Homeಮುಖಪುಟಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು.

- Advertisement -
- Advertisement -

ಡಾ. ಸ್ವಾತಿ ಶುಕ್ಲ

ಕನ್ನಡಕ್ಕೆ : ಮಲ್ಲನಗೌಡರ್ ಪಿ.ಕೆ

ನಟರಂತೆ ಹಾವಭಾವ ಪ್ರದರ್ಶಿಸುತ್ತ ದಿನವೀಡೀ ಅರಚಾಡುವ ಟಿವಿ ನಿರೂಪಕರಿಂದ ತಲೆ ಚಿಟ್ಟು ಹಿಡಿದಿದೆಯಾ? ಮತ್ತದೇ ಮೋದಿ ವರ್ಸಸ್ ರಾಹುಲ್ ಎಂಬ ಎರಡೇ ಆಯ್ಕೆಗಳ ಮೂರ್ಖತನವೂ ನಿಮಗೆ ಬೋರ್ ಹೊಡೆಸಿದೆಯಾ? ಹಾಗಾದರೆ ನೀವು ಪರ್ಯಾಯ ಮಾಧ್ಯಮದತ್ತ ಮುಖ ಮಾಡಲೇಬೇಕಾದ ಸಮಯವಿದು.

ಯಾವ ಬಂಡವಾಳಶಾಹಿಯ ಹಂಗಿಲ್ಲದೇ ಜನರೇ ಹಲವು ಪತ್ರಿಕೆಗಳನ್ನು ತರುವ ಮೂಲಕ ತಳ ಸಮುದಾಯಗಳಲ್ಲಿ ಎಚ್ಚರ ಮೂಡಿಸುವ ಯತ್ನಗಳು ದೇಶದ ಅಲ್ಲಲ್ಲಿ ನಡೆದಿವೆ. ಅಂತಹ ಒಂದು ಅಮೋಘ ಸಾಹಸವೇ ‘ಖಬರ್ ಲಹರಿಯಾ’… ಅಂದರೆ ಸುದ್ದಿಯ ಅಲೆಗಳು.. ‘ಖಬರ್ ಲಹರಿಯಾ’ ಎಂಬ ಈ ವಾರಪತ್ರಿಕೆಗೆ ಹಲವು ವೈಶಿಷ್ಟ್ಯಗಳು ಮತ್ತು ತನ್ನದೇ ಆದ ಅನನ್ಯತೆಯಿದೆ. ಮಹಿಳೆಯರಿಂದ ನಡೆಸಲ್ಪಡುವ ಸ್ವತಂತ್ರ, ಗ್ರಾಮೀಣ ವಿಷಯಾಧಾರಿತ ಮೊದಲ ಭಾರತೀಯ ವಾರಪತ್ರಿಕೆ ಎಂಬ ಹೆಗ್ಗಳಿಕೆ ಈ ಪತ್ರಿಕೆಯದ್ದು.

ಗ್ರಾಮೀಣ ಮಹಿಳೆಯರೇ ಸೇರಿಕೊಂಡು ಇಂತಹ ಪ್ರಯೋಗ ಮಾಡಿ ಉತ್ತರ ಭಾರತದ ಗ್ರಾಮಗಳಲ್ಲಿ ಯಶಸ್ವಿಯಾಗಿದ್ದು ಇದೇ ಮೊದಲು. ಮಹಿಳೆಯರೇ ಬರೆಯುತ್ತಾರೆ, ಎಡಿಟ್ ಮಾಡುತ್ತಾರೆ, ಫೋಟೊಗ್ರಫಿ ಕೂಡ ಅವರದೇ. ವಿಷಯ ಆಯ್ಕೆಯನ್ನು ಅವರೇ ಮಾಡುತ್ತಾರೆ ಮಾತ್ರವಲ್ಲ ಮಾರ್ಕೆಟಿಂಗ್ ಕೂಡ ಮಹಿಳೆಯರೆ ನಿಭಾಯಿಸುತ್ತಾರೆ. ಅಂದಂತೆ, ಈ ಮಹಿಳೆಯರ ಪೈಕಿ ಬಹುಪಾಲು ಜನ ದಲಿತ, ಆದಿವಾಸಿ ಮತ್ತು ಮುಸ್ಲಿಮ ಸಮುದಾಯಗಳಿಗೆ ಸೇರಿದವರು. ಈ ಸಮುದಾಯಗಳಿಂದಲೇ ಮಹಿಳೆಯರನ್ನು ಆಯ್ಕೆ ಮಾಡಿ, ಅವರಿಗೆ ವರದಿಗಾರಿಕೆ, ಫೋಟೊಗ್ರಫಿ, ವಿಡಿಯೋ ಮಾಡುವುದರ ಕುರಿತು ತರಬೇತಿ ನೀಡಿ ಸಜ್ಜುಗೊಳಿಸಲಾಗುತ್ತದೆ.

