Homeಮುಖಪುಟಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು.

- Advertisement -
- Advertisement -

ಡಾ. ಸ್ವಾತಿ ಶುಕ್ಲ

ಕನ್ನಡಕ್ಕೆ : ಮಲ್ಲನಗೌಡರ್ ಪಿ.ಕೆ

ನಟರಂತೆ ಹಾವಭಾವ ಪ್ರದರ್ಶಿಸುತ್ತ ದಿನವೀಡೀ ಅರಚಾಡುವ ಟಿವಿ ನಿರೂಪಕರಿಂದ ತಲೆ ಚಿಟ್ಟು ಹಿಡಿದಿದೆಯಾ? ಮತ್ತದೇ ಮೋದಿ ವರ್ಸಸ್ ರಾಹುಲ್ ಎಂಬ ಎರಡೇ ಆಯ್ಕೆಗಳ ಮೂರ್ಖತನವೂ ನಿಮಗೆ ಬೋರ್ ಹೊಡೆಸಿದೆಯಾ? ಹಾಗಾದರೆ ನೀವು ಪರ್ಯಾಯ ಮಾಧ್ಯಮದತ್ತ ಮುಖ ಮಾಡಲೇಬೇಕಾದ ಸಮಯವಿದು.

ಯಾವ ಬಂಡವಾಳಶಾಹಿಯ ಹಂಗಿಲ್ಲದೇ ಜನರೇ ಹಲವು ಪತ್ರಿಕೆಗಳನ್ನು ತರುವ ಮೂಲಕ ತಳ ಸಮುದಾಯಗಳಲ್ಲಿ ಎಚ್ಚರ ಮೂಡಿಸುವ ಯತ್ನಗಳು ದೇಶದ ಅಲ್ಲಲ್ಲಿ ನಡೆದಿವೆ. ಅಂತಹ ಒಂದು ಅಮೋಘ ಸಾಹಸವೇ ‘ಖಬರ್ ಲಹರಿಯಾ’… ಅಂದರೆ ಸುದ್ದಿಯ ಅಲೆಗಳು.. ‘ಖಬರ್ ಲಹರಿಯಾ’ ಎಂಬ ಈ ವಾರಪತ್ರಿಕೆಗೆ ಹಲವು ವೈಶಿಷ್ಟ್ಯಗಳು ಮತ್ತು ತನ್ನದೇ ಆದ ಅನನ್ಯತೆಯಿದೆ. ಮಹಿಳೆಯರಿಂದ ನಡೆಸಲ್ಪಡುವ ಸ್ವತಂತ್ರ, ಗ್ರಾಮೀಣ ವಿಷಯಾಧಾರಿತ ಮೊದಲ ಭಾರತೀಯ ವಾರಪತ್ರಿಕೆ ಎಂಬ ಹೆಗ್ಗಳಿಕೆ ಈ ಪತ್ರಿಕೆಯದ್ದು.

ಗ್ರಾಮೀಣ ಮಹಿಳೆಯರೇ ಸೇರಿಕೊಂಡು ಇಂತಹ ಪ್ರಯೋಗ ಮಾಡಿ ಉತ್ತರ ಭಾರತದ ಗ್ರಾಮಗಳಲ್ಲಿ ಯಶಸ್ವಿಯಾಗಿದ್ದು ಇದೇ ಮೊದಲು. ಮಹಿಳೆಯರೇ ಬರೆಯುತ್ತಾರೆ, ಎಡಿಟ್ ಮಾಡುತ್ತಾರೆ, ಫೋಟೊಗ್ರಫಿ ಕೂಡ ಅವರದೇ. ವಿಷಯ ಆಯ್ಕೆಯನ್ನು ಅವರೇ ಮಾಡುತ್ತಾರೆ ಮಾತ್ರವಲ್ಲ ಮಾರ್ಕೆಟಿಂಗ್ ಕೂಡ ಮಹಿಳೆಯರೆ ನಿಭಾಯಿಸುತ್ತಾರೆ. ಅಂದಂತೆ, ಈ ಮಹಿಳೆಯರ ಪೈಕಿ ಬಹುಪಾಲು ಜನ ದಲಿತ, ಆದಿವಾಸಿ ಮತ್ತು ಮುಸ್ಲಿಮ ಸಮುದಾಯಗಳಿಗೆ ಸೇರಿದವರು. ಈ ಸಮುದಾಯಗಳಿಂದಲೇ ಮಹಿಳೆಯರನ್ನು ಆಯ್ಕೆ ಮಾಡಿ, ಅವರಿಗೆ ವರದಿಗಾರಿಕೆ, ಫೋಟೊಗ್ರಫಿ, ವಿಡಿಯೋ ಮಾಡುವುದರ ಕುರಿತು ತರಬೇತಿ ನೀಡಿ ಸಜ್ಜುಗೊಳಿಸಲಾಗುತ್ತದೆ.

