Homeಮುಖಪುಟಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

ಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

- Advertisement -
- Advertisement -

ಭಾರತೀಯ ಸಂವಿಧಾನದ ಮೂಲ ರಚನೆಯ ಸಿದ್ದಾಂತವನ್ನು ರೂಪಿಸಿದ ಐತಿಹಾಸಿಕ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ 10 ಭಾಷೆಗಳಲ್ಲಿ ಲಭ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರು ತಿಳಿಸಿದ್ದಾರೆ. ಈ ಪ್ರಕರಣದ ತೀರ್ಪಿಗೆ 50 ವರ್ಷ ತುಂಬಿರುವ ಹಿನ್ನೆಲೆ ವಿವಿಧ ಭಾಷೆಗಳಲ್ಲಿ ಪ್ರಕಟಿಸಲಾಗಿದೆ ಸಿಜೆಐ ಹೇಳಿದ್ದಾರೆ.

ಕೇಶವಾನಂದ ಭಾರತಿ ಪ್ರಕರಣದ ಪ್ರಕರಣದ ಹಿನ್ನೆಲೆ, ಒಳಗೊಂಡಿರುವ ಪ್ರಮುಖ ಕಾನೂನು ಸಮಸ್ಯೆಗಳು, ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು, ಪ್ರಕರಣದಲ್ಲಿ ಹಾಜರಾದ ವಕೀಲರು, ಮಾಡಿದ ವಾದಗಳು ಮತ್ತು ತೀರ್ಮಾನಗಳ ವಿವರಗಳನ್ನು ಹತ್ತು ಭಾ‍ಷೆಗಳಲ್ಲಿ ನೀಡಲಾಗಿದೆ.

ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಒಡಿಯಾ, ಮಲಯಾಳಂ, ಗುಜರಾತಿ, ಕನ್ನಡ, ಬೆಂಗಾಲಿ, ಅಸ್ಸಾಮಿ ಮತ್ತು ಮರಾಠಿಯಲ್ಲಿ ತೀರ್ಪನ್ನು ಅನುವಾದಿಸಲಾಗಿದೆ. ಈ ಉಪಕ್ರಮವು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ನಡೆಯುತ್ತಿರುವ ಪ್ರಯತ್ನದ ಭಾಗ ಎಂದು ಸಿಜೆಐ ಹೇಳಿದ್ದಾರೆ. 20,000 ತೀರ್ಪುಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ವರದಿಗಳ (eSCR) ಎಲೆಕ್ಟ್ರಾನಿಕ್ ಆವೃತ್ತಿಯಲ್ಲಿ ಅಪ್‌ಲೋಡ್ ಮಾಡಲಾಗಿದೆ.

“ಜನರಿಗೆ ಕೇಶವಾನಂದ ಭಾರತಿ ತೀರ್ಪಿನ ಬಗ್ಗೆ ತಿಳಿದಿದೆ. ಆದರೆ, ಅದರ ಹಿಂದಿನ ಮಹತ್ವದ ಬಗ್ಗೆ ಗೊತ್ತಿಲ್ಲ. ವಿವಿಧ ಭಾಷೆಗಳಲ್ಲಿ ತೀರ್ಪನ್ನು ಅನುವಾದ ಮಾಡಿರುವುದು ಜನರಲ್ಲಿ ಜಾಗೃತಿ ಮೂಡಿಸಲು ನೆರವಾಗಲಿದೆ ಎಂದು” ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ ಹೇಳಿದ್ದಾರೆ.

ಏನಿದು ಕೇಶವಾನಂದ ಭಾರತಿ ಪ್ರಕರಣದ ತೀರ್ಪು?

ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ ನೀಡಿದ ಒಂದು ಐತಿಹಾಸಿಕ ತೀರ್ಪು ಆಗಿದೆ. ಇದು ಭಾರತೀಯ ಸಂವಿಧಾನದ ಮೂಲ ಸ್ವರೂಪವನ್ನು ನಿರ್ಧರಿಸಿದ ತೀರ್ಪು. ಈ ಪ್ರಕರಣವನ್ನು ದೇಶದ ಅತ್ಯಂತ ಪ್ರಸಿದ್ಧ ಸಾಂವಿಧಾನಿಕ ಪ್ರಕರಣಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಎಂ.ಸಿಕ್ರಿ ನ್ಯಾಯಧೀಶರಾದ ಎ.ಎನ್‌ ರೇ, ಎಸ್.ಎಂ. ಶೆಲತ್, ಕೆ.ಎಸ್. ಹೆಗಡೆ, ಎ.ಕೆ. ಮುಖರ್ಜಿ, ಜೆ.ಎಂ.ಶೆಲತ್, ಎ.ಎನ್. ಗ್ರೋವರ್, ಪಿ.ಜಗನ್ಮೋಹನ್ ರೆಡ್ಡಿ, ಹೆಚ್.ಆರ್.ಖನ್ನಾ, ಎಸ್.ಎನ್. ದ್ವಿವೇದಿ, ಎಂ.ಹೆಚ್. ಬೇಗ್, ವೈ.ವಿ. ಚಂದ್ರಚೂಡ್, ಮತ್ತು ಪಿ.ಎನ್. ಭಗವತಿ ಸೇರಿದಂತೆ 13 ನ್ಯಾಯಾಧೀಶರ ಅತಿದೊಡ್ಡ ಪೀಠವು ಈ ಪ್ರಕರಣ ವಿಚಾರಣೆ ನಡೆಸಿತ್ತು. 1972 ರ ಅಕ್ಟೋಬರ್ 31 ರಿಂದ 16 ಮಾರ್ಚ್ 1973 ರವರೆಗೆ 66 ದಿನಗಳ ಕಾಲ ಪ್ರಕರಣದ ವಿಚಾರನಣೆ ನಡೆದಿತ್ತು. ಅಂತಿಮ ತೀರ್ಪು 23 ಮಾರ್ಚ್ 1973 ರಂದು ಪ್ರಕಟಿಸಲಾಗಿತ್ತು.

