Homeಮುಖಪುಟಕಾಲು ನಡಿಗೆಯ ದಿಗಂಬರ ಶ್ರಮಣಿಕೆ, ಸತ್ಯಶೋಧನೆಯ ಸಾರ್ಥಕತೆ: ಕೇಶವ ಮಳಗಿ

ಕಾಲು ನಡಿಗೆಯ ದಿಗಂಬರ ಶ್ರಮಣಿಕೆ, ಸತ್ಯಶೋಧನೆಯ ಸಾರ್ಥಕತೆ: ಕೇಶವ ಮಳಗಿ

- Advertisement -
- Advertisement -

ತಾನು ಹುಟ್ಟಿ ಎರಡೂವರೆ ಸಾವಿರ ವರ್ಷಗಳ ಬಳಿಕವೂ ಜೈನಧರ್ಮದ ಸನ್ಯಾಸಿಗಳು ಇಂದಿಗೂ ಕಾಲು ನಡಿಗೆಯಲ್ಲಿಯೇ ತಮ್ಮ ಪರಿಕ್ರಮಣವನ್ನು ಪೂರೈಸಬೇಕಿರುವುದು ನನ್ನನ್ನು ವರ್ಷಗಳಿಂದ ವಿಸ್ಮಯ, ಅಚ್ಚರಿ ಮತ್ತು ಜಿಜ್ಞಾಸೆಗೆ ತಳ್ಳಿದೆ. ಬೇರಾವ ದರ್ಶನಗಳು ಇಂಥದ್ದೊಂದು ಕಠಿಣ ನಿಯಮವನ್ನು ಪಾಲಿಸಿಕೊಂಡು ಬಂದಿವೆಯೋ ಗೊತ್ತಿಲ್ಲ.
ಪರಿತ್ಯಾಗಿ ದಿಗಂಬರ ಮೊದಲು ಎಲ್ಲವನ್ನೂ ಕಳಚಬೇಕು. ಬಳಿಕ ತನ್ನನ್ನು ನಿಸರ್ಗಕ್ಕೆ ಒಪ್ಪಿಸಿಕೊಳ್ಳಬೇಕು. ಲೋಕವನ್ನು ನಗ್ನ ಸ್ಥಿತಿಯಲ್ಲಿಯೇ ಎದುರುಕೊಳ್ಳುತ್ತಲೇ ಅಂತಿಮವಾಗಿ ಪ್ರಕೃತಿಯಲ್ಲಿ ಒಂದಾಗಬೇಕು.

ಇಲ್ಲಿ ಎಲ್ಲವೂ ಅನಿರೀಕ್ಷಿತ, ದುರ್ಗಮ, ಅಗಮ್ಯ, ಅಗೋಚರ. ನಿರೀಕ್ಷಿತವಾದುದೆಂದರೆ ಆ ಕ್ಷಣಕ್ಕೆ ಎದುರಾಗುವ ಅನುಭವ ಮಾತ್ರ. ದೇಹದ ಐದೂ ಬಗೆಯ ‘ಗೋಚರ’ ಇಂದ್ರೀಯಗಳು; ಏಕಕಾಲಕ್ಕೆ ಅಸ್ತಿತ್ವದಲ್ಲಿರುವ ಅಗೋಚರವಾದ ಹಲ ಬಗೆಯ ‘ಮನಸ್ಸು’ಗಳನ್ನು ಈ ಸವಣ ‘ಪಂಚಭೂತ’ಗಳೊಂದಿಗೆ ನೇರ ಮುಖಾಮುಖಿಯಾಗಿಸಬೇಕಾಗುತ್ತದೆ. ರಾಜರಸ್ತೆಯ ನುಣುಪು, ಕಾಡಿನ ಕಾಲುದಾರಿಗಳ ಹುಲ್ಲು-ಮುಳ್ಳು, ಪಾದಕ್ಕೆ ಆಣೆ ಎಬ್ಬಿಸಬಲ್ಲ ಹಳಕು ಹರಳು, ಬೆಳಚುಗಲ್ಲು ತುಳಿದು ಮುಂದೆ ಹೋಗಬೇಕಾಗುತ್ತದೆ. ಭಯಾನಕ ಬಿಸಿಲು, ಗಾಳಿ, ತಂಪನೀವ ನೆರಳು, ಹೂವಿನಂತೆ ತಲೆ ಸವರುವ ತುಂತುರು ಮಳೆಗಳ ಕೃಪೆಯೂ ಒಂದೊಮ್ಮೆ ದೊರಕೀತು. ಎಲ್ಲವೂ ನಿಸರ್ಗದ ಕೃಪೆಯಷ್ಟೇ! ಸಾಯುಜ್ಯದ ದಾರಿಯಲ್ಲಿ ಅದೂ ಒಂದು ಅನುಭವ, ಅಷ್ಟೇ! ಅದೇ ಎಲ್ಲವೂ ಅಲ್ಲ.

