್ರಜಾಸತ್ತಾತ್ಮಕ ಪ್ರತಿಭಟನೆಯಾಗಿದೆ. ನಮ್ಮ ಜನರ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಂಡು ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಪಿಣರಾಯ್ ವಿಜಯನ್‌ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕೇಂದ್ರದ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡಬೇಕೆಂದು ಈ ಮೊದಲೇ ನಾವು ನಿರ್ಧರಿಸಿದ್ದೆವು. ಅನುದಾನ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದೇವೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ ತಿಳಿಸಿದ್ದಾರೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...