Homeಮುಖಪುಟಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದ ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ವಕ್ತಾರರಾಗಿದ್ದರು. ಕೆಲವು ದಿನಗಳ ಹಿಂದೆ, ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ದಂಗೆ ವಿರೋಧಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪತ್ರಿಕಾ ಪ್ರಕಟಣೆ ನೀಡಿದ್ದರು. ಜನವರಿ 1ರಂದು ಮಾವೋವಾದಿಗಳು ಶರಣಾಗುವ ಗಡುವನ್ನು ನಿಗದಿಪಡಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅನಂತ್ ಶರಣಾಗತಿಗೆ ಹಲವು ಅಂಶಗಳು ಕಾರಣವಾಗಿವೆ ಎಂದು ಕ್ಯಾಂಪ್ ನಾಗ್ಪುರದ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಗಡ್ಚಿರೋಲಿ ರೇಂಜ್) ಅಂಕಿತ್ ಗೋಯಲ್ ಪತ್ರಿಕೆಗೆ ತಿಳಿಸಿದ್ದಾರೆ.

“ನಾವು ಅವರನ್ನು ಮನವೊಲಿಸಲು ಪ್ರಯತ್ನಿಸಿದೆವು, ಮತ್ತು ಕಾರ್ಯಾಚರಣೆಗಳು ಸಹ ನಡೆಯುತ್ತಿದ್ದವು. ಬಹುಶಃ ಶರಣಾಗಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿರಬಹುದು” ಎಂದು ಗೋಯಲ್ ಹೇಳಿದ್ದಾರೆ.

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದ ಪ್ರಮುಖ ಮಾವೋವಾದಿ ನಾಯಕರಲ್ಲಿ ಅನಂತ್ ಒಬ್ಬರಾಗಿದ್ದರು. ಸಿಪಿಐ (ಮಾವೋವಾದಿ) ಶ್ರೇಣಿಯಲ್ಲಿ ಅವರಿಗಿಂತ ಒಬ್ಬ ಕೇಂದ್ರ ಸಮಿತಿ ಸದಸ್ಯ ರಾಮಧೇರ್ ಮಾತ್ರ ಮೇಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರಾಮ್‌ಧೇರ್‌ನ ಗುಂಪು ಇನ್ನೂ ಈ ಪ್ರದೇಶದ ಉತ್ತರ ಭಾಗದಲ್ಲಿದೆ, ಆದರೆ, ಅವರೂ ಶೀಘ್ರದಲ್ಲೇ ಶರಣಾಗುತ್ತಾರೆ ಎಂಬುವುದು ನಮಗೆ ಖಚಿತವಾಗಿದೆ” ಎಂದು ಗೋಯಲ್ ಹೇಳಿದ್ದಾರೆ.

ವಿಭಾಗೀಯ ಸಮಿತಿಯ ಕಮಾಂಡರ್ ನಾಗಸು ಗೋಳು ವಡ್ಡೆ, ರಾಣೋ ಪೊರೆಟಿ, ಸಂತು ಪೊರೆಟಿ, ಸಂಗೀತಾ ಪಂಢರೆ, ಪ್ರತಾಪ್ ಬಂತುಲ, ಅನುಜಾ ಕಾರ, ಪೂಜಾ ಮುದಿಯಂ, ದಿನೇಶ್ ಸೊಟ್ಟಿ, ಶೀಲಾ ಮಾದವಿ ಮತ್ತು ಅರ್ಜುನ್ ದೊಡಿ ಶುಕ್ರವಾರ ಶರಣಾದ ಇತರರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಶರಣಾದ ಮಾವೋವಾದಿಗಳ ತಲೆಗೆ 89 ಲಕ್ಷ ರೂಪಾಯಿಗಳ ಸಾಮೂಹಿಕ ಬಹುಮಾನ ಘೋಷಣೆಯಾಗಿತ್ತು ಎಂದು ಗೊಂಡಿಯಾ ಪೊಲೀಸ್ ವರಿಷ್ಠಾಧಿಕಾರಿ ಗೋರಖ್ ಸುರೇಶ್ ಭಮಾರೆ ಪತ್ರಿಕೆಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮಾರ್ಚ್ 31, 2026ರೊಳಗೆ ಮಾವೋವಾದವನ್ನು ಕೊನೆಗೊಳಿಸುವುದಾಗಿ ಪದೇ ಪದೇ ಪ್ರತಿಜ್ಞೆ ಮಾಡುತ್ತಿದೆ.

ಜನವರಿಯಿಂದ 114 ಮಾವೋವಾದಿಗಳು ಮಹಾರಾಷ್ಟ್ರ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅಕ್ಟೋಬರ್ 15 ರಂದು, ಸಿಪಿಐ (ಮಾವೋವಾದಿ) ಪೊಲಿಟ್‌ಬ್ಯೂರೋ ಸದಸ್ಯ ಮಲ್ಲುಜೋಳ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೇರಿದಂತೆ 61 ಮಾವೋವಾದಿಗಳು ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಶರಣಾಗಿದ್ದರು.

ನೆರೆಯ ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿ ಸುಮಾರು 2,400 ಮಾವೋವಾದಿಗಳು ಶರಣಾಗಿದ್ದಾರೆ. ಇದೇ ವೇಳೆ 1,792 ಜನರನ್ನು ಬಂಧಿಸಲಾಗಿದೆ ಮತ್ತು 485 ಜನರನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ವಿವರಿಸಿದೆ.

2024ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಕೊಲ್ಲಲ್ಪಟ್ಟವರಲ್ಲಿ ಅನೇಕರು ಬಹುಮಾನ ಘೋಷಣೆಯಾಗಿದ್ದ ಮಾವೋವಾದಿಗಳು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ಅವರ ಕುಟುಂಬಗಳು ಈ ಹೇಳಿಕೆಯನ್ನು ವಿರೋಧಿಸಿವೆ. ಕೊಲ್ಲಲ್ಪಟ್ಟ ವ್ಯಕ್ತಿಗಳು ನಾಗರಿಕರು ಎಂದು ಕುಟುಂಬಗಳು ಹೇಳಿಕೊಂಡಿವೆ ಎಂದು ಮಾಲಿನಿ ಸುಬ್ರಮಣಿಯಂ ಸುದ್ದಿ ಸಂಸ್ಥೆ ಸ್ಕ್ರೋಲ್‌ಗಾಗಿ ಮಾಡಿದ ವರದಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...