ಇತಿಹಾಸವು ರೂಪಿಸುವ ಮುಖದ ಮೇಲಿನ ಗಾಯಗಳ ನಿಜವಾದ ವ್ಯಂಗ್ಯ ಮತ್ತು ದುರಂತವೆಂದರೆ, ಈ ಗಾಯಗಳು ಉಳಿದವರಿಗೆ ಸ್ಫಟಿಕದಂತೆ ಗೋಚರಿಸುತ್ತವೆ, ಆದರೆ ಅವನ್ನು ಹೊತ್ತವರಿಗೆ ಮಾತ್ರ ಕಾಣಿಸುವುದಿಲ್ಲ. ಮನುಷ್ಯಲೋಕದ ಈ ರೂಕ್ಷ ವಾಸ್ತವವನ್ನು ಮರೆಯಾಗಿಸಲೆಂಬಂತೆ ನಮ್ಮ ಜನಪದ ದೈವಾರಾಧನೆಗಳು ‘ಮುಖಮರೆ’ ಅಥವ ಬೇರೊಂದು ರೂಪವನ್ನು ತೊಟ್ಟು ನಮ್ಮೆದುರು ಕಾಣಿಸಿಕೊಳ್ಳುತ್ತವೆ. ಸತ್ಯದ ನಿಯಮವನ್ನು ‘ಕಾರಣಿಕೆ’ಯ ಮೂಲಕ ಅರುಹುತ್ತವೆ! ಇವು ಬೇರೊಂದು ಲೋಕದಿಂದ ಬರುತ್ತಿದ್ದರೂ ನಮ್ಮ ಪೂರ್ವಿಕರದೇ ಆಗಿರುತ್ತವೆ. ಅಷ್ಟರಮಟ್ಟಿಗೆ ದೈವಕ್ಕೆ ನಮ್ಮ ಬದುಕಿನ ಪಡಿಪಾಟಲು ಏನೆಂದು ತಿಳಿದಿದೆ! ಹೀಗೆ ತಿಳಿದಿರುವುದರಿಂದಲೇ ಅವು ನಮ್ಮನ್ನು ವಿಮರ್ಶಿಸಿ, ಶಿಕ್ಷಿಸಿ, ಶಮನಗೊಳಿಸಬಲ್ಲುವು.
ಮೇಲಿನ ಎಲ್ಲ ಮಾತುಗಳು ಸಾಪೇಕ್ಷಿತ ಸತ್ಯಶೋಧಕನಿಗೂ ಅನ್ವಯ. ಆತ ಸಿದ್ಧಮಾದರಿಯ ಪರಿಕರಗಳೊಂದಿಗೆ ಎಲ್ಲವನ್ನೂ ಅರಿತುಕೊಳ್ಳುವೆ ಎಂಬ ಹಂಕಾರದಲಿ ಹೊರಡದಿರುವ ‘ದಿಗಂಬರ.’

ಒಂದು ಸಿದ್ಧಾಂತಕ್ಕೆ ಕಟ್ಟು ಬೀಳದೆ, ಒಂದು ಕಡೆ ನೆಲೆ ನಿಲ್ಲದೆ, ನಿರಂತರ ಜಂಗಮ ತತ್ತ್ವದಲಿ ನಂಬಿಕೆಯಿಟ್ಟ ಸವಣ.
ಒಂದೇ ಬಗೆಯ ನಾಲಗೆ ರುಚಿಗೆ (ಮಾತು) ಕಟ್ಟು ಬೀಳದೆ ಒಡಲನ್ನು ಹಸಿವಿನಿಂದ ಕಂಗೆಡಿಸಬಲ್ಲ ಸಂಯಮಿ. ಉಪವಾಸಿಗ, ಉಪಾಸಕ.

