Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದು ಟ್ವೀಟ್ ಮಾಡಿದ ಬಳಿಕ ನಟ ಕಿಚ್ಚ ಸುದೀಪ್‌ ಖಡನ್‌ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಸುದೀಪ್‌ ಕೇಳಿದ್ದರು.

ಈಗ ಒಬ್ಬೊಬ್ಬರಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಅಜಯ್‌ ದೇವಗನ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ನಟರಾದ ಸತೀಶ್ ನೀನಾಸಂ, ಶ್ರೀನಗರ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

#StopHindiImposition (#ಹಿಂದಿಹೇರಿಕೆನಿಲ್ಲಿಸಿ) ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, “ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಅಜಯ್‌ ದೇವಗನ್‌ , ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಆರ್‌ನಂತಹ ಚಲನಚಿತ್ರಗಳು ಹಿಂದಿ ಭಾಗದಲ್ಲಿ ಉತ್ತಮವಾಗಿ ಯಶಸ್ವಿಯಾಗಿವೆ. ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ” ಎಂದು ತಿಳಿಸಿದ್ದಾರೆ.

ನಟ ಸತೀಶ್ ನೀನಾಸಂ ಪ್ರತಿಕ್ರಿಯಿಸಿ, “ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್‌ ಸರ್‌” ಎಂದು ಟ್ವೀಟ್‌ ಮಾಡಿದ್ದಾರೆ.

#AjayDevgan #Hindi #Kannada  ಹ್ಯಾಷ್‌ ಟ್ಯಾಗ್‌ನಲ್ಲಿ ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಮಿಸ್ಟರ್ ಪಾನ್ ಮಸಾಲ ಅಜಯ್ ದೇವಗನ್- ಬಾಯಿ ಬಿಟ್ಟು ಏನೇನೋ ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು-ಎಂಬ ಮಾತು ತಮಗೆ ಚೆನ್ನಾಗಿ ಒಪ್ಪುತ್ತದೆ. ಎಂತಾ ಅಜ್ಞಾನ ಮತ್ತು ಅಹಂಕಾರ. ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ ಆಗುವುದೂ ಇಲ್ಲ ಎಂಬುದನ್ನ ಮತ್ತು ಸ್ಟಾರ್‌ಗಳು ಖಾಲಿ ಕೊಡಗಳು ಎಂಬುದನ್ನ ನೆನಪಿಸಿದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಶ್ರೀನಗರ ಕಿಟ್ಟಿ ಟ್ವೀಟ್‌ ಮಾಡಿದ್ದು, “ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ. ಅದುವೇ ಟ್ವೀಟ್” ಎಂದು ಸುದೀಪ್‌ ಅವರ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...