Homeಮುಖಪುಟಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

ಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

- Advertisement -
- Advertisement -

ಕೇರಳ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ಸುಂಕ ಮತ್ತು ದರಗಳನ್ನು ತಂದಿದ್ದು, ಮಿತಿಮೀರಿದ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿದೆ. ಐದು ವರ್ಗದ ಆಂಬ್ಯುಲೆನ್ಸ್‌ಗಳಿಗೆ ಕನಿಷ್ಠ 20 ಕಿ.ಮೀ (ರಿಟರ್ನ್ ದೂರವನ್ನು ಒಳಗೊಂಡಂತೆ) ದರವನ್ನು ನಿಗದಿಪಡಿಸಲಾಗಿದೆ. ಈ ವರ್ಗಗಳಲ್ಲಿ ಮೂಲ ದರವು 600 ರೂ. ಗಳಿಂದ 2,500 ರೂ.ಗಳ ವರೆಗೆ ಇರುತ್ತದೆ.

ಹೊಸ ದರವನ್ನು ವಾಹನದ ಒಳಗೆ ಪ್ರದರ್ಶಿಸಬೇಕು ಎಂದು ಸರ್ಕಾರ ಹೇಳಿದ್ದು, ರಾಜ್ಯವೊಂದು ಆಂಬ್ಯುಲೆನ್ಸ್ ದರವನ್ನು ನಿಗದಿಪಡಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಕೇರಳದ ಸಾರಿಗೆ ಸಚಿವ ಕೆ ಬಿ ಗಣೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಪಘಾತಕ್ಕೀಡಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲು ಆಂಬ್ಯುಲೆನ್ಸ್ ಮಾಲೀಕರ ಸಂಘಗಳು ಒಪ್ಪಿಕೊಂಡಿವೆ ಮತ್ತು ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಮತ್ತು 12 ವರ್ಷದೊಳಗಿನವರಿಗೆ ಪ್ರತಿ ಕಿ.ಮೀಗೆ 2% ರಿಯಾಯಿತಿಯನ್ನು ನೀಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ಫೋಟೊ ಕೃಪೆ: TNIE

BPL ಕಾರ್ಡ್ ಹೊಂದಿರುವವರು ಒಟ್ಟು ಪ್ರಯಾಣದ ಬಿಲ್‌ನಲ್ಲಿ 20% ರಿಯಾಯಿತಿಯನ್ನು ಪಡೆಯಲಿದ್ದಾರೆ. ಅಲ್ಲದೆ, ಮೊದಲ ಗಂಟೆಗೆ ಯಾವುದೇ ವೇಟಿಂಗ್ ಚಾರ್ಜ್ ಇರುವುದಿಲ್ಲ. ಆಂಬ್ಯುಲೆನ್ಸ್‌ಗಳ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆಯು ಆಂಬ್ಯುಲೆನ್ಸ್ ಚಾಲಕರಿಗೆ ಐಡಿ ಕಾರ್ಡ್ ಮತ್ತು ನೇವಿ ಬ್ಲೂ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಅನ್ನು ಸಮವಸ್ತ್ರವಾಗಿ ಪರಿಚಯಿಸಿದೆ.

ಇದನ್ನೂ ಓದಿ: ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಜಾರಿ ಅಧಿಕಾರಿಗಳಿಂದ ಯಾದೃಚ್ಛಿಕ ತಪಾಸಣೆಯ ಜೊತೆಗೆ ವಾಹನದ ಚಲನೆಯನ್ನು ಪತ್ತೆಹಚ್ಚಲು ವಾಹನದೊಳಗೆ ಲಾಗ್ ಬುಕ್ ಅನ್ನು ಇರಿಸಲಾಗುತ್ತದೆ. ಈ ಕುರಿತು ಸಾರಿಗೆ ಆಯುಕ್ತರು ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ವರದಿಯಾಗಿದೆ.

ಮೋಟಾರು ವಾಹನ ಇಲಾಖೆಯು ಎರ್ನಾಕುಲಂ, ಎಡಪ್ಪಲ್ ಮತ್ತು ತಿರುವನನ್-ತಪುರಂನಲ್ಲಿರುವ ತನ್ನ ಕೇಂದ್ರಗಳಲ್ಲಿ ಸುರಕ್ಷಿತ ಚಾಲನೆಯ ಕುರಿತು ಆಂಬ್ಯುಲೆನ್ಸ್ ಚಾಲಕರಿಗೆ ತರಬೇತಿ ನೀಡುತ್ತದೆ.

ಸಾರ್ವಜನಿಕರಿಗೆ ಹತ್ತಿರದ ಲಭ್ಯವಿರುವ ಆಂಬ್ಯುಲೆನ್ಸ್ ಅನ್ನು ಪತ್ತೆಹಚ್ಚಲು ಇಲಾಖೆಯು ವ್ಯವಸ್ಥೆಯನ್ನು ಪರಿಚಯಿಸಲಿದ್ದು, ಸಾರ್ವಜನಿಕರ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಂಖ್ಯೆ 9188961100 ಯನ್ನು ಪರಿಚಯಿಸಲಾಗಿದೆ. ಆಂಬ್ಯುಲೆನ್ಸ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಪ್ರತ್ಯೇಕವಾಗಿ ವಾಟ್ಸಾಪ್ ಸಂಖ್ಯೆಯನ್ನು ಪರಿಚಯಿಸಲು ಇಲಾಖೆ ಯೋಜಿಸಿದೆ.

ಮೊದಲ ಬಾರಿಗೆ ಕೇರಳವು ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗಳಿಗೆ ಪ್ರಮಾಣಿತ ದರಗಳನ್ನು ಪರಿಚಯಿಸಿದೆ. ಅಪಘಾತಕ್ಕೊಳಗಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲಾಗುತ್ತದೆ ಮತ್ತು ಕ್ಯಾನ್ಸರ್ ರೋಗಿಗಳು, ಮಕ್ಕಳು ಮತ್ತು ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಸಾರ್ವಜನಿಕ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್‌ಗಳನ್ನು ಟ್ರ್ಯಾಕ್ ಮಾಡಬಹುದು” ಎಂದು ಮಾಜಿ ಸಚಿವ ಥೋಮಸ್ ಐಸಾಕ್ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.ಕೇರಳ

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....