ಏಕಬಗೆಯ ಜನರನ್ನು ನೋಡುತ್ತ, ಭೇಟಿಯಾಗುತ್ತ ಲೋಲುಪ ವಾಚಾಳಿಯಾಗುವ ಬದಲು ದೇಶಭಾಷಿಕ ಗಡಿಗಳ ಮೀರಿ ನಡೆದು ಉಳಿದ ಜನರಾಡುವ ಸೊಲ್ಲಿನ ಒಂದೆರಡು ಶಬ್ದಗಳನು ಕಲಿತು, ಅರಿತುಕೊಳ್ಳುವ ಕಲಿಕೆದಾರ.

ಸ್ಥಿತಪ್ರಜ್ಞ, ಸ್ಥಾವರ, ಏಕತಾನದ ಕಟ್ಟುಪಾಡುಗಳಿಗಿಂತ ಕಟ್ಟು ಬಿಚ್ಚಿಟ್ಟ, ಕಗ್ಗಂಟಾದ, ಚಿನ್ನ ಮತ್ತು ಚಿಂದಿಗಳಿರುವ ಗಂಟನ್ನು ಬಿಚ್ಚಿ ನೋಡುವ ‘ಬಹುತ್ವ’ದ ಕುತೂಹಲಿ.
ಕಾಲು ನಡಿಗೆ ಕೂಡ ಸೊಗಸುಗಾರರ ‘ರೂಢಿಸಿಕೊಂಡ ಶೈಲಿಯ’ ನಡಿಗೆಯಾಗುವ;
ಪಡೆದ ಅನುಭವವು (ಕ್ಷೇತ್ರಕಾರ್ಯ) ಹಳಸಿದ ಅನ್ನವಾಗುವ, ಕೇಳಿಸಿಕೊಂಡಿದ್ದೇನೆಂಬ ಭ್ರಮೆಯಲ್ಲಿರುವ ‘ಕಾಲಜ್ಞಾನ’ದ ಮಾತು ಕೂಡ ಲೊಳಲೊಟ್ಟೆಯಾಗುವ ಅಪಾಯ ಸತ್ಯಶೋಧಕನಿಗೆ ಕಟ್ಟಿಟ್ಟ ಬುತ್ತಿ. ಆತ ‘ತಾನೊಬ್ಬ ದಿಗಂಬರ, ‘ಕವಣಿಗ’. ತನ್ನ ಕೈಯಲ್ಲಿ ಯಾವ ಪರಿಕರಗಳೂ ಇಲ್ಲ, ತಾನು ನಡೆದು ಸವೆಸಬೇಕಾದ ದಾರಿ ಬಲು ದೂರ. ಇನ್ನೂ ಕೇಳಬೇಕಾದ ನಿಸರ್ಗದ ಸಹಜ ಚೆಲುವಿನ ದನಿಗಳು, ಅದು ನೀಡುವ ಎಲ್ಲ ಬಗೆಯ ಅನುಭವಗಳು, ಕೇಳದ ಮಾತುಗಳು ಬಹಳ ಇವೆ. ಸಿಕ್ಕ ಮಾನವ ದಿವ್ಯಾನುಭವವನ್ನೇ ಕವಣೆ*ಯನ್ನಾಗಿ ಮಾಡಿಕೊಳ್ಳಬೇಕು’ ಎಂದು ಅರಿತಿದ್ದರೆ ಆತನ ಅನುಭವದ ಗಂಟಿನ ಬುತ್ತಿ ಮುಂದಿನವರ ನಾಲಗೆಗೆ ತುಸು ರುಚಿಯನ್ನು, ಕಣ್ಣಗೆ ಪಸೆಯನ್ನು, ಒಡಲಿಗೆ ತಣ್ಣಗಿನ ಭಾವವನ್ನು ಕಾಲಿಗೆ ಕಸುವನ್ನು ನೀಡುತ್ತವೆ.

