Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದು ಟ್ವೀಟ್ ಮಾಡಿದ ಬಳಿಕ ನಟ ಕಿಚ್ಚ ಸುದೀಪ್‌ ಖಡನ್‌ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಸುದೀಪ್‌ ಕೇಳಿದ್ದರು.

ಈಗ ಒಬ್ಬೊಬ್ಬರಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಅಜಯ್‌ ದೇವಗನ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ನಟರಾದ ಸತೀಶ್ ನೀನಾಸಂ, ಶ್ರೀನಗರ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

#StopHindiImposition (#ಹಿಂದಿಹೇರಿಕೆನಿಲ್ಲಿಸಿ) ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, “ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಅಜಯ್‌ ದೇವಗನ್‌ , ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಆರ್‌ನಂತಹ ಚಲನಚಿತ್ರಗಳು ಹಿಂದಿ ಭಾಗದಲ್ಲಿ ಉತ್ತಮವಾಗಿ ಯಶಸ್ವಿಯಾಗಿವೆ. ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ” ಎಂದು ತಿಳಿಸಿದ್ದಾರೆ.

ನಟ ಸತೀಶ್ ನೀನಾಸಂ ಪ್ರತಿಕ್ರಿಯಿಸಿ, “ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್‌ ಸರ್‌” ಎಂದು ಟ್ವೀಟ್‌ ಮಾಡಿದ್ದಾರೆ.

#AjayDevgan #Hindi #Kannada  ಹ್ಯಾಷ್‌ ಟ್ಯಾಗ್‌ನಲ್ಲಿ ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಮಿಸ್ಟರ್ ಪಾನ್ ಮಸಾಲ ಅಜಯ್ ದೇವಗನ್- ಬಾಯಿ ಬಿಟ್ಟು ಏನೇನೋ ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು-ಎಂಬ ಮಾತು ತಮಗೆ ಚೆನ್ನಾಗಿ ಒಪ್ಪುತ್ತದೆ. ಎಂತಾ ಅಜ್ಞಾನ ಮತ್ತು ಅಹಂಕಾರ. ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ ಆಗುವುದೂ ಇಲ್ಲ ಎಂಬುದನ್ನ ಮತ್ತು ಸ್ಟಾರ್‌ಗಳು ಖಾಲಿ ಕೊಡಗಳು ಎಂಬುದನ್ನ ನೆನಪಿಸಿದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಶ್ರೀನಗರ ಕಿಟ್ಟಿ ಟ್ವೀಟ್‌ ಮಾಡಿದ್ದು, “ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ. ಅದುವೇ ಟ್ವೀಟ್” ಎಂದು ಸುದೀಪ್‌ ಅವರ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...