ಕೇಶವಾನಂದ ಭಾರತಿ ಕೇಸ್ ದಾಖಲಿಸಿದವರು ಯಾರು?

ಧಾರ್ಮಿಕ ಸ್ವಾಮ್ಯದ ಆಸ್ತಿಯನ್ನು ಸರ್ಕಾರದ ಹಸ್ತಕ್ಷೇಪವಿಲ್ಲದೆ ನಿರ್ವಹಿಸುವ ಹಕ್ಕನ್ನು ನಾಗರಿಕರಿಗೆ ನೀಡುವ ಸಂವಿಧಾನದ ವಿಧಿ 26ರ ಅಡಿಯಲ್ಲಿ ಮಠದ ಭೂಮಿಯನ್ನು ಕೇರಳ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನವನ್ನು ಪ್ರಶ್ನಿಸಿ ಹಿಂದೂ ಮಠದ ಮುಖ್ಯಸ್ಥ ಕೇಶವಾನಂದ ಭಾರತಿ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ವ್ಯಾಪ್ತಿ ದೊಡ್ಡದಾಗಿದ್ದ ಕಾರಣ ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವನ್ನು ಈ ಪ್ರಕರಣ ಪ್ರಶ್ನಿಸಿದ್ದರಿಂದ ಇದು ಸಾಂವಿಧಾನಿಕ ವಿಷಯವಾಗಿ ಬದಲಾಗಿತ್ತು.

ಕೇಶವಾನಂದ ಭಾರತಿ ಹಿನ್ನೆಲೆ

ಕೇಶವಾನಂದ ಭಾರತಿ ಕೇರಳದ ಕಾಸರಗೋಡು ಜಿಲ್ಲೆಯ ಹಿಂದೂ ಮಠದ ಮುಖ್ಯಸ್ಥರಾಗಿದ್ದರು. ಮಠದಲ್ಲಿ ಜಮೀನು ಹೊಂದಿದ್ದರು. 1969 ರಲ್ಲಿ ಕೇರಳ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು. ಈ ಕಾಯ್ದೆಯಡಿ ಮಠಕ್ಕೆ ಸೇರಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕನ್ನು ಸರ್ಕಾರ ಹೊಂದಿದೆ ಎಂದು ಹೇಳಿತ್ತು.

ಮಾರ್ಚ್ 1970 ರಲ್ಲಿ ಭಾರತಿ ಸ್ವಾಮಿಜಿ ಸಂವಿಧಾನದ ವಿಧಿ 14 ರ ಅಡಿಯಲ್ಲಿ ಹೊಂದಿರುವ ಮೂಲಭೂತ ಹಕ್ಕುಗಳು, ವಿಧಿ 19 (1) (ಎಫ್) ರ ಸಮಾನತೆಯ ಹಕ್ಕು, ವಿಧಿ 25ರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಸ್ವಾತಂತ್ರ್ಯ, ವಿಧಿ 26ರ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ವಿಧಿ 31 ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕುಗಳಡಿ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪು ಏನು?

24ನೇ ಏಪ್ರಿಲ್ 1973 ರಂದು ಸುಪ್ರೀಂ ಕೋರ್ಟ್ ಪ್ರಕರಣದ ಅಂತಿಮ ತೀರ್ಪನ್ನು 7:6 ರ ಬಹುಮತದಿಂದ ಪ್ರಕಟಿಸಿತು. ತೀರ್ಪಿನಲ್ಲಿ ಸಂವಿಧಾನದ “ಮೂಲ ರಚನೆ” ಅಥವಾ ಚೌಕಟ್ಟಿಗೆ ಧಕ್ಕೆಯಾಗದಂತೆ ಯಾವುದೇ ತಿದ್ದಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ, ಸಂವಿಧಾನದ ಶ್ರೇಷ್ಠತೆ, ಕಾನೂನು-ರಚನಾ ಸಂಸ್ಥೆಗಳು, ಅಧಿಕಾರಗಳ ಪ್ರತ್ಯೇಕತೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯ ಸೇರಿದಂತೆ ಸಂವಿಧಾನದ ಕೆಲವು ಮೂಲಭೂತ ಅಂಶಗಳು ಸಂವಿಧಾನದ ಮೂಲ ಸ್ವರೂಪದ ಭಾಗವಾಗಿದ್ದು, ಅದನ್ನು ಸಂಸತ್ತಿನಿಂದ ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಪ್ರಕಾರ, ಸಂವಿಧಾನದಲ್ಲಿ ತಿದ್ದುಪಡಿಗಳನ್ನು ಮಾಡಲು ಸಂಸತ್ತು ಅನಿಯಮಿತ ಅಧಿಕಾರವನ್ನು ಹೊಂದಿದೆ. ಆದರೆ, ಅಂತಹ ತಿದ್ದುಪಡಿಗಳು ಸಂವಿಧಾನದ ಮೂಲಭೂತ ರಚನೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಸಂಸತ್ತು ಸಂವಿಧಾನದ ಪ್ರತಿಯೊಂದು ತಿದ್ದುಪಡಿಯು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು.

ಇದನ್ನೂ ಓದಿ : ವಿವೋ-ಇಂಡಿಯಾ ಸೇರಿ ಇತರ ಕಂಪೆನಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...