Homeಮುಖಪುಟಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

ಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

- Advertisement -
- Advertisement -

ಕೇರಳ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ಸುಂಕ ಮತ್ತು ದರಗಳನ್ನು ತಂದಿದ್ದು, ಮಿತಿಮೀರಿದ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿದೆ. ಐದು ವರ್ಗದ ಆಂಬ್ಯುಲೆನ್ಸ್‌ಗಳಿಗೆ ಕನಿಷ್ಠ 20 ಕಿ.ಮೀ (ರಿಟರ್ನ್ ದೂರವನ್ನು ಒಳಗೊಂಡಂತೆ) ದರವನ್ನು ನಿಗದಿಪಡಿಸಲಾಗಿದೆ. ಈ ವರ್ಗಗಳಲ್ಲಿ ಮೂಲ ದರವು 600 ರೂ. ಗಳಿಂದ 2,500 ರೂ.ಗಳ ವರೆಗೆ ಇರುತ್ತದೆ.

ಹೊಸ ದರವನ್ನು ವಾಹನದ ಒಳಗೆ ಪ್ರದರ್ಶಿಸಬೇಕು ಎಂದು ಸರ್ಕಾರ ಹೇಳಿದ್ದು, ರಾಜ್ಯವೊಂದು ಆಂಬ್ಯುಲೆನ್ಸ್ ದರವನ್ನು ನಿಗದಿಪಡಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಕೇರಳದ ಸಾರಿಗೆ ಸಚಿವ ಕೆ ಬಿ ಗಣೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಪಘಾತಕ್ಕೀಡಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲು ಆಂಬ್ಯುಲೆನ್ಸ್ ಮಾಲೀಕರ ಸಂಘಗಳು ಒಪ್ಪಿಕೊಂಡಿವೆ ಮತ್ತು ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಮತ್ತು 12 ವರ್ಷದೊಳಗಿನವರಿಗೆ ಪ್ರತಿ ಕಿ.ಮೀಗೆ 2% ರಿಯಾಯಿತಿಯನ್ನು ನೀಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ಫೋಟೊ ಕೃಪೆ: TNIE

BPL ಕಾರ್ಡ್ ಹೊಂದಿರುವವರು ಒಟ್ಟು ಪ್ರಯಾಣದ ಬಿಲ್‌ನಲ್ಲಿ 20% ರಿಯಾಯಿತಿಯನ್ನು ಪಡೆಯಲಿದ್ದಾರೆ. ಅಲ್ಲದೆ, ಮೊದಲ ಗಂಟೆಗೆ ಯಾವುದೇ ವೇಟಿಂಗ್ ಚಾರ್ಜ್ ಇರುವುದಿಲ್ಲ. ಆಂಬ್ಯುಲೆನ್ಸ್‌ಗಳ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆಯು ಆಂಬ್ಯುಲೆನ್ಸ್ ಚಾಲಕರಿಗೆ ಐಡಿ ಕಾರ್ಡ್ ಮತ್ತು ನೇವಿ ಬ್ಲೂ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಅನ್ನು ಸಮವಸ್ತ್ರವಾಗಿ ಪರಿಚಯಿಸಿದೆ.

ಇದನ್ನೂ ಓದಿ: ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಜಾರಿ ಅಧಿಕಾರಿಗಳಿಂದ ಯಾದೃಚ್ಛಿಕ ತಪಾಸಣೆಯ ಜೊತೆಗೆ ವಾಹನದ ಚಲನೆಯನ್ನು ಪತ್ತೆಹಚ್ಚಲು ವಾಹನದೊಳಗೆ ಲಾಗ್ ಬುಕ್ ಅನ್ನು ಇರಿಸಲಾಗುತ್ತದೆ. ಈ ಕುರಿತು ಸಾರಿಗೆ ಆಯುಕ್ತರು ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ವರದಿಯಾಗಿದೆ.

ಮೋಟಾರು ವಾಹನ ಇಲಾಖೆಯು ಎರ್ನಾಕುಲಂ, ಎಡಪ್ಪಲ್ ಮತ್ತು ತಿರುವನನ್-ತಪುರಂನಲ್ಲಿರುವ ತನ್ನ ಕೇಂದ್ರಗಳಲ್ಲಿ ಸುರಕ್ಷಿತ ಚಾಲನೆಯ ಕುರಿತು ಆಂಬ್ಯುಲೆನ್ಸ್ ಚಾಲಕರಿಗೆ ತರಬೇತಿ ನೀಡುತ್ತದೆ.

ಸಾರ್ವಜನಿಕರಿಗೆ ಹತ್ತಿರದ ಲಭ್ಯವಿರುವ ಆಂಬ್ಯುಲೆನ್ಸ್ ಅನ್ನು ಪತ್ತೆಹಚ್ಚಲು ಇಲಾಖೆಯು ವ್ಯವಸ್ಥೆಯನ್ನು ಪರಿಚಯಿಸಲಿದ್ದು, ಸಾರ್ವಜನಿಕರ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಂಖ್ಯೆ 9188961100 ಯನ್ನು ಪರಿಚಯಿಸಲಾಗಿದೆ. ಆಂಬ್ಯುಲೆನ್ಸ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಪ್ರತ್ಯೇಕವಾಗಿ ವಾಟ್ಸಾಪ್ ಸಂಖ್ಯೆಯನ್ನು ಪರಿಚಯಿಸಲು ಇಲಾಖೆ ಯೋಜಿಸಿದೆ.

ಮೊದಲ ಬಾರಿಗೆ ಕೇರಳವು ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗಳಿಗೆ ಪ್ರಮಾಣಿತ ದರಗಳನ್ನು ಪರಿಚಯಿಸಿದೆ. ಅಪಘಾತಕ್ಕೊಳಗಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲಾಗುತ್ತದೆ ಮತ್ತು ಕ್ಯಾನ್ಸರ್ ರೋಗಿಗಳು, ಮಕ್ಕಳು ಮತ್ತು ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಸಾರ್ವಜನಿಕ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್‌ಗಳನ್ನು ಟ್ರ್ಯಾಕ್ ಮಾಡಬಹುದು” ಎಂದು ಮಾಜಿ ಸಚಿವ ಥೋಮಸ್ ಐಸಾಕ್ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.ಕೇರಳ

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...