Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದು ಟ್ವೀಟ್ ಮಾಡಿದ ಬಳಿಕ ನಟ ಕಿಚ್ಚ ಸುದೀಪ್‌ ಖಡನ್‌ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಸುದೀಪ್‌ ಕೇಳಿದ್ದರು.

ಈಗ ಒಬ್ಬೊಬ್ಬರಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಅಜಯ್‌ ದೇವಗನ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ನಟರಾದ ಸತೀಶ್ ನೀನಾಸಂ, ಶ್ರೀನಗರ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

#StopHindiImposition (#ಹಿಂದಿಹೇರಿಕೆನಿಲ್ಲಿಸಿ) ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, “ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಅಜಯ್‌ ದೇವಗನ್‌ , ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಆರ್‌ನಂತಹ ಚಲನಚಿತ್ರಗಳು ಹಿಂದಿ ಭಾಗದಲ್ಲಿ ಉತ್ತಮವಾಗಿ ಯಶಸ್ವಿಯಾಗಿವೆ. ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ” ಎಂದು ತಿಳಿಸಿದ್ದಾರೆ.

ನಟ ಸತೀಶ್ ನೀನಾಸಂ ಪ್ರತಿಕ್ರಿಯಿಸಿ, “ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್‌ ಸರ್‌” ಎಂದು ಟ್ವೀಟ್‌ ಮಾಡಿದ್ದಾರೆ.

#AjayDevgan #Hindi #Kannada  ಹ್ಯಾಷ್‌ ಟ್ಯಾಗ್‌ನಲ್ಲಿ ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಮಿಸ್ಟರ್ ಪಾನ್ ಮಸಾಲ ಅಜಯ್ ದೇವಗನ್- ಬಾಯಿ ಬಿಟ್ಟು ಏನೇನೋ ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು-ಎಂಬ ಮಾತು ತಮಗೆ ಚೆನ್ನಾಗಿ ಒಪ್ಪುತ್ತದೆ. ಎಂತಾ ಅಜ್ಞಾನ ಮತ್ತು ಅಹಂಕಾರ. ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ ಆಗುವುದೂ ಇಲ್ಲ ಎಂಬುದನ್ನ ಮತ್ತು ಸ್ಟಾರ್‌ಗಳು ಖಾಲಿ ಕೊಡಗಳು ಎಂಬುದನ್ನ ನೆನಪಿಸಿದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಶ್ರೀನಗರ ಕಿಟ್ಟಿ ಟ್ವೀಟ್‌ ಮಾಡಿದ್ದು, “ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ. ಅದುವೇ ಟ್ವೀಟ್” ಎಂದು ಸುದೀಪ್‌ ಅವರ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...