Homeಕರ್ನಾಟಕಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌ ಗುರುವಾರ (ಏ.17) ಸಮಾಜ ಪರಿವರ್ತನಾ ಸಮುದಾಯಕ್ಕೆ ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಕುಮಾರಸ್ವಾಮಿ ಅವರ ಅರ್ಜಿ ಇತ್ಯರ್ಥಪಡಿಸುವಾಗ ಸುಪ್ರೀಂ ಕೋರ್ಟ್‌ ಮಾಡಿರುವ ಆದೇಶದ ಅನ್ವಯ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತುಕೆ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಸಮಾಜ ಪರಿವರ್ತನಾ ಸಮುದಾಯದ ಪರ ಹಿರಿಯ ವಕೀಲ ಎಸ್‌ ಬಸವರಾಜು ಅವರಿಗೆ ಕುಮಾರಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿಸಿ ತಿದ್ದುಪಡಿ ಮಾಡುವಂತೆ ನಿರ್ದೇಶಿಸಿತು. ಅಲ್ಲದೇ, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರಿಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ್ದು, ಆನಂತರ ಪ್ರತ್ಯುತ್ತರ ದಾಖಲಿಸಲು ಬಸವರಾಜು ಅವರಿಗೆ ಅನುಮತಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ ಎಂದು ವರದಿ ತಿಳಿಸಿದೆ.

ಇದಕ್ಕೂ ಮುನ್ನ, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಉದಯ್‌ ಹೊಳ್ಳ ಅವರು “ಲೋಕಾಯುಕ್ತ ವರದಿಯಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಮುಕ್ತ ಮಾಡಲಾಗಿದೆ. ವಿಭಾಗೀಯ ಪೀಠದ ಮುಂದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ಕುಮಾರಸ್ವಾಮಿಯನ್ನು ಪ್ರತಿವಾದಿಯನ್ನಾಗಿಸಲಾಗಿಲ್ಲ. ನ್ಯಾಯಾಂಗ ನಿಂದನೆ ಅರ್ಜಿಯಲ್ಲೂ ಅವರನ್ನು ಆರೋಪಿಯನ್ನಾಗಿಸಲಾಗಿಲ್ಲ. ತಮ್ಮ ವಾದವನ್ನು ಮಂಡಿಸಲು ಅವಕಾಶವೇ ಸಿಕ್ಕಿಲ್ಲ. ಹೀಗಾಗಿ, ಹಾಲಿ ಅರ್ಜಿಯಲ್ಲಿ ತಮ್ಮನ್ನು ಆರೋಪಿಯನ್ನಾಗಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದರು.

ಬಸವರಾಜು ಅವರು “ವಿಭಾಗೀಯ ಪೀಠದ ಮುಂದಿದ್ದ ಪಿಐಎಲ್‌ನಲ್ಲಿ ಹಲವು ಮಂದಿಯನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ನ್ಯಾಯಾಲಯದ ಸೂಚನೆ ಆಧರಿಸಿ ಎಲ್ಲರನ್ನೂ ಕೈಬಿಡಲಾಗಿತ್ತು. ಆನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಾಗ ರಿಜಿಸ್ಟ್ರಿ ಆಕ್ಷೇಪಿಸಿದ್ದರಿಂದ ಕುಮಾರಸ್ವಾಮಿ ಮತ್ತಿತರರ ಹೆಸರನ್ನು ಕೈಬಿಡಲಾಗಿತ್ತೇ ವಿನಾ ಉದ್ದೇಶಪೂರ್ವಕವಾಗಿಯಲ್ಲ. ಆರೋಪಿಯಾಗಿ ಕುಮಾರಸ್ವಾಮಿ ಅವರು ಪ್ರಕರಣದಲ್ಲಿ ಭಾಗಿಯಾಗುವುದು ಸಮಂಜಸವಾಗಿದೆ” ಎಂಬುವುದಾಗಿ ವಿವರಿಸಿದರು ಎಂದು ವರದಿ ವಿವರಿಸಿದೆ.

ಮಾರ್ಚ್‌ 28ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌ ಎಡತಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಸೌಜನ್ಯ : barandbench.com

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...