Homeಮುಖಪುಟಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು...

ಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು…

ಭಾರತದಲ್ಲಿ ದಲಿತರ ಮೇಲೆ ಸರಿಸುಮಾರು ಹದಿನೆಂಟು ನಿಮಿಷಗಳಿಗೊಂದು ದೌರ್ಜನ್ಯಗಳು ನಡೆಯುತ್ತಿವೆ. ಪ್ರತಿ ದಿನ ಸರಾಸರಿ ಮೂರು ದಲಿತ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತದೆ. ದಲಿತರ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗುತ್ತದೆ.

- Advertisement -
- Advertisement -

ಆನಂದ್ ತೇಲ್ತುಂಬ್ಡೆ ವ್ರಣವಾಗಿರುವ ಭಾರತೀಯ ಸಮಾಜದ ಹೃದಯವನ್ನು ಬೆಳಕಿಗೆ ತಂದಿದ್ದಾರೆ ಎಂದು ಖೈರ್ಲಾಂಜಿ ಪುಸ್ತಕದ ಬಗ್ಗೆ ಆರುಂಧತಿ ರಾಯ್ ಹೇಳಿದ್ದರು. ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ಆದ ಜಾತಿ ದೌರ್ಜನ್ಯದ ವಿವರ ಮತ್ತು ವಿಶ್ಲೇಷಣೆಯನ್ನು ಒಳಗೊಂಡಿರುವ ಪುಸ್ತಕವಿದು. 2006 ಸೆಪ್ಟೆಂಬರ್ 29ರಂದು ಆದ ಹೀನಾಯ ಘಟನೆಯೊಂದರ ದಾಖಲೆ ಮಾತ್ರವಲ್ಲ, ನಮ್ಮ ಭಾರತದಲ್ಲಿ ಅಲ್ಲಲ್ಲಿ, ಆಗ್ಗಿಂದಾಗ್ಗೆ ಘಟಿಸುತ್ತಲೇ ಇರುವ ಸಂಗತಿಗಳ ಉಪಮಾ ರೂಪಕ ಇದು. ಕಂಬಾಲಪಲ್ಲಿಯಲ್ಲಿ ದಲಿತರ ಇಡೀ ಕುಟುಂಬವನ್ನೇ ಸುಟ್ಟರು. ಸಾಕ್ಷ್ಯಗಳಿಲ್ಲವೆಂದು ಆರೋಪಿಗಳೆಲ್ಲಾ ಬಿಡುಗಡೆಗೊಂಡು ಏನೂ ನಡೆದೇ ಇಲ್ಲವೆಂಬಂತೆ ನಡೆದಾಡಿಕೊಂಡಿದ್ದಾರೆ. ಈ ದೌರ್ಜನ್ಯದಲ್ಲಿ ಸುಟ್ಟುಕರಕಲಾದವರು ಯಾವ ನ್ಯಾಯವನ್ನೂ ಪಡೆಯದೇ ಜೀವ ಮತ್ತು ಜೀವನಗಳು ವ್ಯರ್ಥವಾಗಿ ಬೂಧಿಯಾಗಿ ಹೋದವು.

ದಲಿತನೊಬ್ಬ ತನ್ನ ಮದುವೆಯಲ್ಲಿ ಕುದುರೆಯನ್ನೇರಿ ಮೆರವಣಿಗೆ ಹೊರಟನೆಂದು, ದಲಿತ ಬಾಲಕನೊಬ್ಬ ಪ್ರಸಾದದ ಪಾತ್ರೆ ತಗುಲಿಸಿದನೆಂದು, ದೇವಸ್ಥಾನದೊಳಗೆ ದಲಿತ ವೃದ್ಧನೊಬ್ಬ ಪ್ರವೇಶಿಸಿದನೆಂದು ಸುಟ್ಟು ಕೊಂದ, ಬಡಿದು ಕೊಂದ ಪ್ರಕರಣಗಳು ಯಾವುದೋ ಓಬೀರಾಯನ ಕಾಲದ ಮೌಖಿಕ ಇತಿಹಾಸವಲ್ಲ. ಇದೇ ವರ್ಷ ವರದಿಯಾದ ಪ್ರಕರಣಗಳು. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ದಾಖಲಿಸುವಂತೆ, ಲೆಕ್ಕಕ್ಕೆ ಅಂಕಿ ಅಂಶಗಳು ಸಿಗುವಂತೆ ಭಾರತದಲ್ಲಿ ದಲಿತರ ಮೇಲೆ ಸರಿಸುಮಾರು ಹದಿನೆಂಟು ನಿಮಿಷಗಳಿಗೊಂದು ದೌರ್ಜನ್ಯಗಳು ನಡೆಯುತ್ತಿವೆ. ಪ್ರತಿ ದಿನ ಸರಾಸರಿ ಮೂರು ದಲಿತ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತದೆ. ದಲಿತರ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗುತ್ತದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡೇ ಆನಂದ್ ಸವಿಸ್ತಾರವಾಗಿ ಖೈರ್ಲಾಂಜಿಯನ್ನು ವಿಶ್ಲೇಷಿಸಿದ್ದಾರೆ.