ಪತ್ರಿಕೆಗಳೇ ಇಲ್ಲದ ಗ್ರಾಮಗಳಿಗೆ ‘ಖಬರ್ ಲಹರಿಯಾ’ ಸುದ್ದಿಯ ಅಲೆಗಳನ್ನು, ಅದೂ ಬದುಕಿನ ಕುರಿತಾದ, ಮಹಿಳೆಯ ಬದುಕಿನ ಕುರಿತಾದ ವಿಷಯಗಳನ್ನು ತರುತ್ತಿದೆ. ಮೊದಲು ಇದು ಉತ್ತರಪ್ರದೇಶದ ಬುಂದೇಲ್‍ಖಂಡದಲ್ಲಿ ಶುರುವಾಗಿತು. ಲೈಂಗಿಕ ಹಕ್ಕುಗಳ ಕುರಿತು ಕೆಲಸ ಮಾಡುವ ದೆಹಲಿ ಮೂಲದ ‘ನಿರಂತರ್’ ಎಂಬ ಸಂಘಟನೆಯ ಆಸಕ್ತಿಯಿಂದ 2002ರಲ್ಲಿ ಈ ಪ್ರಯೋಗ ಅರಳಿತು. ಆಗ ಈ ಪತ್ರಿಕೆಯ ಹೆಸರು ‘ಮಹಿಳಾ ಢಾಕಿಯಾ’ (ಮಹಿಳಾ ಅಂಚೆಪೇದೆ).

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು. ಮೊದಲು ಬುಂದೇಲಿ ಭಾಷೆಯಲ್ಲಿ ಬಂದ ಪತ್ರಿಕೆ ಈಗ ತಳ ಸಮುದಾಯಗಳ ಐದು ಭಾಷೆಗಳಿಗೆ (ಬಜ್ಜಿಕಾ, ಅವಧಿ, ಹಿಂದೂಸ್ತಾನಿ, ಭೋಜಪುರಿ) ವಿಸ್ತರಣೆಗೊಂಡಿದೆ. ಗ್ರಾಮೀಣ ಮಹಿಳೆಯರಿಗಾಗಿಯೇ ಈ ಪತ್ರಿಕೆ ಬರುತ್ತಿದ್ದು, ಬಹಳಷ್ಟು ಕಡೆ, ಅನಕ್ಷರಸ್ಥರು ಇರುವಲ್ಲಿ ಪತ್ರಿಕೆ ವರದಿಗಾರೇ ಜನರ ಎದುರು ಪತ್ರಿಕೆಯನ್ನು ಓದಿ ವಿವರಿಸುತ್ತಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರಗಳಲ್ಲಿ 80 ಸಾವಿರ ಓದುಗರನ್ನು ಹೊಂದಿರುವ ಈ ಪತ್ರಿಕೆ ಎರಡು ವರ್ಷಗಳ ಹಿಂದೆ ತನ್ನ ಡಿಜಿಟಲ್ ಆವೃತ್ತಿಯನ್ನು ಹೊರ ತಂದು, ನಗರವಾಸಿಗಳನ್ನೂ ತಲುಪುತ್ತಿದೆ. ವಿವಿಧ ಡಿಜಿಟಲ್ ವೇದಿಕೆಗಳ ಮೂಲಕ ತಿಂಗಳಿಗೆ 50 ಲಕ್ಷ ಜನರನ್ನು ಇದು ತಲುಪುತ್ತಿದೆ.

ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ 13 ಜಿಲ್ಲೆಗಳಲ್ಲಿ 30 ವರದಿಗಾರು ಮತ್ತು ಸ್ಟಿಂಜರ್‌ಗಳನ್ನು ಹೊಂದಿರುವ ಲಹರಿಯಾ, ಗ್ರಾಮೀಣ ಸಮಸ್ಯೆಗಳು, ದುಡಿಯುವ ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುತ್ತ ಬಂದಿದೆ. ಜನಪ್ರತಿನಿಧಿಗಳು ಕುಡಿಯುವ ನೀರು, ಶೌಚಾಲಯ ವವ್ಯಸ್ಥೆ ಮಾಡಿದ್ದಾರೋ ಇಲ್ಲವೋ ಎಂಬ ಕುರಿತಾಗಿ ರಿಯಾಲಿಟಿ ಚೆಕ್ ವರದಿಗಳನ್ನು ಬರೆದು ಜನರಲ್ಲಿ ಅರಿವು ತುಂಬಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ವಿಶೇಷ ಪುರವಣಿಯನ್ನೂ ತರಲಾಗುತ್ತಿದೆ. 2018ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ‘ಯೋಗಿ ಟ್ರ್ಯಾಕರ್’ ಎಂಬ ಅಂಕಣವನ್ನೇ ಆರಂಭಿಸಲಾಗಿತು. ಗ್ರಾಮೀಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ತರಲು ‘ಮೀಟೂ’ ಚಳವಳಿಯನ್ನು ಕೂಡ ಈ ಪತ್ರಿಕೆ ನಡೆಸುತ್ತಿದೆ.

ಖಬರ್ ಲಹರಿಯಾದ ಅನನ್ಯ ಸಾಧನೆಯನ್ನು ಮೆಚ್ಚಿ ಯುನೆಸ್ಕೊ ಪ್ರಶಸ್ತಿಯನ್ನು ನೀಡಿದೆ. ಜರ್ಮನಿಯ ಚಾನೆಲ್ಲೊಂದು ಕೂಡ ಪ್ರಶಸ್ತಿ ನೀಡಿ ಗೌರವಿಸಿದೆ. ಹಲವಾರು ಗೌರವ, ಪ್ರಶಸ್ತಿ ಪಡೆದು ಮುನ್ನುಗುತ್ತಿರುವ ‘ಖಬರ್ ಲಹರಿಯಾ’ ಪ್ರಜಾಪ್ರಭುತ್ವದ ಬೆಳಕು, ಹೊಸತನದ ಅಲೆ…. ಜೊತೆಗೆ ಕನ್ನಡದ ಸ್ವತಂತ್ರ ಮಾಧ್ಯಮಗಳಿಗೆ ಮಾದರಿ.


ಇದನ್ನೂ ಓದಿ; ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....