Homeಮುಖಪುಟಮಹಾರಾಷ್ಟ್ರ: ಬಿಜೆಪಿ ತೊರೆದ ಏಕನಾಥ್ ಖಾಡ್ಸೆ; ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆ

ಮಹಾರಾಷ್ಟ್ರ: ಬಿಜೆಪಿ ತೊರೆದ ಏಕನಾಥ್ ಖಾಡ್ಸೆ; ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆ

ನಾವು ಅವರೊಂದಿಗೆ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅದು ಸಫಲವಾಗಲಿಲ್ಲ. ಅವರಿಗೆ ಶುಭವಾಗಲಿ. ಪಕ್ಷದ ಸಣ್ಣ ಕಾರ್ಯಕರ್ತರೂ ಬಿಜೆಪಿಯನ್ನು ತೊರೆಯುವುದು ಪಕ್ಷಕ್ಕೆ ನಷ್ಟ- ಬಿಜೆಪಿಯ ಕೇಶವ್ ಉಪಾಧ್ಯಾಯ

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಾಡ್ಸೆ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶುಕ್ರವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಎನ್​ಸಿಪಿ ನಾಯಕ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ.

“ಮಹಾರಾಷ್ಟ್ರದ ಬಿಜೆಪಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಹಿರಿಯ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ತಮ್ಮ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ. ಸ್ವಲ್ಪ ಸಮಯದ ಹಿಂದೆ ಅವರು ತಮ್ಮ ನಿರ್ಧಾರದ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ. ಇದು ಎನ್‌ಸಿಪಿಯಲ್ಲಿ ಅವರ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ. ಶುಕ್ರವಾರ ಮಧ್ಯಾಹ್ನ ಖಾಡ್ಸೆ ಪಕ್ಷಕ್ಕೆ ಸೇರುತ್ತಾರೆ ”ಎಂದು ಪಾಟೀಲ್ ಹೇಳಿದ್ದಾರೆ.

 

ಬುಧವಾರ ರಾಜೀನಾಮೆ ನೀಡಿದ ನಂತರ ಖಾಡ್ಸೆ, ತಾವು ಪಕ್ಷವನ್ನು ತೊರೆಯಲು ಪ್ರಮುಖ ಕಾರಣ ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಎಂದು ಹೇಳಿದ್ದಾರೆ. ತಾವು ಮಾತ್ರ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಬೇರೆ ಯಾವುದೇ ಪಕ್ಷದ ಶಾಸಕರು ಅಥವಾ ಸಂಸದರು ಅವರೊಂದಿಗೆ ಎನ್‌ಸಿಪಿಗೆ ಸೇರ್ಪಡೆಯಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಕಂದಾಯ ಸಚಿವ ಮತ್ತು ಇತರ 11 ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಖಾಡ್ಸೆ, 2016 ರ ಜೂನ್‌ನಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸಿದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಾಲ್ಕು ದಶಕಗಳ ಕಾಲ ಪಕ್ಷದೊಂದಿಗೆ ಕೆಲಸ ಮಾಡಿ, ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಫಡ್ನವೀಸ್ ಹೊರತುಪಡಿಸಿ ಪಕ್ಷದ ಬೇರೆ ಯಾವುದೇ ಮುಖಂಡರೊಂದಿಗೆ ಅಸಮಾಧಾನ ಹೊಂದಿಲ್ಲ ಎಂದು ಖಾಡ್ಸೆ ಹೇಳಿದ್ದಾರೆ. “ರಾಷ್ಟ್ರೀಯ ಅಥವಾ ರಾಜ್ಯ ನಾಯಕತ್ವದಿಂದ ಬೇರೆ ಯಾವುದೇ ನಾಯಕರ ವಿರುದ್ಧ ನನಗೆ ಯಾವುದೇ ಸಮಸ್ಯೆಯಿಲ್ಲ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಗ್ಗೆ ಅಸಮಾಧಾನವಿದೆ. ಅವರು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದರು. ಎಷ್ಟೂ ಪ್ರಕರಣಗಳಿಂದ ನಾನಿನ್ನು ಹೊರ ಬಂದಿಲ್ಲ. ಈ ರೀತಿಯ ಶಿಕ್ಷೆಗೆ ಕಾರಣ ನೀಡುವಂತೆ ಫಡ್ನವೀಸ್ ಅವರನ್ನು ವಿವಿಧ ವೇದಿಕೆಗಳಲ್ಲಿ ಒತ್ತಾಯಿಸಿದ್ದೇನೆ. ಆದರೆ ನನಗೆ ಯಾವತ್ತೂ ಉತ್ತರ ಸಿಕ್ಕಿಲ್ಲ” ಎಂದು ಅವರು ಹೇಳಿದರು.

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಏಕನಾಥ್ ಖಾಡ್ಸೆ ಅವರಿಗೆ ಚುನಾವಣಾ ಟಿಕೆಟ್ ನಿರಾಕರಿಸಲಾಗಿತ್ತು.

ರಾಜ್ಯ ಬಿಜೆಪಿಯ ವಕ್ತಾರ ಕೇಶವ್ ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ. ನಾವು ಅವರೊಂದಿಗೆ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅದು ಸಫಲವಾಗಲಿಲ್ಲ. ಅವರಿಗೆ ಶುಭವಾಗಲಿ. ಪಕ್ಷದ ಸಣ್ಣ ಕಾರ್ಯಕರ್ತರೂ ಬಿಜೆಪಿಯನ್ನು ತೊರೆಯುವುದು ಪಕ್ಷಕ್ಕೆ ನಷ್ಟ” ಎಂದಿದ್ದಾರೆ.

ಫಡ್ನವೀಸ್ ವಿರುದ್ಧ ಏಕನಾಥ್ ಖಾಡ್ಸೆ ಅವರ ಆರೋಪಗಳು ಆಧಾರ ರಹಿತವಾಗಿವೆ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಈ ನಿರ್ಧಾರ ದುರದೃಷ್ಟಕರ, ಆದರೆ ಖಾಡ್ಸೆ ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ ಎಂದಿದ್ದಾರೆ.


ಇದನ್ನೂ ಓದಿ:  ಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...