Homeಕರ್ನಾಟಕಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ | ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ | ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ನಡೆದ ಭೂಕಬಳಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಆರು ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪವನ್ನು ಅವರ ವಿರುದ್ಧ ಹೊರಿಸಲಾಗಿದ್ದು, ಮಾರ್ಚ್ 18 ರಂದು ರಾಮನಗರ ತಹಶೀಲ್ದಾರ್ ಈ ಬಗ್ಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ

ಆದಾಗ್ಯೂ, ಈ ಆರೋಪವನ್ನು ಕುಮಾರಸ್ವಾಮಿ ನಿರಾಕರಿಸಿದ್ದು, 1985 ಮತ್ತು 1987 ರ ನಡುವೆ ನೋಂದಾಯಿತ ಮಾರಾಟ ಪತ್ರಗಳ ಮೂಲಕ ಗ್ರಾಮದಲ್ಲಿ ಕಾನೂನುಬದ್ಧವಾಗಿ ವಿವಿಧ ನಿವೇಶನಗಳನ್ನು ಖರೀದಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ತಾನು ಸುಮಾರು 40 ವರ್ಷಗಳಿಂದ ಭೂಮಿಯನ್ನು ಕಾನೂನುಬದ್ಧವಾಗಿ ಹೊಂದಿರುವುದಾಗಿ ಅವರು ಹೇಳಿದ್ದಾರೆ.

ನೋಟಿಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಕುಮಾರಸ್ವಾಮಿ ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ತಾನು ಮತ್ತು ಮಾರಾಟಗಾರರು ಇಬ್ಬರೂ ಮಾನ್ಯ ಮಾಲೀಕತ್ವದ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಎಲ್ಲಾ ದಾಖಲೆಗಳು ದೃಢಪಡಿಸಿವೆ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಹಾಯಕ ಆಯುಕ್ತರಿಗೆ ಮಾತ್ರ ಅಂತಹ ಅಧಿಕಾರವಿರುವುದರಿಂದ ತಹಸೀಲ್ದಾರ್‌ಗೆ ನೋಟಿಸ್ ನೀಡುವ ಅಧಿಕಾರವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಮಂಗಳವಾರ, ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರ ಏಕ ಪೀಠವು ತಹಸೀಲ್ದಾರ್ ಅವರ ನೋಟಿಸ್ ಶೋಕಾಸ್ ನೋಟಿಸ್ ಆಗಿರುವುದರಿಂದ, ಮೊದಲು ಪ್ರತಿಕ್ರಿಯೆಯನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನೋಟಿಸ್‌ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವನ್ನು ನೀಡಲಾಗಿದೆ” ಎಂದು ನ್ಯಾಯಾಲಯವು ಹೇಳಿದ್ದು, ಏಪ್ರಿಲ್ 22 ರಂದು ಪ್ರಕರಣವನ್ನು ಮುಂದಿನ ವಿಚಾರಣೆಗೆ ನಿಗದಿಪಡಿಸಿದೆ.

ಪ್ರತ್ಯೇಕ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಈ ಪ್ರಕರಣದ ವಿಚಾರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಫೆಬ್ರವರಿಯಲ್ಲಿ ನಿರಾಕರಿಸಿತು. ಬನಶಂಕರಿ ಪ್ರದೇಶದ ಹಲಗಿ ವಡೇರಹಳ್ಳಿ ಗ್ರಾಮದಲ್ಲಿ 1997 ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡ ಎರಡು ಎಕರೆ 24 ಗುಂಟೆ ಭೂಮಿಯನ್ನು ಡಿ-ನೋಟಿಫೈ ಮಾಡಿದ ಪ್ರಕರಣ ಇದಾಗಿದೆ.

2007 ರಲ್ಲಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಕ್ಷೇಪಣೆಗಳ ಹೊರತಾಗಿಯೂ ಭೂಮಿಯನ್ನು ಡಿ-ನೋಟಿಫೈ ಮಾಡಲು ಆದೇಶಿಸಿದ್ದರು. ನಂತರ 2010 ರಲ್ಲಿ ಈ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ 4.14 ಕೋಟಿ ರೂ.ಗೆ ಮಾರಾಟ ಮಾಡಲಾಯಿತು ಎಂದು ವರದಿಯಾಗಿದೆ. ಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....