Homeಮುಖಪುಟಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು.

- Advertisement -
- Advertisement -

ಡಾ. ಸ್ವಾತಿ ಶುಕ್ಲ

ಕನ್ನಡಕ್ಕೆ : ಮಲ್ಲನಗೌಡರ್ ಪಿ.ಕೆ

ನಟರಂತೆ ಹಾವಭಾವ ಪ್ರದರ್ಶಿಸುತ್ತ ದಿನವೀಡೀ ಅರಚಾಡುವ ಟಿವಿ ನಿರೂಪಕರಿಂದ ತಲೆ ಚಿಟ್ಟು ಹಿಡಿದಿದೆಯಾ? ಮತ್ತದೇ ಮೋದಿ ವರ್ಸಸ್ ರಾಹುಲ್ ಎಂಬ ಎರಡೇ ಆಯ್ಕೆಗಳ ಮೂರ್ಖತನವೂ ನಿಮಗೆ ಬೋರ್ ಹೊಡೆಸಿದೆಯಾ? ಹಾಗಾದರೆ ನೀವು ಪರ್ಯಾಯ ಮಾಧ್ಯಮದತ್ತ ಮುಖ ಮಾಡಲೇಬೇಕಾದ ಸಮಯವಿದು.

ಯಾವ ಬಂಡವಾಳಶಾಹಿಯ ಹಂಗಿಲ್ಲದೇ ಜನರೇ ಹಲವು ಪತ್ರಿಕೆಗಳನ್ನು ತರುವ ಮೂಲಕ ತಳ ಸಮುದಾಯಗಳಲ್ಲಿ ಎಚ್ಚರ ಮೂಡಿಸುವ ಯತ್ನಗಳು ದೇಶದ ಅಲ್ಲಲ್ಲಿ ನಡೆದಿವೆ. ಅಂತಹ ಒಂದು ಅಮೋಘ ಸಾಹಸವೇ ‘ಖಬರ್ ಲಹರಿಯಾ’… ಅಂದರೆ ಸುದ್ದಿಯ ಅಲೆಗಳು.. ‘ಖಬರ್ ಲಹರಿಯಾ’ ಎಂಬ ಈ ವಾರಪತ್ರಿಕೆಗೆ ಹಲವು ವೈಶಿಷ್ಟ್ಯಗಳು ಮತ್ತು ತನ್ನದೇ ಆದ ಅನನ್ಯತೆಯಿದೆ. ಮಹಿಳೆಯರಿಂದ ನಡೆಸಲ್ಪಡುವ ಸ್ವತಂತ್ರ, ಗ್ರಾಮೀಣ ವಿಷಯಾಧಾರಿತ ಮೊದಲ ಭಾರತೀಯ ವಾರಪತ್ರಿಕೆ ಎಂಬ ಹೆಗ್ಗಳಿಕೆ ಈ ಪತ್ರಿಕೆಯದ್ದು.

ಗ್ರಾಮೀಣ ಮಹಿಳೆಯರೇ ಸೇರಿಕೊಂಡು ಇಂತಹ ಪ್ರಯೋಗ ಮಾಡಿ ಉತ್ತರ ಭಾರತದ ಗ್ರಾಮಗಳಲ್ಲಿ ಯಶಸ್ವಿಯಾಗಿದ್ದು ಇದೇ ಮೊದಲು. ಮಹಿಳೆಯರೇ ಬರೆಯುತ್ತಾರೆ, ಎಡಿಟ್ ಮಾಡುತ್ತಾರೆ, ಫೋಟೊಗ್ರಫಿ ಕೂಡ ಅವರದೇ. ವಿಷಯ ಆಯ್ಕೆಯನ್ನು ಅವರೇ ಮಾಡುತ್ತಾರೆ ಮಾತ್ರವಲ್ಲ ಮಾರ್ಕೆಟಿಂಗ್ ಕೂಡ ಮಹಿಳೆಯರೆ ನಿಭಾಯಿಸುತ್ತಾರೆ. ಅಂದಂತೆ, ಈ ಮಹಿಳೆಯರ ಪೈಕಿ ಬಹುಪಾಲು ಜನ ದಲಿತ, ಆದಿವಾಸಿ ಮತ್ತು ಮುಸ್ಲಿಮ ಸಮುದಾಯಗಳಿಗೆ ಸೇರಿದವರು. ಈ ಸಮುದಾಯಗಳಿಂದಲೇ ಮಹಿಳೆಯರನ್ನು ಆಯ್ಕೆ ಮಾಡಿ, ಅವರಿಗೆ ವರದಿಗಾರಿಕೆ, ಫೋಟೊಗ್ರಫಿ, ವಿಡಿಯೋ ಮಾಡುವುದರ ಕುರಿತು ತರಬೇತಿ ನೀಡಿ ಸಜ್ಜುಗೊಳಿಸಲಾಗುತ್ತದೆ.

