Homeಕರ್ನಾಟಕಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌ ಗುರುವಾರ (ಏ.17) ಸಮಾಜ ಪರಿವರ್ತನಾ ಸಮುದಾಯಕ್ಕೆ ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಕುಮಾರಸ್ವಾಮಿ ಅವರ ಅರ್ಜಿ ಇತ್ಯರ್ಥಪಡಿಸುವಾಗ ಸುಪ್ರೀಂ ಕೋರ್ಟ್‌ ಮಾಡಿರುವ ಆದೇಶದ ಅನ್ವಯ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತುಕೆ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಸಮಾಜ ಪರಿವರ್ತನಾ ಸಮುದಾಯದ ಪರ ಹಿರಿಯ ವಕೀಲ ಎಸ್‌ ಬಸವರಾಜು ಅವರಿಗೆ ಕುಮಾರಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿಸಿ ತಿದ್ದುಪಡಿ ಮಾಡುವಂತೆ ನಿರ್ದೇಶಿಸಿತು. ಅಲ್ಲದೇ, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರಿಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ್ದು, ಆನಂತರ ಪ್ರತ್ಯುತ್ತರ ದಾಖಲಿಸಲು ಬಸವರಾಜು ಅವರಿಗೆ ಅನುಮತಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ ಎಂದು ವರದಿ ತಿಳಿಸಿದೆ.

ಇದಕ್ಕೂ ಮುನ್ನ, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಉದಯ್‌ ಹೊಳ್ಳ ಅವರು “ಲೋಕಾಯುಕ್ತ ವರದಿಯಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಮುಕ್ತ ಮಾಡಲಾಗಿದೆ. ವಿಭಾಗೀಯ ಪೀಠದ ಮುಂದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ಕುಮಾರಸ್ವಾಮಿಯನ್ನು ಪ್ರತಿವಾದಿಯನ್ನಾಗಿಸಲಾಗಿಲ್ಲ. ನ್ಯಾಯಾಂಗ ನಿಂದನೆ ಅರ್ಜಿಯಲ್ಲೂ ಅವರನ್ನು ಆರೋಪಿಯನ್ನಾಗಿಸಲಾಗಿಲ್ಲ. ತಮ್ಮ ವಾದವನ್ನು ಮಂಡಿಸಲು ಅವಕಾಶವೇ ಸಿಕ್ಕಿಲ್ಲ. ಹೀಗಾಗಿ, ಹಾಲಿ ಅರ್ಜಿಯಲ್ಲಿ ತಮ್ಮನ್ನು ಆರೋಪಿಯನ್ನಾಗಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದರು.

ಬಸವರಾಜು ಅವರು “ವಿಭಾಗೀಯ ಪೀಠದ ಮುಂದಿದ್ದ ಪಿಐಎಲ್‌ನಲ್ಲಿ ಹಲವು ಮಂದಿಯನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ನ್ಯಾಯಾಲಯದ ಸೂಚನೆ ಆಧರಿಸಿ ಎಲ್ಲರನ್ನೂ ಕೈಬಿಡಲಾಗಿತ್ತು. ಆನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಾಗ ರಿಜಿಸ್ಟ್ರಿ ಆಕ್ಷೇಪಿಸಿದ್ದರಿಂದ ಕುಮಾರಸ್ವಾಮಿ ಮತ್ತಿತರರ ಹೆಸರನ್ನು ಕೈಬಿಡಲಾಗಿತ್ತೇ ವಿನಾ ಉದ್ದೇಶಪೂರ್ವಕವಾಗಿಯಲ್ಲ. ಆರೋಪಿಯಾಗಿ ಕುಮಾರಸ್ವಾಮಿ ಅವರು ಪ್ರಕರಣದಲ್ಲಿ ಭಾಗಿಯಾಗುವುದು ಸಮಂಜಸವಾಗಿದೆ” ಎಂಬುವುದಾಗಿ ವಿವರಿಸಿದರು ಎಂದು ವರದಿ ವಿವರಿಸಿದೆ.

ಮಾರ್ಚ್‌ 28ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌ ಎಡತಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಸೌಜನ್ಯ : barandbench.com

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...