Homeಮುಖಪುಟಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

ಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

- Advertisement -
- Advertisement -

ಭಾರತೀಯ ಸಂವಿಧಾನದ ಮೂಲ ರಚನೆಯ ಸಿದ್ದಾಂತವನ್ನು ರೂಪಿಸಿದ ಐತಿಹಾಸಿಕ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ 10 ಭಾಷೆಗಳಲ್ಲಿ ಲಭ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರು ತಿಳಿಸಿದ್ದಾರೆ. ಈ ಪ್ರಕರಣದ ತೀರ್ಪಿಗೆ 50 ವರ್ಷ ತುಂಬಿರುವ ಹಿನ್ನೆಲೆ ವಿವಿಧ ಭಾಷೆಗಳಲ್ಲಿ ಪ್ರಕಟಿಸಲಾಗಿದೆ ಸಿಜೆಐ ಹೇಳಿದ್ದಾರೆ.

ಕೇಶವಾನಂದ ಭಾರತಿ ಪ್ರಕರಣದ ಪ್ರಕರಣದ ಹಿನ್ನೆಲೆ, ಒಳಗೊಂಡಿರುವ ಪ್ರಮುಖ ಕಾನೂನು ಸಮಸ್ಯೆಗಳು, ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು, ಪ್ರಕರಣದಲ್ಲಿ ಹಾಜರಾದ ವಕೀಲರು, ಮಾಡಿದ ವಾದಗಳು ಮತ್ತು ತೀರ್ಮಾನಗಳ ವಿವರಗಳನ್ನು ಹತ್ತು ಭಾ‍ಷೆಗಳಲ್ಲಿ ನೀಡಲಾಗಿದೆ.

ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಒಡಿಯಾ, ಮಲಯಾಳಂ, ಗುಜರಾತಿ, ಕನ್ನಡ, ಬೆಂಗಾಲಿ, ಅಸ್ಸಾಮಿ ಮತ್ತು ಮರಾಠಿಯಲ್ಲಿ ತೀರ್ಪನ್ನು ಅನುವಾದಿಸಲಾಗಿದೆ. ಈ ಉಪಕ್ರಮವು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ನಡೆಯುತ್ತಿರುವ ಪ್ರಯತ್ನದ ಭಾಗ ಎಂದು ಸಿಜೆಐ ಹೇಳಿದ್ದಾರೆ. 20,000 ತೀರ್ಪುಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ವರದಿಗಳ (eSCR) ಎಲೆಕ್ಟ್ರಾನಿಕ್ ಆವೃತ್ತಿಯಲ್ಲಿ ಅಪ್‌ಲೋಡ್ ಮಾಡಲಾಗಿದೆ.

“ಜನರಿಗೆ ಕೇಶವಾನಂದ ಭಾರತಿ ತೀರ್ಪಿನ ಬಗ್ಗೆ ತಿಳಿದಿದೆ. ಆದರೆ, ಅದರ ಹಿಂದಿನ ಮಹತ್ವದ ಬಗ್ಗೆ ಗೊತ್ತಿಲ್ಲ. ವಿವಿಧ ಭಾಷೆಗಳಲ್ಲಿ ತೀರ್ಪನ್ನು ಅನುವಾದ ಮಾಡಿರುವುದು ಜನರಲ್ಲಿ ಜಾಗೃತಿ ಮೂಡಿಸಲು ನೆರವಾಗಲಿದೆ ಎಂದು” ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ ಹೇಳಿದ್ದಾರೆ.

ಏನಿದು ಕೇಶವಾನಂದ ಭಾರತಿ ಪ್ರಕರಣದ ತೀರ್ಪು?

ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ ನೀಡಿದ ಒಂದು ಐತಿಹಾಸಿಕ ತೀರ್ಪು ಆಗಿದೆ. ಇದು ಭಾರತೀಯ ಸಂವಿಧಾನದ ಮೂಲ ಸ್ವರೂಪವನ್ನು ನಿರ್ಧರಿಸಿದ ತೀರ್ಪು. ಈ ಪ್ರಕರಣವನ್ನು ದೇಶದ ಅತ್ಯಂತ ಪ್ರಸಿದ್ಧ ಸಾಂವಿಧಾನಿಕ ಪ್ರಕರಣಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಎಂ.ಸಿಕ್ರಿ ನ್ಯಾಯಧೀಶರಾದ ಎ.ಎನ್‌ ರೇ, ಎಸ್.ಎಂ. ಶೆಲತ್, ಕೆ.ಎಸ್. ಹೆಗಡೆ, ಎ.ಕೆ. ಮುಖರ್ಜಿ, ಜೆ.ಎಂ.ಶೆಲತ್, ಎ.ಎನ್. ಗ್ರೋವರ್, ಪಿ.ಜಗನ್ಮೋಹನ್ ರೆಡ್ಡಿ, ಹೆಚ್.ಆರ್.ಖನ್ನಾ, ಎಸ್.ಎನ್. ದ್ವಿವೇದಿ, ಎಂ.ಹೆಚ್. ಬೇಗ್, ವೈ.ವಿ. ಚಂದ್ರಚೂಡ್, ಮತ್ತು ಪಿ.ಎನ್. ಭಗವತಿ ಸೇರಿದಂತೆ 13 ನ್ಯಾಯಾಧೀಶರ ಅತಿದೊಡ್ಡ ಪೀಠವು ಈ ಪ್ರಕರಣ ವಿಚಾರಣೆ ನಡೆಸಿತ್ತು. 1972 ರ ಅಕ್ಟೋಬರ್ 31 ರಿಂದ 16 ಮಾರ್ಚ್ 1973 ರವರೆಗೆ 66 ದಿನಗಳ ಕಾಲ ಪ್ರಕರಣದ ವಿಚಾರನಣೆ ನಡೆದಿತ್ತು. ಅಂತಿಮ ತೀರ್ಪು 23 ಮಾರ್ಚ್ 1973 ರಂದು ಪ್ರಕಟಿಸಲಾಗಿತ್ತು.