ಪತ್ರಿಕೆಗಳೇ ಇಲ್ಲದ ಗ್ರಾಮಗಳಿಗೆ ‘ಖಬರ್ ಲಹರಿಯಾ’ ಸುದ್ದಿಯ ಅಲೆಗಳನ್ನು, ಅದೂ ಬದುಕಿನ ಕುರಿತಾದ, ಮಹಿಳೆಯ ಬದುಕಿನ ಕುರಿತಾದ ವಿಷಯಗಳನ್ನು ತರುತ್ತಿದೆ. ಮೊದಲು ಇದು ಉತ್ತರಪ್ರದೇಶದ ಬುಂದೇಲ್‍ಖಂಡದಲ್ಲಿ ಶುರುವಾಗಿತು. ಲೈಂಗಿಕ ಹಕ್ಕುಗಳ ಕುರಿತು ಕೆಲಸ ಮಾಡುವ ದೆಹಲಿ ಮೂಲದ ‘ನಿರಂತರ್’ ಎಂಬ ಸಂಘಟನೆಯ ಆಸಕ್ತಿಯಿಂದ 2002ರಲ್ಲಿ ಈ ಪ್ರಯೋಗ ಅರಳಿತು. ಆಗ ಈ ಪತ್ರಿಕೆಯ ಹೆಸರು ‘ಮಹಿಳಾ ಢಾಕಿಯಾ’ (ಮಹಿಳಾ ಅಂಚೆಪೇದೆ).

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು. ಮೊದಲು ಬುಂದೇಲಿ ಭಾಷೆಯಲ್ಲಿ ಬಂದ ಪತ್ರಿಕೆ ಈಗ ತಳ ಸಮುದಾಯಗಳ ಐದು ಭಾಷೆಗಳಿಗೆ (ಬಜ್ಜಿಕಾ, ಅವಧಿ, ಹಿಂದೂಸ್ತಾನಿ, ಭೋಜಪುರಿ) ವಿಸ್ತರಣೆಗೊಂಡಿದೆ. ಗ್ರಾಮೀಣ ಮಹಿಳೆಯರಿಗಾಗಿಯೇ ಈ ಪತ್ರಿಕೆ ಬರುತ್ತಿದ್ದು, ಬಹಳಷ್ಟು ಕಡೆ, ಅನಕ್ಷರಸ್ಥರು ಇರುವಲ್ಲಿ ಪತ್ರಿಕೆ ವರದಿಗಾರೇ ಜನರ ಎದುರು ಪತ್ರಿಕೆಯನ್ನು ಓದಿ ವಿವರಿಸುತ್ತಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರಗಳಲ್ಲಿ 80 ಸಾವಿರ ಓದುಗರನ್ನು ಹೊಂದಿರುವ ಈ ಪತ್ರಿಕೆ ಎರಡು ವರ್ಷಗಳ ಹಿಂದೆ ತನ್ನ ಡಿಜಿಟಲ್ ಆವೃತ್ತಿಯನ್ನು ಹೊರ ತಂದು, ನಗರವಾಸಿಗಳನ್ನೂ ತಲುಪುತ್ತಿದೆ. ವಿವಿಧ ಡಿಜಿಟಲ್ ವೇದಿಕೆಗಳ ಮೂಲಕ ತಿಂಗಳಿಗೆ 50 ಲಕ್ಷ ಜನರನ್ನು ಇದು ತಲುಪುತ್ತಿದೆ.

ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ 13 ಜಿಲ್ಲೆಗಳಲ್ಲಿ 30 ವರದಿಗಾರು ಮತ್ತು ಸ್ಟಿಂಜರ್‌ಗಳನ್ನು ಹೊಂದಿರುವ ಲಹರಿಯಾ, ಗ್ರಾಮೀಣ ಸಮಸ್ಯೆಗಳು, ದುಡಿಯುವ ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುತ್ತ ಬಂದಿದೆ. ಜನಪ್ರತಿನಿಧಿಗಳು ಕುಡಿಯುವ ನೀರು, ಶೌಚಾಲಯ ವವ್ಯಸ್ಥೆ ಮಾಡಿದ್ದಾರೋ ಇಲ್ಲವೋ ಎಂಬ ಕುರಿತಾಗಿ ರಿಯಾಲಿಟಿ ಚೆಕ್ ವರದಿಗಳನ್ನು ಬರೆದು ಜನರಲ್ಲಿ ಅರಿವು ತುಂಬಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ವಿಶೇಷ ಪುರವಣಿಯನ್ನೂ ತರಲಾಗುತ್ತಿದೆ. 2018ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ‘ಯೋಗಿ ಟ್ರ್ಯಾಕರ್’ ಎಂಬ ಅಂಕಣವನ್ನೇ ಆರಂಭಿಸಲಾಗಿತು. ಗ್ರಾಮೀಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ತರಲು ‘ಮೀಟೂ’ ಚಳವಳಿಯನ್ನು ಕೂಡ ಈ ಪತ್ರಿಕೆ ನಡೆಸುತ್ತಿದೆ.

ಖಬರ್ ಲಹರಿಯಾದ ಅನನ್ಯ ಸಾಧನೆಯನ್ನು ಮೆಚ್ಚಿ ಯುನೆಸ್ಕೊ ಪ್ರಶಸ್ತಿಯನ್ನು ನೀಡಿದೆ. ಜರ್ಮನಿಯ ಚಾನೆಲ್ಲೊಂದು ಕೂಡ ಪ್ರಶಸ್ತಿ ನೀಡಿ ಗೌರವಿಸಿದೆ. ಹಲವಾರು ಗೌರವ, ಪ್ರಶಸ್ತಿ ಪಡೆದು ಮುನ್ನುಗುತ್ತಿರುವ ‘ಖಬರ್ ಲಹರಿಯಾ’ ಪ್ರಜಾಪ್ರಭುತ್ವದ ಬೆಳಕು, ಹೊಸತನದ ಅಲೆ…. ಜೊತೆಗೆ ಕನ್ನಡದ ಸ್ವತಂತ್ರ ಮಾಧ್ಯಮಗಳಿಗೆ ಮಾದರಿ.


ಇದನ್ನೂ ಓದಿ; ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....