Homeಕರ್ನಾಟಕಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌ ಗುರುವಾರ (ಏ.17) ಸಮಾಜ ಪರಿವರ್ತನಾ ಸಮುದಾಯಕ್ಕೆ ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಕುಮಾರಸ್ವಾಮಿ ಅವರ ಅರ್ಜಿ ಇತ್ಯರ್ಥಪಡಿಸುವಾಗ ಸುಪ್ರೀಂ ಕೋರ್ಟ್‌ ಮಾಡಿರುವ ಆದೇಶದ ಅನ್ವಯ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತುಕೆ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಸಮಾಜ ಪರಿವರ್ತನಾ ಸಮುದಾಯದ ಪರ ಹಿರಿಯ ವಕೀಲ ಎಸ್‌ ಬಸವರಾಜು ಅವರಿಗೆ ಕುಮಾರಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿಸಿ ತಿದ್ದುಪಡಿ ಮಾಡುವಂತೆ ನಿರ್ದೇಶಿಸಿತು. ಅಲ್ಲದೇ, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರಿಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ್ದು, ಆನಂತರ ಪ್ರತ್ಯುತ್ತರ ದಾಖಲಿಸಲು ಬಸವರಾಜು ಅವರಿಗೆ ಅನುಮತಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ ಎಂದು ವರದಿ ತಿಳಿಸಿದೆ.

ಇದಕ್ಕೂ ಮುನ್ನ, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಉದಯ್‌ ಹೊಳ್ಳ ಅವರು “ಲೋಕಾಯುಕ್ತ ವರದಿಯಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಮುಕ್ತ ಮಾಡಲಾಗಿದೆ. ವಿಭಾಗೀಯ ಪೀಠದ ಮುಂದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ಕುಮಾರಸ್ವಾಮಿಯನ್ನು ಪ್ರತಿವಾದಿಯನ್ನಾಗಿಸಲಾಗಿಲ್ಲ. ನ್ಯಾಯಾಂಗ ನಿಂದನೆ ಅರ್ಜಿಯಲ್ಲೂ ಅವರನ್ನು ಆರೋಪಿಯನ್ನಾಗಿಸಲಾಗಿಲ್ಲ. ತಮ್ಮ ವಾದವನ್ನು ಮಂಡಿಸಲು ಅವಕಾಶವೇ ಸಿಕ್ಕಿಲ್ಲ. ಹೀಗಾಗಿ, ಹಾಲಿ ಅರ್ಜಿಯಲ್ಲಿ ತಮ್ಮನ್ನು ಆರೋಪಿಯನ್ನಾಗಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದರು.

ಬಸವರಾಜು ಅವರು “ವಿಭಾಗೀಯ ಪೀಠದ ಮುಂದಿದ್ದ ಪಿಐಎಲ್‌ನಲ್ಲಿ ಹಲವು ಮಂದಿಯನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ನ್ಯಾಯಾಲಯದ ಸೂಚನೆ ಆಧರಿಸಿ ಎಲ್ಲರನ್ನೂ ಕೈಬಿಡಲಾಗಿತ್ತು. ಆನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಾಗ ರಿಜಿಸ್ಟ್ರಿ ಆಕ್ಷೇಪಿಸಿದ್ದರಿಂದ ಕುಮಾರಸ್ವಾಮಿ ಮತ್ತಿತರರ ಹೆಸರನ್ನು ಕೈಬಿಡಲಾಗಿತ್ತೇ ವಿನಾ ಉದ್ದೇಶಪೂರ್ವಕವಾಗಿಯಲ್ಲ. ಆರೋಪಿಯಾಗಿ ಕುಮಾರಸ್ವಾಮಿ ಅವರು ಪ್ರಕರಣದಲ್ಲಿ ಭಾಗಿಯಾಗುವುದು ಸಮಂಜಸವಾಗಿದೆ” ಎಂಬುವುದಾಗಿ ವಿವರಿಸಿದರು ಎಂದು ವರದಿ ವಿವರಿಸಿದೆ.

ಮಾರ್ಚ್‌ 28ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌ ಎಡತಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಸೌಜನ್ಯ : barandbench.com

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...