Homeಮುಖಪುಟಕಾಲು ನಡಿಗೆಯ ದಿಗಂಬರ ಶ್ರಮಣಿಕೆ, ಸತ್ಯಶೋಧನೆಯ ಸಾರ್ಥಕತೆ: ಕೇಶವ ಮಳಗಿ

ಕಾಲು ನಡಿಗೆಯ ದಿಗಂಬರ ಶ್ರಮಣಿಕೆ, ಸತ್ಯಶೋಧನೆಯ ಸಾರ್ಥಕತೆ: ಕೇಶವ ಮಳಗಿ

- Advertisement -
- Advertisement -

ತಾನು ಹುಟ್ಟಿ ಎರಡೂವರೆ ಸಾವಿರ ವರ್ಷಗಳ ಬಳಿಕವೂ ಜೈನಧರ್ಮದ ಸನ್ಯಾಸಿಗಳು ಇಂದಿಗೂ ಕಾಲು ನಡಿಗೆಯಲ್ಲಿಯೇ ತಮ್ಮ ಪರಿಕ್ರಮಣವನ್ನು ಪೂರೈಸಬೇಕಿರುವುದು ನನ್ನನ್ನು ವರ್ಷಗಳಿಂದ ವಿಸ್ಮಯ, ಅಚ್ಚರಿ ಮತ್ತು ಜಿಜ್ಞಾಸೆಗೆ ತಳ್ಳಿದೆ. ಬೇರಾವ ದರ್ಶನಗಳು ಇಂಥದ್ದೊಂದು ಕಠಿಣ ನಿಯಮವನ್ನು ಪಾಲಿಸಿಕೊಂಡು ಬಂದಿವೆಯೋ ಗೊತ್ತಿಲ್ಲ.
ಪರಿತ್ಯಾಗಿ ದಿಗಂಬರ ಮೊದಲು ಎಲ್ಲವನ್ನೂ ಕಳಚಬೇಕು. ಬಳಿಕ ತನ್ನನ್ನು ನಿಸರ್ಗಕ್ಕೆ ಒಪ್ಪಿಸಿಕೊಳ್ಳಬೇಕು. ಲೋಕವನ್ನು ನಗ್ನ ಸ್ಥಿತಿಯಲ್ಲಿಯೇ ಎದುರುಕೊಳ್ಳುತ್ತಲೇ ಅಂತಿಮವಾಗಿ ಪ್ರಕೃತಿಯಲ್ಲಿ ಒಂದಾಗಬೇಕು.

ಇಲ್ಲಿ ಎಲ್ಲವೂ ಅನಿರೀಕ್ಷಿತ, ದುರ್ಗಮ, ಅಗಮ್ಯ, ಅಗೋಚರ. ನಿರೀಕ್ಷಿತವಾದುದೆಂದರೆ ಆ ಕ್ಷಣಕ್ಕೆ ಎದುರಾಗುವ ಅನುಭವ ಮಾತ್ರ. ದೇಹದ ಐದೂ ಬಗೆಯ ‘ಗೋಚರ’ ಇಂದ್ರೀಯಗಳು; ಏಕಕಾಲಕ್ಕೆ ಅಸ್ತಿತ್ವದಲ್ಲಿರುವ ಅಗೋಚರವಾದ ಹಲ ಬಗೆಯ ‘ಮನಸ್ಸು’ಗಳನ್ನು ಈ ಸವಣ ‘ಪಂಚಭೂತ’ಗಳೊಂದಿಗೆ ನೇರ ಮುಖಾಮುಖಿಯಾಗಿಸಬೇಕಾಗುತ್ತದೆ. ರಾಜರಸ್ತೆಯ ನುಣುಪು, ಕಾಡಿನ ಕಾಲುದಾರಿಗಳ ಹುಲ್ಲು-ಮುಳ್ಳು, ಪಾದಕ್ಕೆ ಆಣೆ ಎಬ್ಬಿಸಬಲ್ಲ ಹಳಕು ಹರಳು, ಬೆಳಚುಗಲ್ಲು ತುಳಿದು ಮುಂದೆ ಹೋಗಬೇಕಾಗುತ್ತದೆ. ಭಯಾನಕ ಬಿಸಿಲು, ಗಾಳಿ, ತಂಪನೀವ ನೆರಳು, ಹೂವಿನಂತೆ ತಲೆ ಸವರುವ ತುಂತುರು ಮಳೆಗಳ ಕೃಪೆಯೂ ಒಂದೊಮ್ಮೆ ದೊರಕೀತು. ಎಲ್ಲವೂ ನಿಸರ್ಗದ ಕೃಪೆಯಷ್ಟೇ! ಸಾಯುಜ್ಯದ ದಾರಿಯಲ್ಲಿ ಅದೂ ಒಂದು ಅನುಭವ, ಅಷ್ಟೇ! ಅದೇ ಎಲ್ಲವೂ ಅಲ್ಲ.

