Homeಕರ್ನಾಟಕಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌ ಗುರುವಾರ (ಏ.17) ಸಮಾಜ ಪರಿವರ್ತನಾ ಸಮುದಾಯಕ್ಕೆ ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಕುಮಾರಸ್ವಾಮಿ ಅವರ ಅರ್ಜಿ ಇತ್ಯರ್ಥಪಡಿಸುವಾಗ ಸುಪ್ರೀಂ ಕೋರ್ಟ್‌ ಮಾಡಿರುವ ಆದೇಶದ ಅನ್ವಯ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತುಕೆ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಸಮಾಜ ಪರಿವರ್ತನಾ ಸಮುದಾಯದ ಪರ ಹಿರಿಯ ವಕೀಲ ಎಸ್‌ ಬಸವರಾಜು ಅವರಿಗೆ ಕುಮಾರಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿಸಿ ತಿದ್ದುಪಡಿ ಮಾಡುವಂತೆ ನಿರ್ದೇಶಿಸಿತು. ಅಲ್ಲದೇ, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರಿಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ್ದು, ಆನಂತರ ಪ್ರತ್ಯುತ್ತರ ದಾಖಲಿಸಲು ಬಸವರಾಜು ಅವರಿಗೆ ಅನುಮತಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ ಎಂದು ವರದಿ ತಿಳಿಸಿದೆ.

ಇದಕ್ಕೂ ಮುನ್ನ, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಉದಯ್‌ ಹೊಳ್ಳ ಅವರು “ಲೋಕಾಯುಕ್ತ ವರದಿಯಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಮುಕ್ತ ಮಾಡಲಾಗಿದೆ. ವಿಭಾಗೀಯ ಪೀಠದ ಮುಂದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ಕುಮಾರಸ್ವಾಮಿಯನ್ನು ಪ್ರತಿವಾದಿಯನ್ನಾಗಿಸಲಾಗಿಲ್ಲ. ನ್ಯಾಯಾಂಗ ನಿಂದನೆ ಅರ್ಜಿಯಲ್ಲೂ ಅವರನ್ನು ಆರೋಪಿಯನ್ನಾಗಿಸಲಾಗಿಲ್ಲ. ತಮ್ಮ ವಾದವನ್ನು ಮಂಡಿಸಲು ಅವಕಾಶವೇ ಸಿಕ್ಕಿಲ್ಲ. ಹೀಗಾಗಿ, ಹಾಲಿ ಅರ್ಜಿಯಲ್ಲಿ ತಮ್ಮನ್ನು ಆರೋಪಿಯನ್ನಾಗಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದರು.

ಬಸವರಾಜು ಅವರು “ವಿಭಾಗೀಯ ಪೀಠದ ಮುಂದಿದ್ದ ಪಿಐಎಲ್‌ನಲ್ಲಿ ಹಲವು ಮಂದಿಯನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ನ್ಯಾಯಾಲಯದ ಸೂಚನೆ ಆಧರಿಸಿ ಎಲ್ಲರನ್ನೂ ಕೈಬಿಡಲಾಗಿತ್ತು. ಆನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಾಗ ರಿಜಿಸ್ಟ್ರಿ ಆಕ್ಷೇಪಿಸಿದ್ದರಿಂದ ಕುಮಾರಸ್ವಾಮಿ ಮತ್ತಿತರರ ಹೆಸರನ್ನು ಕೈಬಿಡಲಾಗಿತ್ತೇ ವಿನಾ ಉದ್ದೇಶಪೂರ್ವಕವಾಗಿಯಲ್ಲ. ಆರೋಪಿಯಾಗಿ ಕುಮಾರಸ್ವಾಮಿ ಅವರು ಪ್ರಕರಣದಲ್ಲಿ ಭಾಗಿಯಾಗುವುದು ಸಮಂಜಸವಾಗಿದೆ” ಎಂಬುವುದಾಗಿ ವಿವರಿಸಿದರು ಎಂದು ವರದಿ ವಿವರಿಸಿದೆ.

ಮಾರ್ಚ್‌ 28ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌ ಎಡತಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಸೌಜನ್ಯ : barandbench.com

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....