Homeಮುಖಪುಟಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದ ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ವಕ್ತಾರರಾಗಿದ್ದರು. ಕೆಲವು ದಿನಗಳ ಹಿಂದೆ, ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ದಂಗೆ ವಿರೋಧಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪತ್ರಿಕಾ ಪ್ರಕಟಣೆ ನೀಡಿದ್ದರು. ಜನವರಿ 1ರಂದು ಮಾವೋವಾದಿಗಳು ಶರಣಾಗುವ ಗಡುವನ್ನು ನಿಗದಿಪಡಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅನಂತ್ ಶರಣಾಗತಿಗೆ ಹಲವು ಅಂಶಗಳು ಕಾರಣವಾಗಿವೆ ಎಂದು ಕ್ಯಾಂಪ್ ನಾಗ್ಪುರದ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಗಡ್ಚಿರೋಲಿ ರೇಂಜ್) ಅಂಕಿತ್ ಗೋಯಲ್ ಪತ್ರಿಕೆಗೆ ತಿಳಿಸಿದ್ದಾರೆ.

“ನಾವು ಅವರನ್ನು ಮನವೊಲಿಸಲು ಪ್ರಯತ್ನಿಸಿದೆವು, ಮತ್ತು ಕಾರ್ಯಾಚರಣೆಗಳು ಸಹ ನಡೆಯುತ್ತಿದ್ದವು. ಬಹುಶಃ ಶರಣಾಗಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿರಬಹುದು” ಎಂದು ಗೋಯಲ್ ಹೇಳಿದ್ದಾರೆ.

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದ ಪ್ರಮುಖ ಮಾವೋವಾದಿ ನಾಯಕರಲ್ಲಿ ಅನಂತ್ ಒಬ್ಬರಾಗಿದ್ದರು. ಸಿಪಿಐ (ಮಾವೋವಾದಿ) ಶ್ರೇಣಿಯಲ್ಲಿ ಅವರಿಗಿಂತ ಒಬ್ಬ ಕೇಂದ್ರ ಸಮಿತಿ ಸದಸ್ಯ ರಾಮಧೇರ್ ಮಾತ್ರ ಮೇಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರಾಮ್‌ಧೇರ್‌ನ ಗುಂಪು ಇನ್ನೂ ಈ ಪ್ರದೇಶದ ಉತ್ತರ ಭಾಗದಲ್ಲಿದೆ, ಆದರೆ, ಅವರೂ ಶೀಘ್ರದಲ್ಲೇ ಶರಣಾಗುತ್ತಾರೆ ಎಂಬುವುದು ನಮಗೆ ಖಚಿತವಾಗಿದೆ” ಎಂದು ಗೋಯಲ್ ಹೇಳಿದ್ದಾರೆ.

ವಿಭಾಗೀಯ ಸಮಿತಿಯ ಕಮಾಂಡರ್ ನಾಗಸು ಗೋಳು ವಡ್ಡೆ, ರಾಣೋ ಪೊರೆಟಿ, ಸಂತು ಪೊರೆಟಿ, ಸಂಗೀತಾ ಪಂಢರೆ, ಪ್ರತಾಪ್ ಬಂತುಲ, ಅನುಜಾ ಕಾರ, ಪೂಜಾ ಮುದಿಯಂ, ದಿನೇಶ್ ಸೊಟ್ಟಿ, ಶೀಲಾ ಮಾದವಿ ಮತ್ತು ಅರ್ಜುನ್ ದೊಡಿ ಶುಕ್ರವಾರ ಶರಣಾದ ಇತರರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಶರಣಾದ ಮಾವೋವಾದಿಗಳ ತಲೆಗೆ 89 ಲಕ್ಷ ರೂಪಾಯಿಗಳ ಸಾಮೂಹಿಕ ಬಹುಮಾನ ಘೋಷಣೆಯಾಗಿತ್ತು ಎಂದು ಗೊಂಡಿಯಾ ಪೊಲೀಸ್ ವರಿಷ್ಠಾಧಿಕಾರಿ ಗೋರಖ್ ಸುರೇಶ್ ಭಮಾರೆ ಪತ್ರಿಕೆಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮಾರ್ಚ್ 31, 2026ರೊಳಗೆ ಮಾವೋವಾದವನ್ನು ಕೊನೆಗೊಳಿಸುವುದಾಗಿ ಪದೇ ಪದೇ ಪ್ರತಿಜ್ಞೆ ಮಾಡುತ್ತಿದೆ.

ಜನವರಿಯಿಂದ 114 ಮಾವೋವಾದಿಗಳು ಮಹಾರಾಷ್ಟ್ರ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅಕ್ಟೋಬರ್ 15 ರಂದು, ಸಿಪಿಐ (ಮಾವೋವಾದಿ) ಪೊಲಿಟ್‌ಬ್ಯೂರೋ ಸದಸ್ಯ ಮಲ್ಲುಜೋಳ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೇರಿದಂತೆ 61 ಮಾವೋವಾದಿಗಳು ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಶರಣಾಗಿದ್ದರು.

ನೆರೆಯ ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿ ಸುಮಾರು 2,400 ಮಾವೋವಾದಿಗಳು ಶರಣಾಗಿದ್ದಾರೆ. ಇದೇ ವೇಳೆ 1,792 ಜನರನ್ನು ಬಂಧಿಸಲಾಗಿದೆ ಮತ್ತು 485 ಜನರನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ವಿವರಿಸಿದೆ.

2024ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಕೊಲ್ಲಲ್ಪಟ್ಟವರಲ್ಲಿ ಅನೇಕರು ಬಹುಮಾನ ಘೋಷಣೆಯಾಗಿದ್ದ ಮಾವೋವಾದಿಗಳು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ಅವರ ಕುಟುಂಬಗಳು ಈ ಹೇಳಿಕೆಯನ್ನು ವಿರೋಧಿಸಿವೆ. ಕೊಲ್ಲಲ್ಪಟ್ಟ ವ್ಯಕ್ತಿಗಳು ನಾಗರಿಕರು ಎಂದು ಕುಟುಂಬಗಳು ಹೇಳಿಕೊಂಡಿವೆ ಎಂದು ಮಾಲಿನಿ ಸುಬ್ರಮಣಿಯಂ ಸುದ್ದಿ ಸಂಸ್ಥೆ ಸ್ಕ್ರೋಲ್‌ಗಾಗಿ ಮಾಡಿದ ವರದಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...