Homeಮುಖಪುಟಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

ಕೇರಳ | ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ದರ ಪರಿಚಯ; ದೇಶದಲ್ಲೆ ಮೊದಲು!

- Advertisement -
- Advertisement -

ಕೇರಳ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ಗಳಿಗೆ ಪ್ರಮಾಣಿತ ಸುಂಕ ಮತ್ತು ದರಗಳನ್ನು ತಂದಿದ್ದು, ಮಿತಿಮೀರಿದ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿದೆ. ಐದು ವರ್ಗದ ಆಂಬ್ಯುಲೆನ್ಸ್‌ಗಳಿಗೆ ಕನಿಷ್ಠ 20 ಕಿ.ಮೀ (ರಿಟರ್ನ್ ದೂರವನ್ನು ಒಳಗೊಂಡಂತೆ) ದರವನ್ನು ನಿಗದಿಪಡಿಸಲಾಗಿದೆ. ಈ ವರ್ಗಗಳಲ್ಲಿ ಮೂಲ ದರವು 600 ರೂ. ಗಳಿಂದ 2,500 ರೂ.ಗಳ ವರೆಗೆ ಇರುತ್ತದೆ.

ಹೊಸ ದರವನ್ನು ವಾಹನದ ಒಳಗೆ ಪ್ರದರ್ಶಿಸಬೇಕು ಎಂದು ಸರ್ಕಾರ ಹೇಳಿದ್ದು, ರಾಜ್ಯವೊಂದು ಆಂಬ್ಯುಲೆನ್ಸ್ ದರವನ್ನು ನಿಗದಿಪಡಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಕೇರಳದ ಸಾರಿಗೆ ಸಚಿವ ಕೆ ಬಿ ಗಣೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಪಘಾತಕ್ಕೀಡಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲು ಆಂಬ್ಯುಲೆನ್ಸ್ ಮಾಲೀಕರ ಸಂಘಗಳು ಒಪ್ಪಿಕೊಂಡಿವೆ ಮತ್ತು ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಮತ್ತು 12 ವರ್ಷದೊಳಗಿನವರಿಗೆ ಪ್ರತಿ ಕಿ.ಮೀಗೆ 2% ರಿಯಾಯಿತಿಯನ್ನು ನೀಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ಫೋಟೊ ಕೃಪೆ: TNIE

BPL ಕಾರ್ಡ್ ಹೊಂದಿರುವವರು ಒಟ್ಟು ಪ್ರಯಾಣದ ಬಿಲ್‌ನಲ್ಲಿ 20% ರಿಯಾಯಿತಿಯನ್ನು ಪಡೆಯಲಿದ್ದಾರೆ. ಅಲ್ಲದೆ, ಮೊದಲ ಗಂಟೆಗೆ ಯಾವುದೇ ವೇಟಿಂಗ್ ಚಾರ್ಜ್ ಇರುವುದಿಲ್ಲ. ಆಂಬ್ಯುಲೆನ್ಸ್‌ಗಳ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆಯು ಆಂಬ್ಯುಲೆನ್ಸ್ ಚಾಲಕರಿಗೆ ಐಡಿ ಕಾರ್ಡ್ ಮತ್ತು ನೇವಿ ಬ್ಲೂ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಅನ್ನು ಸಮವಸ್ತ್ರವಾಗಿ ಪರಿಚಯಿಸಿದೆ.

ಇದನ್ನೂ ಓದಿ: ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಜಾರಿ ಅಧಿಕಾರಿಗಳಿಂದ ಯಾದೃಚ್ಛಿಕ ತಪಾಸಣೆಯ ಜೊತೆಗೆ ವಾಹನದ ಚಲನೆಯನ್ನು ಪತ್ತೆಹಚ್ಚಲು ವಾಹನದೊಳಗೆ ಲಾಗ್ ಬುಕ್ ಅನ್ನು ಇರಿಸಲಾಗುತ್ತದೆ. ಈ ಕುರಿತು ಸಾರಿಗೆ ಆಯುಕ್ತರು ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ವರದಿಯಾಗಿದೆ.

ಮೋಟಾರು ವಾಹನ ಇಲಾಖೆಯು ಎರ್ನಾಕುಲಂ, ಎಡಪ್ಪಲ್ ಮತ್ತು ತಿರುವನನ್-ತಪುರಂನಲ್ಲಿರುವ ತನ್ನ ಕೇಂದ್ರಗಳಲ್ಲಿ ಸುರಕ್ಷಿತ ಚಾಲನೆಯ ಕುರಿತು ಆಂಬ್ಯುಲೆನ್ಸ್ ಚಾಲಕರಿಗೆ ತರಬೇತಿ ನೀಡುತ್ತದೆ.

ಸಾರ್ವಜನಿಕರಿಗೆ ಹತ್ತಿರದ ಲಭ್ಯವಿರುವ ಆಂಬ್ಯುಲೆನ್ಸ್ ಅನ್ನು ಪತ್ತೆಹಚ್ಚಲು ಇಲಾಖೆಯು ವ್ಯವಸ್ಥೆಯನ್ನು ಪರಿಚಯಿಸಲಿದ್ದು, ಸಾರ್ವಜನಿಕರ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಂಖ್ಯೆ 9188961100 ಯನ್ನು ಪರಿಚಯಿಸಲಾಗಿದೆ. ಆಂಬ್ಯುಲೆನ್ಸ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಪ್ರತ್ಯೇಕವಾಗಿ ವಾಟ್ಸಾಪ್ ಸಂಖ್ಯೆಯನ್ನು ಪರಿಚಯಿಸಲು ಇಲಾಖೆ ಯೋಜಿಸಿದೆ.

ಮೊದಲ ಬಾರಿಗೆ ಕೇರಳವು ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗಳಿಗೆ ಪ್ರಮಾಣಿತ ದರಗಳನ್ನು ಪರಿಚಯಿಸಿದೆ. ಅಪಘಾತಕ್ಕೊಳಗಾದವರನ್ನು ಹತ್ತಿರದ ಆಸ್ಪತ್ರೆಗೆ ಉಚಿತವಾಗಿ ಸಾಗಿಸಲಾಗುತ್ತದೆ ಮತ್ತು ಕ್ಯಾನ್ಸರ್ ರೋಗಿಗಳು, ಮಕ್ಕಳು ಮತ್ತು ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಸಾರ್ವಜನಿಕ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್‌ಗಳನ್ನು ಟ್ರ್ಯಾಕ್ ಮಾಡಬಹುದು” ಎಂದು ಮಾಜಿ ಸಚಿವ ಥೋಮಸ್ ಐಸಾಕ್ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.ಕೇರಳ

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...