Homeಮುಖಪುಟಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದ ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ವಕ್ತಾರರಾಗಿದ್ದರು. ಕೆಲವು ದಿನಗಳ ಹಿಂದೆ, ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ದಂಗೆ ವಿರೋಧಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪತ್ರಿಕಾ ಪ್ರಕಟಣೆ ನೀಡಿದ್ದರು. ಜನವರಿ 1ರಂದು ಮಾವೋವಾದಿಗಳು ಶರಣಾಗುವ ಗಡುವನ್ನು ನಿಗದಿಪಡಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅನಂತ್ ಶರಣಾಗತಿಗೆ ಹಲವು ಅಂಶಗಳು ಕಾರಣವಾಗಿವೆ ಎಂದು ಕ್ಯಾಂಪ್ ನಾಗ್ಪುರದ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಗಡ್ಚಿರೋಲಿ ರೇಂಜ್) ಅಂಕಿತ್ ಗೋಯಲ್ ಪತ್ರಿಕೆಗೆ ತಿಳಿಸಿದ್ದಾರೆ.

“ನಾವು ಅವರನ್ನು ಮನವೊಲಿಸಲು ಪ್ರಯತ್ನಿಸಿದೆವು, ಮತ್ತು ಕಾರ್ಯಾಚರಣೆಗಳು ಸಹ ನಡೆಯುತ್ತಿದ್ದವು. ಬಹುಶಃ ಶರಣಾಗಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿರಬಹುದು” ಎಂದು ಗೋಯಲ್ ಹೇಳಿದ್ದಾರೆ.

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದ ಪ್ರಮುಖ ಮಾವೋವಾದಿ ನಾಯಕರಲ್ಲಿ ಅನಂತ್ ಒಬ್ಬರಾಗಿದ್ದರು. ಸಿಪಿಐ (ಮಾವೋವಾದಿ) ಶ್ರೇಣಿಯಲ್ಲಿ ಅವರಿಗಿಂತ ಒಬ್ಬ ಕೇಂದ್ರ ಸಮಿತಿ ಸದಸ್ಯ ರಾಮಧೇರ್ ಮಾತ್ರ ಮೇಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರಾಮ್‌ಧೇರ್‌ನ ಗುಂಪು ಇನ್ನೂ ಈ ಪ್ರದೇಶದ ಉತ್ತರ ಭಾಗದಲ್ಲಿದೆ, ಆದರೆ, ಅವರೂ ಶೀಘ್ರದಲ್ಲೇ ಶರಣಾಗುತ್ತಾರೆ ಎಂಬುವುದು ನಮಗೆ ಖಚಿತವಾಗಿದೆ” ಎಂದು ಗೋಯಲ್ ಹೇಳಿದ್ದಾರೆ.

ವಿಭಾಗೀಯ ಸಮಿತಿಯ ಕಮಾಂಡರ್ ನಾಗಸು ಗೋಳು ವಡ್ಡೆ, ರಾಣೋ ಪೊರೆಟಿ, ಸಂತು ಪೊರೆಟಿ, ಸಂಗೀತಾ ಪಂಢರೆ, ಪ್ರತಾಪ್ ಬಂತುಲ, ಅನುಜಾ ಕಾರ, ಪೂಜಾ ಮುದಿಯಂ, ದಿನೇಶ್ ಸೊಟ್ಟಿ, ಶೀಲಾ ಮಾದವಿ ಮತ್ತು ಅರ್ಜುನ್ ದೊಡಿ ಶುಕ್ರವಾರ ಶರಣಾದ ಇತರರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಶರಣಾದ ಮಾವೋವಾದಿಗಳ ತಲೆಗೆ 89 ಲಕ್ಷ ರೂಪಾಯಿಗಳ ಸಾಮೂಹಿಕ ಬಹುಮಾನ ಘೋಷಣೆಯಾಗಿತ್ತು ಎಂದು ಗೊಂಡಿಯಾ ಪೊಲೀಸ್ ವರಿಷ್ಠಾಧಿಕಾರಿ ಗೋರಖ್ ಸುರೇಶ್ ಭಮಾರೆ ಪತ್ರಿಕೆಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮಾರ್ಚ್ 31, 2026ರೊಳಗೆ ಮಾವೋವಾದವನ್ನು ಕೊನೆಗೊಳಿಸುವುದಾಗಿ ಪದೇ ಪದೇ ಪ್ರತಿಜ್ಞೆ ಮಾಡುತ್ತಿದೆ.

ಜನವರಿಯಿಂದ 114 ಮಾವೋವಾದಿಗಳು ಮಹಾರಾಷ್ಟ್ರ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅಕ್ಟೋಬರ್ 15 ರಂದು, ಸಿಪಿಐ (ಮಾವೋವಾದಿ) ಪೊಲಿಟ್‌ಬ್ಯೂರೋ ಸದಸ್ಯ ಮಲ್ಲುಜೋಳ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೇರಿದಂತೆ 61 ಮಾವೋವಾದಿಗಳು ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಶರಣಾಗಿದ್ದರು.

ನೆರೆಯ ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿ ಸುಮಾರು 2,400 ಮಾವೋವಾದಿಗಳು ಶರಣಾಗಿದ್ದಾರೆ. ಇದೇ ವೇಳೆ 1,792 ಜನರನ್ನು ಬಂಧಿಸಲಾಗಿದೆ ಮತ್ತು 485 ಜನರನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ವಿವರಿಸಿದೆ.

2024ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಕೊಲ್ಲಲ್ಪಟ್ಟವರಲ್ಲಿ ಅನೇಕರು ಬಹುಮಾನ ಘೋಷಣೆಯಾಗಿದ್ದ ಮಾವೋವಾದಿಗಳು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ಅವರ ಕುಟುಂಬಗಳು ಈ ಹೇಳಿಕೆಯನ್ನು ವಿರೋಧಿಸಿವೆ. ಕೊಲ್ಲಲ್ಪಟ್ಟ ವ್ಯಕ್ತಿಗಳು ನಾಗರಿಕರು ಎಂದು ಕುಟುಂಬಗಳು ಹೇಳಿಕೊಂಡಿವೆ ಎಂದು ಮಾಲಿನಿ ಸುಬ್ರಮಣಿಯಂ ಸುದ್ದಿ ಸಂಸ್ಥೆ ಸ್ಕ್ರೋಲ್‌ಗಾಗಿ ಮಾಡಿದ ವರದಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...