ಕೇಶವಾನಂದ ಭಾರತಿ ಕೇಸ್ ದಾಖಲಿಸಿದವರು ಯಾರು?

ಧಾರ್ಮಿಕ ಸ್ವಾಮ್ಯದ ಆಸ್ತಿಯನ್ನು ಸರ್ಕಾರದ ಹಸ್ತಕ್ಷೇಪವಿಲ್ಲದೆ ನಿರ್ವಹಿಸುವ ಹಕ್ಕನ್ನು ನಾಗರಿಕರಿಗೆ ನೀಡುವ ಸಂವಿಧಾನದ ವಿಧಿ 26ರ ಅಡಿಯಲ್ಲಿ ಮಠದ ಭೂಮಿಯನ್ನು ಕೇರಳ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನವನ್ನು ಪ್ರಶ್ನಿಸಿ ಹಿಂದೂ ಮಠದ ಮುಖ್ಯಸ್ಥ ಕೇಶವಾನಂದ ಭಾರತಿ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ವ್ಯಾಪ್ತಿ ದೊಡ್ಡದಾಗಿದ್ದ ಕಾರಣ ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವನ್ನು ಈ ಪ್ರಕರಣ ಪ್ರಶ್ನಿಸಿದ್ದರಿಂದ ಇದು ಸಾಂವಿಧಾನಿಕ ವಿಷಯವಾಗಿ ಬದಲಾಗಿತ್ತು.

ಕೇಶವಾನಂದ ಭಾರತಿ ಹಿನ್ನೆಲೆ

ಕೇಶವಾನಂದ ಭಾರತಿ ಕೇರಳದ ಕಾಸರಗೋಡು ಜಿಲ್ಲೆಯ ಹಿಂದೂ ಮಠದ ಮುಖ್ಯಸ್ಥರಾಗಿದ್ದರು. ಮಠದಲ್ಲಿ ಜಮೀನು ಹೊಂದಿದ್ದರು. 1969 ರಲ್ಲಿ ಕೇರಳ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು. ಈ ಕಾಯ್ದೆಯಡಿ ಮಠಕ್ಕೆ ಸೇರಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕನ್ನು ಸರ್ಕಾರ ಹೊಂದಿದೆ ಎಂದು ಹೇಳಿತ್ತು.

ಮಾರ್ಚ್ 1970 ರಲ್ಲಿ ಭಾರತಿ ಸ್ವಾಮಿಜಿ ಸಂವಿಧಾನದ ವಿಧಿ 14 ರ ಅಡಿಯಲ್ಲಿ ಹೊಂದಿರುವ ಮೂಲಭೂತ ಹಕ್ಕುಗಳು, ವಿಧಿ 19 (1) (ಎಫ್) ರ ಸಮಾನತೆಯ ಹಕ್ಕು, ವಿಧಿ 25ರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಸ್ವಾತಂತ್ರ್ಯ, ವಿಧಿ 26ರ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ವಿಧಿ 31 ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕುಗಳಡಿ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪು ಏನು?

24ನೇ ಏಪ್ರಿಲ್ 1973 ರಂದು ಸುಪ್ರೀಂ ಕೋರ್ಟ್ ಪ್ರಕರಣದ ಅಂತಿಮ ತೀರ್ಪನ್ನು 7:6 ರ ಬಹುಮತದಿಂದ ಪ್ರಕಟಿಸಿತು. ತೀರ್ಪಿನಲ್ಲಿ ಸಂವಿಧಾನದ “ಮೂಲ ರಚನೆ” ಅಥವಾ ಚೌಕಟ್ಟಿಗೆ ಧಕ್ಕೆಯಾಗದಂತೆ ಯಾವುದೇ ತಿದ್ದಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ, ಸಂವಿಧಾನದ ಶ್ರೇಷ್ಠತೆ, ಕಾನೂನು-ರಚನಾ ಸಂಸ್ಥೆಗಳು, ಅಧಿಕಾರಗಳ ಪ್ರತ್ಯೇಕತೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯ ಸೇರಿದಂತೆ ಸಂವಿಧಾನದ ಕೆಲವು ಮೂಲಭೂತ ಅಂಶಗಳು ಸಂವಿಧಾನದ ಮೂಲ ಸ್ವರೂಪದ ಭಾಗವಾಗಿದ್ದು, ಅದನ್ನು ಸಂಸತ್ತಿನಿಂದ ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಪ್ರಕಾರ, ಸಂವಿಧಾನದಲ್ಲಿ ತಿದ್ದುಪಡಿಗಳನ್ನು ಮಾಡಲು ಸಂಸತ್ತು ಅನಿಯಮಿತ ಅಧಿಕಾರವನ್ನು ಹೊಂದಿದೆ. ಆದರೆ, ಅಂತಹ ತಿದ್ದುಪಡಿಗಳು ಸಂವಿಧಾನದ ಮೂಲಭೂತ ರಚನೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಸಂಸತ್ತು ಸಂವಿಧಾನದ ಪ್ರತಿಯೊಂದು ತಿದ್ದುಪಡಿಯು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು.

ಇದನ್ನೂ ಓದಿ : ವಿವೋ-ಇಂಡಿಯಾ ಸೇರಿ ಇತರ ಕಂಪೆನಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...