Homeಮುಖಪುಟಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು.

- Advertisement -
- Advertisement -

ಡಾ. ಸ್ವಾತಿ ಶುಕ್ಲ

ಕನ್ನಡಕ್ಕೆ : ಮಲ್ಲನಗೌಡರ್ ಪಿ.ಕೆ

ನಟರಂತೆ ಹಾವಭಾವ ಪ್ರದರ್ಶಿಸುತ್ತ ದಿನವೀಡೀ ಅರಚಾಡುವ ಟಿವಿ ನಿರೂಪಕರಿಂದ ತಲೆ ಚಿಟ್ಟು ಹಿಡಿದಿದೆಯಾ? ಮತ್ತದೇ ಮೋದಿ ವರ್ಸಸ್ ರಾಹುಲ್ ಎಂಬ ಎರಡೇ ಆಯ್ಕೆಗಳ ಮೂರ್ಖತನವೂ ನಿಮಗೆ ಬೋರ್ ಹೊಡೆಸಿದೆಯಾ? ಹಾಗಾದರೆ ನೀವು ಪರ್ಯಾಯ ಮಾಧ್ಯಮದತ್ತ ಮುಖ ಮಾಡಲೇಬೇಕಾದ ಸಮಯವಿದು.

ಯಾವ ಬಂಡವಾಳಶಾಹಿಯ ಹಂಗಿಲ್ಲದೇ ಜನರೇ ಹಲವು ಪತ್ರಿಕೆಗಳನ್ನು ತರುವ ಮೂಲಕ ತಳ ಸಮುದಾಯಗಳಲ್ಲಿ ಎಚ್ಚರ ಮೂಡಿಸುವ ಯತ್ನಗಳು ದೇಶದ ಅಲ್ಲಲ್ಲಿ ನಡೆದಿವೆ. ಅಂತಹ ಒಂದು ಅಮೋಘ ಸಾಹಸವೇ ‘ಖಬರ್ ಲಹರಿಯಾ’… ಅಂದರೆ ಸುದ್ದಿಯ ಅಲೆಗಳು.. ‘ಖಬರ್ ಲಹರಿಯಾ’ ಎಂಬ ಈ ವಾರಪತ್ರಿಕೆಗೆ ಹಲವು ವೈಶಿಷ್ಟ್ಯಗಳು ಮತ್ತು ತನ್ನದೇ ಆದ ಅನನ್ಯತೆಯಿದೆ. ಮಹಿಳೆಯರಿಂದ ನಡೆಸಲ್ಪಡುವ ಸ್ವತಂತ್ರ, ಗ್ರಾಮೀಣ ವಿಷಯಾಧಾರಿತ ಮೊದಲ ಭಾರತೀಯ ವಾರಪತ್ರಿಕೆ ಎಂಬ ಹೆಗ್ಗಳಿಕೆ ಈ ಪತ್ರಿಕೆಯದ್ದು.

ಗ್ರಾಮೀಣ ಮಹಿಳೆಯರೇ ಸೇರಿಕೊಂಡು ಇಂತಹ ಪ್ರಯೋಗ ಮಾಡಿ ಉತ್ತರ ಭಾರತದ ಗ್ರಾಮಗಳಲ್ಲಿ ಯಶಸ್ವಿಯಾಗಿದ್ದು ಇದೇ ಮೊದಲು. ಮಹಿಳೆಯರೇ ಬರೆಯುತ್ತಾರೆ, ಎಡಿಟ್ ಮಾಡುತ್ತಾರೆ, ಫೋಟೊಗ್ರಫಿ ಕೂಡ ಅವರದೇ. ವಿಷಯ ಆಯ್ಕೆಯನ್ನು ಅವರೇ ಮಾಡುತ್ತಾರೆ ಮಾತ್ರವಲ್ಲ ಮಾರ್ಕೆಟಿಂಗ್ ಕೂಡ ಮಹಿಳೆಯರೆ ನಿಭಾಯಿಸುತ್ತಾರೆ. ಅಂದಂತೆ, ಈ ಮಹಿಳೆಯರ ಪೈಕಿ ಬಹುಪಾಲು ಜನ ದಲಿತ, ಆದಿವಾಸಿ ಮತ್ತು ಮುಸ್ಲಿಮ ಸಮುದಾಯಗಳಿಗೆ ಸೇರಿದವರು. ಈ ಸಮುದಾಯಗಳಿಂದಲೇ ಮಹಿಳೆಯರನ್ನು ಆಯ್ಕೆ ಮಾಡಿ, ಅವರಿಗೆ ವರದಿಗಾರಿಕೆ, ಫೋಟೊಗ್ರಫಿ, ವಿಡಿಯೋ ಮಾಡುವುದರ ಕುರಿತು ತರಬೇತಿ ನೀಡಿ ಸಜ್ಜುಗೊಳಿಸಲಾಗುತ್ತದೆ.