ಖೈರ್ಲಾಂಜಿಯಲ್ಲಿ ಆದದ್ದೇನು? ಖೈರ್ಲಾಂಜಿ ಮಹಾರಾಷ್ಟ್ರದ ನಾಗಪುರದ ಸಮೀಪವಿರುವ ಒಂದು ಹಳ್ಳಿ. ಸವರ್ಣೀಯ ಭ್ರಮೆಯ ಶೂದ್ರರು ದಲಿತ ಕುಟುಂಬದ ಮೇಲೆ ದಾಳಿ ಮಾಡಿ ನಡೆಸಿದ ಕ್ರೂರ ದೌರ್ಜನ್ಯದ ಕತೆಯಿದು. ಭೈಯಾಲಾಲ್ ಭೋತ್ಮಾಂಗೆ, ಹೆಂಡತಿ ಸುರೇಖಾ, ಆಕೆಯ ಮಗಳು ಪ್ರಿಯಾಂಕ, ಇಬ್ಬರು ಗಂಡು ಮಕ್ಕಳು ರೋಷನ್ ಮತ್ತು ಸುಧೀರ್ ಇರುವಂತಹ ಐದು ಜನರ ಕುಟುಂಬ. ದುಡಿಮೆಯಲ್ಲಿ ಹಣ ಉಳಿಸಿ, ಸೇರಿಸಿ, ಶಿಕ್ಷಣ ಪಡೆಯುತ್ತಾ ಸ್ವಾಭಿಮಾನದಲ್ಲಿ ಬದುಕುತ್ತಿದ್ದ ಅವರು ತಮ್ಮದೇ ಆದ ಜಮೀನನ್ನು ಹೊಂದಿದ್ದರು. ಅವರ ಆ ಜಮೀನಿನಲ್ಲಿ ತಾವು ನಡೆದಾಡೆವ ದಾರಿಯನ್ನು ರೂಪಿಸಿಕೊಳ್ಳುವ ನೆಪದಲ್ಲಿ ಸವರ್ಣೀಯರು ಕಿರುಕುಳಗಳನ್ನು ಕೊಡುತ್ತಿದ್ದರು. ಅದರ ಜೊತೆಗೆ ಭಾರತದಲ್ಲಿ ಅಸ್ಪೃಷ್ಯರನ್ನು ನಡೆಸಿಕೊಳ್ಳುವ ಸಾಂಪ್ರದಾಯಕ ಅಪಮಾನಗಳಿಂದಲೂ ಇವರೇನು ಹೊರತಾಗಿರಲಿಲ್ಲ. ಇವರ ಜಮೀನು ವ್ಯಾಜ್ಯವು ಕೋರ್ಟ್ ಮೆಟ್ಟಿಲೇರಿ ಹಲವು ಹಂತಗಳ ಬಳಿಕ ಈ ದಲಿತ ಕುಟುಂಬವು ಜಯಗಳಿಸಿತ್ತು.

