Homeಮುಖಪುಟಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ 'ಪದ್ಮ ಪ್ರಶಸ್ತಿ'

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಪ್ರಮುಖ ವ್ಯಕ್ತಿ ಸಾಧ್ವಿ ರಿತಂಭರ, ಮಂದಿರದ ಮುಖ್ಯ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ಮತ್ತು ಮಂದಿರ ಪವಿತ್ರೀಕರಣದ ಮಹೂರ್ತ ನಿರ್ಧರಿಸುವ ಜವಾಬ್ದಾರಿ ವಹಿಸಿಕೊಂಡಿದ್ದ ವೇದ ವಿದ್ವಾಂಸ ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಈ ವರ್ಷದ ಪದ್ಮ ಪ್ರಶಸ್ತಿ ಪುರಸ್ಕೃತ ಪಟ್ಟಿಯಲ್ಲಿದ್ದಾರೆ. ಇವರನ್ನು ಕ್ರಮವಾಗಿ ಸಾಮಾಜಿಕ ಕಾರ್ಯ, ವಾಸ್ತುಶಿಲ್ಪ ಮತ್ತು ಸಾಹಿತ್ಯ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶ್ವ ಹಿಂದೂ ಪರಿಷತ್‌ನ (ವಿಹೆಚ್‌ಪಿ) ಮಹಿಳಾ ವಿಭಾಗ ‘ದುರ್ಗಾ ವಾಹಿನಿಯ’ ಸಂಸ್ಥಾಪಕಿ ಸಾಧ್ವಿ ರಿತಂಭರ 1989-90ರ ಅವಧಿಯಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಅಭಿಯಾನದ ಭಾಗವಾಗಿ ದೇಶದಾದ್ಯಂತ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಚಂದ್ರಕಾಂತ್ ಸೋಂಪುರ ಗುಜರಾತ್‌ನ ದೇವಾಲಯ ನಿರ್ಮಾಣಕಾರರ ಕುಟುಂಬದಿಂದ ಬಂದವರು. ದೇಶದಾದ್ಯಂತ 200ಕ್ಕೂ ಹೆಚ್ಚು ದೇವಾಲಯಗಳ ನಿರ್ಮಾಣದಲ್ಲಿ ಸೋಂಪುರ ಕುಟುಂಬವು ಪ್ರಮುಖ ಪಾತ್ರ ವಹಿಸಿದೆ. ಗುಜರಾತ್‌ನ ಸೋಮನಾಥ ದೇವಾಲಯದ ಪುನರ್ನಿರ್ಮಾಣದಲ್ಲೂ ಈ ಕುಟುಂಬ ಭಾಗಿಯಾಗಿದೆ.

ವೇದ ವಿದ್ವಾಂಸ ಎನ್ನಲಾದ ಗಣೇಶ್ವರ್ ಶಾಸ್ತ್ರಿ ದ್ರಾವಿಡ್, ರಾಮ ಮಂದಿರದ ಭೂಮಿ ಪೂಜೆಯ ಮಹೂರ್ತ ಮತ್ತು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಯಲ್ಲಿಯೂ ಭಾಗಿಯಾಗಿದ್ದರು. ಕಳೆದ ವರ್ಷ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದಾಗ ಅವರ ಪಕ್ಕದಲ್ಲಿದ್ದ ಏಕೈಕ ವ್ಯಕ್ತಿ ಇವರಾಗಿದ್ದಾರೆ.

ಸಾಧ್ವಿ ರಿತಂಭರ ಅವರಿಗೆ ಪದ್ಮಭೂಷಣ, ಚಂದ್ರಕಾಂತ್ ಸೋಂಪುರ ಮತ್ತು ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಈ ಬಾರಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧ ಕ್ಷೇತ್ರಗಳ 139 ಸಾಧಕರಿ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ 7 ಮಂದಿಯನ್ನು ಪದ್ಮ ವಿಭೂಷಣ, 19 ಜನರನ್ನು ಪದ್ಮ ಭೂಷಣ ಮತ್ತು 113 ಮಂದಿಯನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಮಂದಿಗೆ ವಿವಿಧ ಪದ್ಮ ಪ್ರಶಸ್ತಿಗಳು ಘೋಷಣೆಯಾಗಿವೆ.

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...