ಪತ್ರಿಕೆಗಳೇ ಇಲ್ಲದ ಗ್ರಾಮಗಳಿಗೆ ‘ಖಬರ್ ಲಹರಿಯಾ’ ಸುದ್ದಿಯ ಅಲೆಗಳನ್ನು, ಅದೂ ಬದುಕಿನ ಕುರಿತಾದ, ಮಹಿಳೆಯ ಬದುಕಿನ ಕುರಿತಾದ ವಿಷಯಗಳನ್ನು ತರುತ್ತಿದೆ. ಮೊದಲು ಇದು ಉತ್ತರಪ್ರದೇಶದ ಬುಂದೇಲ್‍ಖಂಡದಲ್ಲಿ ಶುರುವಾಗಿತು. ಲೈಂಗಿಕ ಹಕ್ಕುಗಳ ಕುರಿತು ಕೆಲಸ ಮಾಡುವ ದೆಹಲಿ ಮೂಲದ ‘ನಿರಂತರ್’ ಎಂಬ ಸಂಘಟನೆಯ ಆಸಕ್ತಿಯಿಂದ 2002ರಲ್ಲಿ ಈ ಪ್ರಯೋಗ ಅರಳಿತು. ಆಗ ಈ ಪತ್ರಿಕೆಯ ಹೆಸರು ‘ಮಹಿಳಾ ಢಾಕಿಯಾ’ (ಮಹಿಳಾ ಅಂಚೆಪೇದೆ).

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು. ಮೊದಲು ಬುಂದೇಲಿ ಭಾಷೆಯಲ್ಲಿ ಬಂದ ಪತ್ರಿಕೆ ಈಗ ತಳ ಸಮುದಾಯಗಳ ಐದು ಭಾಷೆಗಳಿಗೆ (ಬಜ್ಜಿಕಾ, ಅವಧಿ, ಹಿಂದೂಸ್ತಾನಿ, ಭೋಜಪುರಿ) ವಿಸ್ತರಣೆಗೊಂಡಿದೆ. ಗ್ರಾಮೀಣ ಮಹಿಳೆಯರಿಗಾಗಿಯೇ ಈ ಪತ್ರಿಕೆ ಬರುತ್ತಿದ್ದು, ಬಹಳಷ್ಟು ಕಡೆ, ಅನಕ್ಷರಸ್ಥರು ಇರುವಲ್ಲಿ ಪತ್ರಿಕೆ ವರದಿಗಾರೇ ಜನರ ಎದುರು ಪತ್ರಿಕೆಯನ್ನು ಓದಿ ವಿವರಿಸುತ್ತಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರಗಳಲ್ಲಿ 80 ಸಾವಿರ ಓದುಗರನ್ನು ಹೊಂದಿರುವ ಈ ಪತ್ರಿಕೆ ಎರಡು ವರ್ಷಗಳ ಹಿಂದೆ ತನ್ನ ಡಿಜಿಟಲ್ ಆವೃತ್ತಿಯನ್ನು ಹೊರ ತಂದು, ನಗರವಾಸಿಗಳನ್ನೂ ತಲುಪುತ್ತಿದೆ. ವಿವಿಧ ಡಿಜಿಟಲ್ ವೇದಿಕೆಗಳ ಮೂಲಕ ತಿಂಗಳಿಗೆ 50 ಲಕ್ಷ ಜನರನ್ನು ಇದು ತಲುಪುತ್ತಿದೆ.

ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ 13 ಜಿಲ್ಲೆಗಳಲ್ಲಿ 30 ವರದಿಗಾರು ಮತ್ತು ಸ್ಟಿಂಜರ್‌ಗಳನ್ನು ಹೊಂದಿರುವ ಲಹರಿಯಾ, ಗ್ರಾಮೀಣ ಸಮಸ್ಯೆಗಳು, ದುಡಿಯುವ ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುತ್ತ ಬಂದಿದೆ. ಜನಪ್ರತಿನಿಧಿಗಳು ಕುಡಿಯುವ ನೀರು, ಶೌಚಾಲಯ ವವ್ಯಸ್ಥೆ ಮಾಡಿದ್ದಾರೋ ಇಲ್ಲವೋ ಎಂಬ ಕುರಿತಾಗಿ ರಿಯಾಲಿಟಿ ಚೆಕ್ ವರದಿಗಳನ್ನು ಬರೆದು ಜನರಲ್ಲಿ ಅರಿವು ತುಂಬಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ವಿಶೇಷ ಪುರವಣಿಯನ್ನೂ ತರಲಾಗುತ್ತಿದೆ. 2018ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ‘ಯೋಗಿ ಟ್ರ್ಯಾಕರ್’ ಎಂಬ ಅಂಕಣವನ್ನೇ ಆರಂಭಿಸಲಾಗಿತು. ಗ್ರಾಮೀಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ತರಲು ‘ಮೀಟೂ’ ಚಳವಳಿಯನ್ನು ಕೂಡ ಈ ಪತ್ರಿಕೆ ನಡೆಸುತ್ತಿದೆ.

ಖಬರ್ ಲಹರಿಯಾದ ಅನನ್ಯ ಸಾಧನೆಯನ್ನು ಮೆಚ್ಚಿ ಯುನೆಸ್ಕೊ ಪ್ರಶಸ್ತಿಯನ್ನು ನೀಡಿದೆ. ಜರ್ಮನಿಯ ಚಾನೆಲ್ಲೊಂದು ಕೂಡ ಪ್ರಶಸ್ತಿ ನೀಡಿ ಗೌರವಿಸಿದೆ. ಹಲವಾರು ಗೌರವ, ಪ್ರಶಸ್ತಿ ಪಡೆದು ಮುನ್ನುಗುತ್ತಿರುವ ‘ಖಬರ್ ಲಹರಿಯಾ’ ಪ್ರಜಾಪ್ರಭುತ್ವದ ಬೆಳಕು, ಹೊಸತನದ ಅಲೆ…. ಜೊತೆಗೆ ಕನ್ನಡದ ಸ್ವತಂತ್ರ ಮಾಧ್ಯಮಗಳಿಗೆ ಮಾದರಿ.


ಇದನ್ನೂ ಓದಿ; ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...