Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದು ಟ್ವೀಟ್ ಮಾಡಿದ ಬಳಿಕ ನಟ ಕಿಚ್ಚ ಸುದೀಪ್‌ ಖಡನ್‌ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಸುದೀಪ್‌ ಕೇಳಿದ್ದರು.

ಈಗ ಒಬ್ಬೊಬ್ಬರಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಅಜಯ್‌ ದೇವಗನ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ನಟರಾದ ಸತೀಶ್ ನೀನಾಸಂ, ಶ್ರೀನಗರ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

#StopHindiImposition (#ಹಿಂದಿಹೇರಿಕೆನಿಲ್ಲಿಸಿ) ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, “ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಅಜಯ್‌ ದೇವಗನ್‌ , ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಆರ್‌ನಂತಹ ಚಲನಚಿತ್ರಗಳು ಹಿಂದಿ ಭಾಗದಲ್ಲಿ ಉತ್ತಮವಾಗಿ ಯಶಸ್ವಿಯಾಗಿವೆ. ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ” ಎಂದು ತಿಳಿಸಿದ್ದಾರೆ.

ನಟ ಸತೀಶ್ ನೀನಾಸಂ ಪ್ರತಿಕ್ರಿಯಿಸಿ, “ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್‌ ಸರ್‌” ಎಂದು ಟ್ವೀಟ್‌ ಮಾಡಿದ್ದಾರೆ.

#AjayDevgan #Hindi #Kannada  ಹ್ಯಾಷ್‌ ಟ್ಯಾಗ್‌ನಲ್ಲಿ ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಮಿಸ್ಟರ್ ಪಾನ್ ಮಸಾಲ ಅಜಯ್ ದೇವಗನ್- ಬಾಯಿ ಬಿಟ್ಟು ಏನೇನೋ ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು-ಎಂಬ ಮಾತು ತಮಗೆ ಚೆನ್ನಾಗಿ ಒಪ್ಪುತ್ತದೆ. ಎಂತಾ ಅಜ್ಞಾನ ಮತ್ತು ಅಹಂಕಾರ. ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ ಆಗುವುದೂ ಇಲ್ಲ ಎಂಬುದನ್ನ ಮತ್ತು ಸ್ಟಾರ್‌ಗಳು ಖಾಲಿ ಕೊಡಗಳು ಎಂಬುದನ್ನ ನೆನಪಿಸಿದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಶ್ರೀನಗರ ಕಿಟ್ಟಿ ಟ್ವೀಟ್‌ ಮಾಡಿದ್ದು, “ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ. ಅದುವೇ ಟ್ವೀಟ್” ಎಂದು ಸುದೀಪ್‌ ಅವರ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...