ಇಷ್ಟೂ ಮಾತುಗಳನ್ನು ಬರೆಯುತ್ತಿರುವುದು ನನಗಿಂತ ಕಿರಿಯರಾದ ಆದರೆ ವಿನಯ, ಸಂಯಮ, ಅಪಾರ ಸಹನೆಗಳನ್ನು ಹೊಂದಿ ಹೆಜ್ಜೆ ಇಡುತ್ತಿರುವ ದಿಗಂಬರ ಸವಣ ಎ.ಎಸ್‌. ಪ್ರಭಾಕರ ಅವರಿಗಾಗಿ. ಮೇಲಿನ ಮಾತುಗಳಿಗೆ ಸಮರ್ಥನೆಯಂತೆ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಪುಸ್ತಕದ ಪ್ರಬಂಧಗಳು ರೂಪುಗೊಂಡಿವೆ. ಅಲ್ಲಿ ಹೆಮ್ಮರವಾಗುವ ಬೀಜದ ಮಾತುಗಳು ಅಡಗಿವೆ.

ಈ ಭಾನುವಾರ ಬಿಡುಗಡೆಯಾಗಿರುವ ಅವರ ಈ ಪುಸ್ತಕ ಕೊಂಡು ಓದಿ. ಪ್ರಭಾಕರ ಅವರ ಬರಿಗಾಲಿನ ಹೆಜ್ಜೆ ಬಹುದೂರ ಸಾಗಲಿ. ಅಂತಹ ಸಾಮರ್ಥ್ಯ ಅವರಿಗಿದೆ.
(ಇದೇ ಮಾತುಗಳನ್ನು ನನಗಿಂತ ವಯಸ್ಸಿನಲ್ಲಿಯಷ್ಟೇ ಚಿಕ್ಕವರಾದ ಸುರೇಶ ನಾಗಲಮಡಿಕೆ, ಅರುಣ್‌ ಜೋಳದಕೂಡ್ಲಿಗಿ, ಸುಧಾಕರ ದೇವಾಡಿಗ, ಆರಡಿ ಮಲ್ಲಯ್ಯ ಕಟ್ಟೇರ, ರಂಗನಾಥ ಕಂಟನಕುಂಟೆ, ವಿನಯ ನಂದೀಹಾಳ ಮತ್ತು ಅಂಥ ಯುವ ಸಂಶೋಧರ ಬಗ್ಗೆಯೂ ಹೇಳಬಹುದು.)

*
ಕವಣೆ: ಕ್ಲಾದ್‌ ಲೆವಿ ಸ್ಟ್ರಾಸ್‌ ಇದನ್ನು ಬ್ರಿಕೊಲೆಜ್‌ ಎನ್ನುತ್ತಾನೆ. ಗ್ರಾಹ್ಯ ಮಾನವ ಅನುಭವದಲ್ಲಿ ಕೈಗೆ ದೊರಕಿದ್ದನ್ನೇ ಸತತ ಪರಿಶ್ರಮದ ಮೂಲಕ ಪಳಗಿಸಿ, ತಾನೇ ಮಾಡುತ್ತ, ಮಾಡುತ್ತ ಕಲಿಯುವ ಅಥವ ಪರಿಕರವೊಂದನ್ನು ರೂಪಿಸಿಕೊಳ್ಳುವ ಪ್ರಕ್ರಿಯೆ.

  • ಕೇಶವ ಮಳಗಿ 

ಪುಸ್ತಕ ಕೊಳ್ಳಲು ಬಯಸುವವರು ಕೆಳಗಿನ ಕೊಂಡಿ ಬಳಸಿ

ಚಹರೆಗಳೆಂದರೆ ಗಾಯಗಳೂ ಹೌದು -ಸಮುದಾಯ ಅಧ್ಯಯನ ಕುರಿತ ಕಥನಗಳು
ಲೇಖಕರು- ಡಾ.ಎ.ಎಸ್.ಪ್ರಭಾಕರ್
ಬೆಲೆ- 250/-
ಗೂಗಲ್ ಪೆ- 9880302817

ಆನ್‌ಲೈನ್ ಮೂಲಕ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ‘ಚಹರೆಗಳೆಂದರೆ ಗಾಯಗಳೂ ಹೌದು’ ಒಂದು ಸಕಾಲಿಕ ಮೌಲಿಕ ಕೃತಿ – ನಾ ದಿವಾಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...