ಇತಿಹಾಸವು ರೂಪಿಸುವ ಮುಖದ ಮೇಲಿನ ಗಾಯಗಳ ನಿಜವಾದ ವ್ಯಂಗ್ಯ ಮತ್ತು ದುರಂತವೆಂದರೆ, ಈ ಗಾಯಗಳು ಉಳಿದವರಿಗೆ ಸ್ಫಟಿಕದಂತೆ ಗೋಚರಿಸುತ್ತವೆ, ಆದರೆ ಅವನ್ನು ಹೊತ್ತವರಿಗೆ ಮಾತ್ರ ಕಾಣಿಸುವುದಿಲ್ಲ. ಮನುಷ್ಯಲೋಕದ ಈ ರೂಕ್ಷ ವಾಸ್ತವವನ್ನು ಮರೆಯಾಗಿಸಲೆಂಬಂತೆ ನಮ್ಮ ಜನಪದ ದೈವಾರಾಧನೆಗಳು ‘ಮುಖಮರೆ’ ಅಥವ ಬೇರೊಂದು ರೂಪವನ್ನು ತೊಟ್ಟು ನಮ್ಮೆದುರು ಕಾಣಿಸಿಕೊಳ್ಳುತ್ತವೆ. ಸತ್ಯದ ನಿಯಮವನ್ನು ‘ಕಾರಣಿಕೆ’ಯ ಮೂಲಕ ಅರುಹುತ್ತವೆ! ಇವು ಬೇರೊಂದು ಲೋಕದಿಂದ ಬರುತ್ತಿದ್ದರೂ ನಮ್ಮ ಪೂರ್ವಿಕರದೇ ಆಗಿರುತ್ತವೆ. ಅಷ್ಟರಮಟ್ಟಿಗೆ ದೈವಕ್ಕೆ ನಮ್ಮ ಬದುಕಿನ ಪಡಿಪಾಟಲು ಏನೆಂದು ತಿಳಿದಿದೆ! ಹೀಗೆ ತಿಳಿದಿರುವುದರಿಂದಲೇ ಅವು ನಮ್ಮನ್ನು ವಿಮರ್ಶಿಸಿ, ಶಿಕ್ಷಿಸಿ, ಶಮನಗೊಳಿಸಬಲ್ಲುವು.
ಮೇಲಿನ ಎಲ್ಲ ಮಾತುಗಳು ಸಾಪೇಕ್ಷಿತ ಸತ್ಯಶೋಧಕನಿಗೂ ಅನ್ವಯ. ಆತ ಸಿದ್ಧಮಾದರಿಯ ಪರಿಕರಗಳೊಂದಿಗೆ ಎಲ್ಲವನ್ನೂ ಅರಿತುಕೊಳ್ಳುವೆ ಎಂಬ ಹಂಕಾರದಲಿ ಹೊರಡದಿರುವ ‘ದಿಗಂಬರ.’

ಒಂದು ಸಿದ್ಧಾಂತಕ್ಕೆ ಕಟ್ಟು ಬೀಳದೆ, ಒಂದು ಕಡೆ ನೆಲೆ ನಿಲ್ಲದೆ, ನಿರಂತರ ಜಂಗಮ ತತ್ತ್ವದಲಿ ನಂಬಿಕೆಯಿಟ್ಟ ಸವಣ.
ಒಂದೇ ಬಗೆಯ ನಾಲಗೆ ರುಚಿಗೆ (ಮಾತು) ಕಟ್ಟು ಬೀಳದೆ ಒಡಲನ್ನು ಹಸಿವಿನಿಂದ ಕಂಗೆಡಿಸಬಲ್ಲ ಸಂಯಮಿ. ಉಪವಾಸಿಗ, ಉಪಾಸಕ.

