Homeಮುಖಪುಟಕೇರಳ ಹೆಸರು ಇನ್ನು ಮುಂದೆ 'ಕೇರಳಂ'; ಕೇಂದ್ರ ಸಚಿವ ಸಂಪುಟ ಅನುಮೋದನೆ

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. “ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ” ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಸಚಿವ ಸಂಪುಟದ ಈ ನಿರ್ಧಾರ ಬಂದಿದೆ.

ಕೇರಳ ವಿಧಾನಸಭೆಯು ಜೂನ್ 24, 2024 ರಂದು ರಾಜ್ಯವನ್ನು ಅಧಿಕೃತವಾಗಿ ಕೇರಳಂ ಎಂದು ಬದಲಾಯಿಸುವಂತೆ ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು. ವಿಧಾನಸಭೆಯ ನಿರ್ಣಯದ ನಂತರ, ಮಂಗಳವಾರ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟವು ರಾಜ್ಯದ ಹೆಸರನ್ನು ಕೇರಳದಿಂದ ಕೇರಳಂ ಎಂದು ಬದಲಾಯಿಸಲು ಅನುಮೋದನೆ ನೀಡಿದೆ ಎಂಧು ಮಾಧ್ಯಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಉದ್ಘಾಟನೆಗೊಂಡ ಸೇವಾ ತೀರ್ಥ, ಹೊಸ ಪಿಎಂಒ ಕಟ್ಟಡದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಇದಾಗಿದೆ. ಮೊದಲ ನಿರ್ಣಯವನ್ನು ಪರಿಶೀಲಿಸಿದ ಗೃಹ ಸಚಿವಾಲಯವು ಕೆಲವು ತಾಂತ್ರಿಕ ಬದಲಾವಣೆಗಳನ್ನು ಸೂಚಿಸಿದ್ದರಿಂದ ಕೇರಳ ವಿಧಾನಸಭೆಯು ಎರಡನೇ ಬಾರಿಗೆ ನಿರ್ಣಯವನ್ನು ಅಂಗೀಕರಿಸಿತು.

ಸಂಪುಟ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, “ಸೇವಾ ತೀರ್ಥದಲ್ಲಿ ನಡೆಯುವ ಈ ಮೊದಲ ಸಭೆಯೊಂದಿಗೆ, ಕೇಂದ್ರ ಸಚಿವ ಸಂಪುಟವು ಇಲ್ಲಿ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು 1.4 ಶತಕೋಟಿ ದೇಶವಾಸಿಗಳಿಗೆ ಸೇವಾ ಮನೋಭಾವದಿಂದ ಪ್ರೇರಿತವಾಗಿರುತ್ತದೆ. ರಾಷ್ಟ್ರ ನಿರ್ಮಾಣದ ವಿಶಾಲ ಗುರಿಯೊಂದಿಗೆ ಸಂಬಂಧ ಹೊಂದಿದೆ ಎಂಬ ತನ್ನ ಸಂಕಲ್ಪವನ್ನು ಪುನರುಚ್ಚರಿಸುತ್ತದೆ. ನಮಗೆ, ಸಾಂವಿಧಾನಿಕ ಮೌಲ್ಯಗಳು ಆಡಳಿತವನ್ನು ನಾಗರಿಕರ ಘನತೆ, ಸಮಾನತೆ ಮತ್ತು ನ್ಯಾಯದೊಂದಿಗೆ ಸಂಪರ್ಕಿಸುವ ನೈತಿಕ ಬದ್ಧತೆಯ ಅಭಿವ್ಯಕ್ತಿಯಾಗಿದೆ” ಎಂದರು.

ರಾಜ್ಯದ ಹೆಸರು ಬದಲಾವಣೆ ಕುರಿತು ಪಿಣರಾಯಿ ವಿಜಯನ್ ಹೇಳಿದ್ದೇನು?

ನಿರ್ಣಯವನ್ನು ಮಂಡಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಸೇರಿಸಲಾದ ಎಲ್ಲ ಭಾಷೆಗಳಲ್ಲಿ ದಕ್ಷಿಣ ರಾಜ್ಯದ ಹೆಸರನ್ನು ಕೇರಳದಿಂದ ಕೇರಳಂ ಎಂದು ಬದಲಾಯಿಸಬೇಕೆಂದು ಕೇಂದ್ರ ಸರ್ಕಾರವನ್ನು ಬಯಸಿದ್ದರು.

ನಿರ್ಣಯವನ್ನು ಮಂಡಿಸುತ್ತಾ, ಮುಖ್ಯಮಂತ್ರಿಗಳು ರಾಜ್ಯವನ್ನು ಮಲಯಾಳಂನಲ್ಲಿ ‘ಕೇರಳಂ’ ಎಂದು ಕರೆಯಲಾಗುತ್ತಿತ್ತು. ಮಲಯಾಳಂ ಮಾತನಾಡುವ ಸಮುದಾಯಗಳಿಗೆ ಸಂಯುಕ್ತ ಕೇರಳವನ್ನು ರಚಿಸುವ ಬೇಡಿಕೆ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಸಮಯದಿಂದ ಬಲವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದರು. ರಾಜ್ಯ ಸರ್ಕಾರವು ಆಗಸ್ಟ್ 2023 ರಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು.

ಆದರೆ, ಸಂವಿಧಾನದ ಮೊದಲ ಶೇಡ್ಯೂಲ್‌ನಲ್ಲಿ ರಾಜ್ಯದ ಹೆಸರನ್ನು ಕೇರಳಂ ಎಂದು ಬರೆಯಲಾಗಿದೆ ಎಂದು ಅವರು ಹೇಳಿದರು. ಸಂವಿಧಾನದ 3 ನೇ ವಿಧಿಯ ಅಡಿಯಲ್ಲಿ ಕೇರಳ ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ ಕೇರಳಂ ಎಂದು ಮರುನಾಮಕರಣ ಮಾಡಲು ಈ ಸಭೆ ಕೇಂದ್ರವನ್ನು ತಕ್ಷಣ ವಿನಂತಿಸುತ್ತದೆ ಎಂದು ವಿಜಯನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...