Homeಕರ್ನಾಟಕಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌ ಗುರುವಾರ (ಏ.17) ಸಮಾಜ ಪರಿವರ್ತನಾ ಸಮುದಾಯಕ್ಕೆ ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಕುಮಾರಸ್ವಾಮಿ ಅವರ ಅರ್ಜಿ ಇತ್ಯರ್ಥಪಡಿಸುವಾಗ ಸುಪ್ರೀಂ ಕೋರ್ಟ್‌ ಮಾಡಿರುವ ಆದೇಶದ ಅನ್ವಯ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತುಕೆ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಸಮಾಜ ಪರಿವರ್ತನಾ ಸಮುದಾಯದ ಪರ ಹಿರಿಯ ವಕೀಲ ಎಸ್‌ ಬಸವರಾಜು ಅವರಿಗೆ ಕುಮಾರಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿಸಿ ತಿದ್ದುಪಡಿ ಮಾಡುವಂತೆ ನಿರ್ದೇಶಿಸಿತು. ಅಲ್ಲದೇ, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರಿಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ್ದು, ಆನಂತರ ಪ್ರತ್ಯುತ್ತರ ದಾಖಲಿಸಲು ಬಸವರಾಜು ಅವರಿಗೆ ಅನುಮತಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ ಎಂದು ವರದಿ ತಿಳಿಸಿದೆ.

ಇದಕ್ಕೂ ಮುನ್ನ, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಉದಯ್‌ ಹೊಳ್ಳ ಅವರು “ಲೋಕಾಯುಕ್ತ ವರದಿಯಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಮುಕ್ತ ಮಾಡಲಾಗಿದೆ. ವಿಭಾಗೀಯ ಪೀಠದ ಮುಂದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ಕುಮಾರಸ್ವಾಮಿಯನ್ನು ಪ್ರತಿವಾದಿಯನ್ನಾಗಿಸಲಾಗಿಲ್ಲ. ನ್ಯಾಯಾಂಗ ನಿಂದನೆ ಅರ್ಜಿಯಲ್ಲೂ ಅವರನ್ನು ಆರೋಪಿಯನ್ನಾಗಿಸಲಾಗಿಲ್ಲ. ತಮ್ಮ ವಾದವನ್ನು ಮಂಡಿಸಲು ಅವಕಾಶವೇ ಸಿಕ್ಕಿಲ್ಲ. ಹೀಗಾಗಿ, ಹಾಲಿ ಅರ್ಜಿಯಲ್ಲಿ ತಮ್ಮನ್ನು ಆರೋಪಿಯನ್ನಾಗಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದರು.

ಬಸವರಾಜು ಅವರು “ವಿಭಾಗೀಯ ಪೀಠದ ಮುಂದಿದ್ದ ಪಿಐಎಲ್‌ನಲ್ಲಿ ಹಲವು ಮಂದಿಯನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ನ್ಯಾಯಾಲಯದ ಸೂಚನೆ ಆಧರಿಸಿ ಎಲ್ಲರನ್ನೂ ಕೈಬಿಡಲಾಗಿತ್ತು. ಆನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಾಗ ರಿಜಿಸ್ಟ್ರಿ ಆಕ್ಷೇಪಿಸಿದ್ದರಿಂದ ಕುಮಾರಸ್ವಾಮಿ ಮತ್ತಿತರರ ಹೆಸರನ್ನು ಕೈಬಿಡಲಾಗಿತ್ತೇ ವಿನಾ ಉದ್ದೇಶಪೂರ್ವಕವಾಗಿಯಲ್ಲ. ಆರೋಪಿಯಾಗಿ ಕುಮಾರಸ್ವಾಮಿ ಅವರು ಪ್ರಕರಣದಲ್ಲಿ ಭಾಗಿಯಾಗುವುದು ಸಮಂಜಸವಾಗಿದೆ” ಎಂಬುವುದಾಗಿ ವಿವರಿಸಿದರು ಎಂದು ವರದಿ ವಿವರಿಸಿದೆ.

ಮಾರ್ಚ್‌ 28ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌ ಎಡತಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಸೌಜನ್ಯ : barandbench.com

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...