ಏಕಬಗೆಯ ಜನರನ್ನು ನೋಡುತ್ತ, ಭೇಟಿಯಾಗುತ್ತ ಲೋಲುಪ ವಾಚಾಳಿಯಾಗುವ ಬದಲು ದೇಶಭಾಷಿಕ ಗಡಿಗಳ ಮೀರಿ ನಡೆದು ಉಳಿದ ಜನರಾಡುವ ಸೊಲ್ಲಿನ ಒಂದೆರಡು ಶಬ್ದಗಳನು ಕಲಿತು, ಅರಿತುಕೊಳ್ಳುವ ಕಲಿಕೆದಾರ.

ಸ್ಥಿತಪ್ರಜ್ಞ, ಸ್ಥಾವರ, ಏಕತಾನದ ಕಟ್ಟುಪಾಡುಗಳಿಗಿಂತ ಕಟ್ಟು ಬಿಚ್ಚಿಟ್ಟ, ಕಗ್ಗಂಟಾದ, ಚಿನ್ನ ಮತ್ತು ಚಿಂದಿಗಳಿರುವ ಗಂಟನ್ನು ಬಿಚ್ಚಿ ನೋಡುವ ‘ಬಹುತ್ವ’ದ ಕುತೂಹಲಿ.
ಕಾಲು ನಡಿಗೆ ಕೂಡ ಸೊಗಸುಗಾರರ ‘ರೂಢಿಸಿಕೊಂಡ ಶೈಲಿಯ’ ನಡಿಗೆಯಾಗುವ;
ಪಡೆದ ಅನುಭವವು (ಕ್ಷೇತ್ರಕಾರ್ಯ) ಹಳಸಿದ ಅನ್ನವಾಗುವ, ಕೇಳಿಸಿಕೊಂಡಿದ್ದೇನೆಂಬ ಭ್ರಮೆಯಲ್ಲಿರುವ ‘ಕಾಲಜ್ಞಾನ’ದ ಮಾತು ಕೂಡ ಲೊಳಲೊಟ್ಟೆಯಾಗುವ ಅಪಾಯ ಸತ್ಯಶೋಧಕನಿಗೆ ಕಟ್ಟಿಟ್ಟ ಬುತ್ತಿ. ಆತ ‘ತಾನೊಬ್ಬ ದಿಗಂಬರ, ‘ಕವಣಿಗ’. ತನ್ನ ಕೈಯಲ್ಲಿ ಯಾವ ಪರಿಕರಗಳೂ ಇಲ್ಲ, ತಾನು ನಡೆದು ಸವೆಸಬೇಕಾದ ದಾರಿ ಬಲು ದೂರ. ಇನ್ನೂ ಕೇಳಬೇಕಾದ ನಿಸರ್ಗದ ಸಹಜ ಚೆಲುವಿನ ದನಿಗಳು, ಅದು ನೀಡುವ ಎಲ್ಲ ಬಗೆಯ ಅನುಭವಗಳು, ಕೇಳದ ಮಾತುಗಳು ಬಹಳ ಇವೆ. ಸಿಕ್ಕ ಮಾನವ ದಿವ್ಯಾನುಭವವನ್ನೇ ಕವಣೆ*ಯನ್ನಾಗಿ ಮಾಡಿಕೊಳ್ಳಬೇಕು’ ಎಂದು ಅರಿತಿದ್ದರೆ ಆತನ ಅನುಭವದ ಗಂಟಿನ ಬುತ್ತಿ ಮುಂದಿನವರ ನಾಲಗೆಗೆ ತುಸು ರುಚಿಯನ್ನು, ಕಣ್ಣಗೆ ಪಸೆಯನ್ನು, ಒಡಲಿಗೆ ತಣ್ಣಗಿನ ಭಾವವನ್ನು ಕಾಲಿಗೆ ಕಸುವನ್ನು ನೀಡುತ್ತವೆ.

