Homeಮುಖಪುಟಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದ ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ವಕ್ತಾರರಾಗಿದ್ದರು. ಕೆಲವು ದಿನಗಳ ಹಿಂದೆ, ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ದಂಗೆ ವಿರೋಧಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪತ್ರಿಕಾ ಪ್ರಕಟಣೆ ನೀಡಿದ್ದರು. ಜನವರಿ 1ರಂದು ಮಾವೋವಾದಿಗಳು ಶರಣಾಗುವ ಗಡುವನ್ನು ನಿಗದಿಪಡಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅನಂತ್ ಶರಣಾಗತಿಗೆ ಹಲವು ಅಂಶಗಳು ಕಾರಣವಾಗಿವೆ ಎಂದು ಕ್ಯಾಂಪ್ ನಾಗ್ಪುರದ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಗಡ್ಚಿರೋಲಿ ರೇಂಜ್) ಅಂಕಿತ್ ಗೋಯಲ್ ಪತ್ರಿಕೆಗೆ ತಿಳಿಸಿದ್ದಾರೆ.

“ನಾವು ಅವರನ್ನು ಮನವೊಲಿಸಲು ಪ್ರಯತ್ನಿಸಿದೆವು, ಮತ್ತು ಕಾರ್ಯಾಚರಣೆಗಳು ಸಹ ನಡೆಯುತ್ತಿದ್ದವು. ಬಹುಶಃ ಶರಣಾಗಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿರಬಹುದು” ಎಂದು ಗೋಯಲ್ ಹೇಳಿದ್ದಾರೆ.

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದ ಪ್ರಮುಖ ಮಾವೋವಾದಿ ನಾಯಕರಲ್ಲಿ ಅನಂತ್ ಒಬ್ಬರಾಗಿದ್ದರು. ಸಿಪಿಐ (ಮಾವೋವಾದಿ) ಶ್ರೇಣಿಯಲ್ಲಿ ಅವರಿಗಿಂತ ಒಬ್ಬ ಕೇಂದ್ರ ಸಮಿತಿ ಸದಸ್ಯ ರಾಮಧೇರ್ ಮಾತ್ರ ಮೇಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರಾಮ್‌ಧೇರ್‌ನ ಗುಂಪು ಇನ್ನೂ ಈ ಪ್ರದೇಶದ ಉತ್ತರ ಭಾಗದಲ್ಲಿದೆ, ಆದರೆ, ಅವರೂ ಶೀಘ್ರದಲ್ಲೇ ಶರಣಾಗುತ್ತಾರೆ ಎಂಬುವುದು ನಮಗೆ ಖಚಿತವಾಗಿದೆ” ಎಂದು ಗೋಯಲ್ ಹೇಳಿದ್ದಾರೆ.

ವಿಭಾಗೀಯ ಸಮಿತಿಯ ಕಮಾಂಡರ್ ನಾಗಸು ಗೋಳು ವಡ್ಡೆ, ರಾಣೋ ಪೊರೆಟಿ, ಸಂತು ಪೊರೆಟಿ, ಸಂಗೀತಾ ಪಂಢರೆ, ಪ್ರತಾಪ್ ಬಂತುಲ, ಅನುಜಾ ಕಾರ, ಪೂಜಾ ಮುದಿಯಂ, ದಿನೇಶ್ ಸೊಟ್ಟಿ, ಶೀಲಾ ಮಾದವಿ ಮತ್ತು ಅರ್ಜುನ್ ದೊಡಿ ಶುಕ್ರವಾರ ಶರಣಾದ ಇತರರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಶರಣಾದ ಮಾವೋವಾದಿಗಳ ತಲೆಗೆ 89 ಲಕ್ಷ ರೂಪಾಯಿಗಳ ಸಾಮೂಹಿಕ ಬಹುಮಾನ ಘೋಷಣೆಯಾಗಿತ್ತು ಎಂದು ಗೊಂಡಿಯಾ ಪೊಲೀಸ್ ವರಿಷ್ಠಾಧಿಕಾರಿ ಗೋರಖ್ ಸುರೇಶ್ ಭಮಾರೆ ಪತ್ರಿಕೆಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮಾರ್ಚ್ 31, 2026ರೊಳಗೆ ಮಾವೋವಾದವನ್ನು ಕೊನೆಗೊಳಿಸುವುದಾಗಿ ಪದೇ ಪದೇ ಪ್ರತಿಜ್ಞೆ ಮಾಡುತ್ತಿದೆ.

ಜನವರಿಯಿಂದ 114 ಮಾವೋವಾದಿಗಳು ಮಹಾರಾಷ್ಟ್ರ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅಕ್ಟೋಬರ್ 15 ರಂದು, ಸಿಪಿಐ (ಮಾವೋವಾದಿ) ಪೊಲಿಟ್‌ಬ್ಯೂರೋ ಸದಸ್ಯ ಮಲ್ಲುಜೋಳ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೇರಿದಂತೆ 61 ಮಾವೋವಾದಿಗಳು ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಶರಣಾಗಿದ್ದರು.

ನೆರೆಯ ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿ ಸುಮಾರು 2,400 ಮಾವೋವಾದಿಗಳು ಶರಣಾಗಿದ್ದಾರೆ. ಇದೇ ವೇಳೆ 1,792 ಜನರನ್ನು ಬಂಧಿಸಲಾಗಿದೆ ಮತ್ತು 485 ಜನರನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ವಿವರಿಸಿದೆ.

2024ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಕೊಲ್ಲಲ್ಪಟ್ಟವರಲ್ಲಿ ಅನೇಕರು ಬಹುಮಾನ ಘೋಷಣೆಯಾಗಿದ್ದ ಮಾವೋವಾದಿಗಳು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ಅವರ ಕುಟುಂಬಗಳು ಈ ಹೇಳಿಕೆಯನ್ನು ವಿರೋಧಿಸಿವೆ. ಕೊಲ್ಲಲ್ಪಟ್ಟ ವ್ಯಕ್ತಿಗಳು ನಾಗರಿಕರು ಎಂದು ಕುಟುಂಬಗಳು ಹೇಳಿಕೊಂಡಿವೆ ಎಂದು ಮಾಲಿನಿ ಸುಬ್ರಮಣಿಯಂ ಸುದ್ದಿ ಸಂಸ್ಥೆ ಸ್ಕ್ರೋಲ್‌ಗಾಗಿ ಮಾಡಿದ ವರದಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...