ಪತ್ರಿಕೆಗಳೇ ಇಲ್ಲದ ಗ್ರಾಮಗಳಿಗೆ ‘ಖಬರ್ ಲಹರಿಯಾ’ ಸುದ್ದಿಯ ಅಲೆಗಳನ್ನು, ಅದೂ ಬದುಕಿನ ಕುರಿತಾದ, ಮಹಿಳೆಯ ಬದುಕಿನ ಕುರಿತಾದ ವಿಷಯಗಳನ್ನು ತರುತ್ತಿದೆ. ಮೊದಲು ಇದು ಉತ್ತರಪ್ರದೇಶದ ಬುಂದೇಲ್‍ಖಂಡದಲ್ಲಿ ಶುರುವಾಗಿತು. ಲೈಂಗಿಕ ಹಕ್ಕುಗಳ ಕುರಿತು ಕೆಲಸ ಮಾಡುವ ದೆಹಲಿ ಮೂಲದ ‘ನಿರಂತರ್’ ಎಂಬ ಸಂಘಟನೆಯ ಆಸಕ್ತಿಯಿಂದ 2002ರಲ್ಲಿ ಈ ಪ್ರಯೋಗ ಅರಳಿತು. ಆಗ ಈ ಪತ್ರಿಕೆಯ ಹೆಸರು ‘ಮಹಿಳಾ ಢಾಕಿಯಾ’ (ಮಹಿಳಾ ಅಂಚೆಪೇದೆ).

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು. ಮೊದಲು ಬುಂದೇಲಿ ಭಾಷೆಯಲ್ಲಿ ಬಂದ ಪತ್ರಿಕೆ ಈಗ ತಳ ಸಮುದಾಯಗಳ ಐದು ಭಾಷೆಗಳಿಗೆ (ಬಜ್ಜಿಕಾ, ಅವಧಿ, ಹಿಂದೂಸ್ತಾನಿ, ಭೋಜಪುರಿ) ವಿಸ್ತರಣೆಗೊಂಡಿದೆ. ಗ್ರಾಮೀಣ ಮಹಿಳೆಯರಿಗಾಗಿಯೇ ಈ ಪತ್ರಿಕೆ ಬರುತ್ತಿದ್ದು, ಬಹಳಷ್ಟು ಕಡೆ, ಅನಕ್ಷರಸ್ಥರು ಇರುವಲ್ಲಿ ಪತ್ರಿಕೆ ವರದಿಗಾರೇ ಜನರ ಎದುರು ಪತ್ರಿಕೆಯನ್ನು ಓದಿ ವಿವರಿಸುತ್ತಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರಗಳಲ್ಲಿ 80 ಸಾವಿರ ಓದುಗರನ್ನು ಹೊಂದಿರುವ ಈ ಪತ್ರಿಕೆ ಎರಡು ವರ್ಷಗಳ ಹಿಂದೆ ತನ್ನ ಡಿಜಿಟಲ್ ಆವೃತ್ತಿಯನ್ನು ಹೊರ ತಂದು, ನಗರವಾಸಿಗಳನ್ನೂ ತಲುಪುತ್ತಿದೆ. ವಿವಿಧ ಡಿಜಿಟಲ್ ವೇದಿಕೆಗಳ ಮೂಲಕ ತಿಂಗಳಿಗೆ 50 ಲಕ್ಷ ಜನರನ್ನು ಇದು ತಲುಪುತ್ತಿದೆ.

ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ 13 ಜಿಲ್ಲೆಗಳಲ್ಲಿ 30 ವರದಿಗಾರು ಮತ್ತು ಸ್ಟಿಂಜರ್‌ಗಳನ್ನು ಹೊಂದಿರುವ ಲಹರಿಯಾ, ಗ್ರಾಮೀಣ ಸಮಸ್ಯೆಗಳು, ದುಡಿಯುವ ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುತ್ತ ಬಂದಿದೆ. ಜನಪ್ರತಿನಿಧಿಗಳು ಕುಡಿಯುವ ನೀರು, ಶೌಚಾಲಯ ವವ್ಯಸ್ಥೆ ಮಾಡಿದ್ದಾರೋ ಇಲ್ಲವೋ ಎಂಬ ಕುರಿತಾಗಿ ರಿಯಾಲಿಟಿ ಚೆಕ್ ವರದಿಗಳನ್ನು ಬರೆದು ಜನರಲ್ಲಿ ಅರಿವು ತುಂಬಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ವಿಶೇಷ ಪುರವಣಿಯನ್ನೂ ತರಲಾಗುತ್ತಿದೆ. 2018ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ‘ಯೋಗಿ ಟ್ರ್ಯಾಕರ್’ ಎಂಬ ಅಂಕಣವನ್ನೇ ಆರಂಭಿಸಲಾಗಿತು. ಗ್ರಾಮೀಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ತರಲು ‘ಮೀಟೂ’ ಚಳವಳಿಯನ್ನು ಕೂಡ ಈ ಪತ್ರಿಕೆ ನಡೆಸುತ್ತಿದೆ.

ಖಬರ್ ಲಹರಿಯಾದ ಅನನ್ಯ ಸಾಧನೆಯನ್ನು ಮೆಚ್ಚಿ ಯುನೆಸ್ಕೊ ಪ್ರಶಸ್ತಿಯನ್ನು ನೀಡಿದೆ. ಜರ್ಮನಿಯ ಚಾನೆಲ್ಲೊಂದು ಕೂಡ ಪ್ರಶಸ್ತಿ ನೀಡಿ ಗೌರವಿಸಿದೆ. ಹಲವಾರು ಗೌರವ, ಪ್ರಶಸ್ತಿ ಪಡೆದು ಮುನ್ನುಗುತ್ತಿರುವ ‘ಖಬರ್ ಲಹರಿಯಾ’ ಪ್ರಜಾಪ್ರಭುತ್ವದ ಬೆಳಕು, ಹೊಸತನದ ಅಲೆ…. ಜೊತೆಗೆ ಕನ್ನಡದ ಸ್ವತಂತ್ರ ಮಾಧ್ಯಮಗಳಿಗೆ ಮಾದರಿ.


ಇದನ್ನೂ ಓದಿ; ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...