ಇಷ್ಟೂ ಮಾತುಗಳನ್ನು ಬರೆಯುತ್ತಿರುವುದು ನನಗಿಂತ ಕಿರಿಯರಾದ ಆದರೆ ವಿನಯ, ಸಂಯಮ, ಅಪಾರ ಸಹನೆಗಳನ್ನು ಹೊಂದಿ ಹೆಜ್ಜೆ ಇಡುತ್ತಿರುವ ದಿಗಂಬರ ಸವಣ ಎ.ಎಸ್‌. ಪ್ರಭಾಕರ ಅವರಿಗಾಗಿ. ಮೇಲಿನ ಮಾತುಗಳಿಗೆ ಸಮರ್ಥನೆಯಂತೆ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಪುಸ್ತಕದ ಪ್ರಬಂಧಗಳು ರೂಪುಗೊಂಡಿವೆ. ಅಲ್ಲಿ ಹೆಮ್ಮರವಾಗುವ ಬೀಜದ ಮಾತುಗಳು ಅಡಗಿವೆ.

ಈ ಭಾನುವಾರ ಬಿಡುಗಡೆಯಾಗಿರುವ ಅವರ ಈ ಪುಸ್ತಕ ಕೊಂಡು ಓದಿ. ಪ್ರಭಾಕರ ಅವರ ಬರಿಗಾಲಿನ ಹೆಜ್ಜೆ ಬಹುದೂರ ಸಾಗಲಿ. ಅಂತಹ ಸಾಮರ್ಥ್ಯ ಅವರಿಗಿದೆ.
(ಇದೇ ಮಾತುಗಳನ್ನು ನನಗಿಂತ ವಯಸ್ಸಿನಲ್ಲಿಯಷ್ಟೇ ಚಿಕ್ಕವರಾದ ಸುರೇಶ ನಾಗಲಮಡಿಕೆ, ಅರುಣ್‌ ಜೋಳದಕೂಡ್ಲಿಗಿ, ಸುಧಾಕರ ದೇವಾಡಿಗ, ಆರಡಿ ಮಲ್ಲಯ್ಯ ಕಟ್ಟೇರ, ರಂಗನಾಥ ಕಂಟನಕುಂಟೆ, ವಿನಯ ನಂದೀಹಾಳ ಮತ್ತು ಅಂಥ ಯುವ ಸಂಶೋಧರ ಬಗ್ಗೆಯೂ ಹೇಳಬಹುದು.)

*
ಕವಣೆ: ಕ್ಲಾದ್‌ ಲೆವಿ ಸ್ಟ್ರಾಸ್‌ ಇದನ್ನು ಬ್ರಿಕೊಲೆಜ್‌ ಎನ್ನುತ್ತಾನೆ. ಗ್ರಾಹ್ಯ ಮಾನವ ಅನುಭವದಲ್ಲಿ ಕೈಗೆ ದೊರಕಿದ್ದನ್ನೇ ಸತತ ಪರಿಶ್ರಮದ ಮೂಲಕ ಪಳಗಿಸಿ, ತಾನೇ ಮಾಡುತ್ತ, ಮಾಡುತ್ತ ಕಲಿಯುವ ಅಥವ ಪರಿಕರವೊಂದನ್ನು ರೂಪಿಸಿಕೊಳ್ಳುವ ಪ್ರಕ್ರಿಯೆ.

  • ಕೇಶವ ಮಳಗಿ 

ಪುಸ್ತಕ ಕೊಳ್ಳಲು ಬಯಸುವವರು ಕೆಳಗಿನ ಕೊಂಡಿ ಬಳಸಿ

ಚಹರೆಗಳೆಂದರೆ ಗಾಯಗಳೂ ಹೌದು -ಸಮುದಾಯ ಅಧ್ಯಯನ ಕುರಿತ ಕಥನಗಳು
ಲೇಖಕರು- ಡಾ.ಎ.ಎಸ್.ಪ್ರಭಾಕರ್
ಬೆಲೆ- 250/-
ಗೂಗಲ್ ಪೆ- 9880302817

ಆನ್‌ಲೈನ್ ಮೂಲಕ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ‘ಚಹರೆಗಳೆಂದರೆ ಗಾಯಗಳೂ ಹೌದು’ ಒಂದು ಸಕಾಲಿಕ ಮೌಲಿಕ ಕೃತಿ – ನಾ ದಿವಾಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...