ಅವರಿಗೆ ನೆರವಾಗಲು ರಾಜಕೀಯ ಮತ್ತು ವ್ಯವಸ್ಥೆಗಳಲ್ಲಿ ಕೊಂಚ ಅನುಭವವಿದ್ದ ಸಿದ್ಧಾರ್ಥ್ ಎಂಬ ವ್ಯಕ್ತಿ ಅವರ ಬೆನ್ನಿಗಿದ್ದರು. ಅಂತೆಯೇ ಊರಿನವರ ಜೊತೆಗೆ ಸಖ್ಯವನ್ನು ಕಾಪಾಡಿಕೊಳ್ಳಲು ಇವರಿಂದಲೇ ಹತ್ತಡಿ ಜಾಗಬಿಡಿಸಿ ರಾಜಿ ಪಂಚಾಯತಿ ಎಲ್ಲಾ ಆದವು (ಎಲ್ಲಾ ವಿವರಗಳು ಕೃತಿಯಲ್ಲಿವೆ). ಅಷ್ಟಾದರೂ ಇವರ ಅಂದರೆ ಈ ಕೀಳು ಜಾತಿಯವರಿಂದ ತಾವು ಸೋಲನ್ನು ಅನುಭವಿಸಿದೆವು ಎಂಬ ಅಪಮಾನದ ಉರಿಯಲ್ಲಿ ಸೇಡನ್ನು ತೀರಿಸಿಕೊಳ್ಳಲು ಸಮುದಾಯದ ಸಾಮೂಹಿಕ ಗುಪ್ತ ಚರ್ಚೆಗಳಾಗಿ ಸೆಪ್ಟೆಂಬರ್ 29, 2006ರಂದು ರಾತ್ರಿ ಇವರ ಮನೆಯ ಮೇಲೆ ದಾಳಿ ಮಾಡಿದರು. ಭೈಯಾಲಾಲ್ ಮನೆಯಲ್ಲಿರಲಿಲ್ಲ. ಇನ್ನುಳಿದ ನಾಲ್ವರನ್ನೂ ಮನೆಯಿಂದ ಹೊರಗೆ ಎಳೆದು ಹಾಕಿ, ಗ್ರಾಮಸ್ಥರು ಅವರನ್ನು ಬೆತ್ತಲೆ ಮಾಡಿ ಕೊಚ್ಚಿ ಕೊಂದುಹಾಕಿದರು. ಕಚ್ಚಿ, ಪರಚಿ, ಅಟ್ಟಾಡಿಸಿಕೊಂಡು ಹೊಡೆದಿದ್ದರು. ಎಲ್ಲರ ಕಣ್ಣೆದುರೇ ಅವರು ಜೀವ ಬಿಡುವ ತನಕ ಒಂದು ಗಂಟೆಗೂ ಹೆಚ್ಚು ಕಾಲ, ಸಾಮೂಹಿಕ ಅತ್ಯಾಚಾರ ನಡೆಸಿದರು. ಅವರ ಮರ್ಮಾಂಗದೊಳಗೆ ದೊಣ್ಣೆಯನ್ನು ತುರುಕಲಾಗಿತ್ತು. ಗಂಡು ಮಕ್ಕಳನ್ನು ಒದ್ದು ಒದ್ದು ತಿವಿದೂ ತಿವಿದೂ ಕೊಂದರು. ಅವರ ಮರ್ಮಾಂಗವನ್ನು ಕತ್ತರಿಸಲಾಯಿತು. ಅವರ ಮುಖವನ್ನು ವಿರೂಪಗೊಳಿಸಿ ಸಾಯುವ ತನಕ ಅವರನ್ನು ಮೇಲೆ ಎಸೆದೆಸೆದು ನೆಲಕ್ಕಪ್ಪಳಿಸಿದರು. ಇಷ್ಟಾದ ಮೇಲೆ ಸತ್ತ ಸುರೇಖಾಳ ಚಾರಿತ್ರ್ಯವಧೆ ಮಾಡುತ್ತಾ ಅವಳ ಅಕ್ರಮ ಸಂಬಂಧದ ಕಾರಣದಿಂದ ಇದಾಯಿತು ಎಂದು ಕತೆ ಕಟ್ಟಿದರು.

 

ಇಷ್ಟು ನಿಷ್ಕರುಣವಾದ ನಿಷ್ಕರ್ಷೆಯ ಹಿಂದೆ ಮುಂದೆ ಬೇಕಾದಷ್ಟು ಸಂಗತಿಗಳ ಎಳೆಗಳಿವೆ. ಇದರಲ್ಲಿ ರಾಜಕೀಯ, ಜಾತಿ ಮದ, ತಳಜಾತಿಯ ಬಗ್ಗೆ ಇರುವ ಅಸಹನೆ, ದಲಿತರು ಶಿಕ್ಷಣ ಪಡೆಯುವ – ಉತ್ತಮ ಜೀವನ ನಡೆಸುವುದರ ಬಗ್ಗೆ ಇರುವ ಅಸೂಯೆ, ಮಾಧ್ಯಮದವರ ಮೋಸ, ರಾಜಕೀಯದವರ ಪಗಡೆಯಾಟ; ಹೀಗೆ ಹತ್ತು ಹಲವು ಬರಿಯ ಜಾತಿ ಅಸಹನೆಯ ಸುತ್ತವೇ ಇರುವುದು ಎಂದರೆ ಈ ಜಾಗತಿಕ ಯುಗದಲ್ಲಿ ಭಾರತದ ಹೃದಯ ವ್ರಣದಿಂದ ಕೂಡಿದೆ ಎಂದ ಆರುಂಧತಿಯವರ ಮಾತು ತಪ್ಪೇನಿಲ್ಲ.

ನಾವು ಖೈರ್ಲಾಂಜಿ ಘಟನೆಯನ್ನು ಒಂದು ದುರದೃಷ್ಟಕರ ಘಟನೆಯೆಂದೋ, ಒಂದು ಅಪವಾದವೆಂದೋ ಅಥವಾ ಯಾವುದೋ ವಿಳಾಸವಿಲ್ಲದ ಕೋರ್ಟೊಂದರಲ್ಲಿ ಕೇಳುವವರಿಲ್ಲದ ಪ್ರಕರಣವಾಗಿಯೋ ಮರೆತುಹೋಗಲು ಬಿಟ್ಟುಬಿಡಬಾರದು. ಈ ದೇಶದ ಜಾತಿ ವೃಕ್ಷವು ಎಂಥ ವಿಚಿತ್ರ ಹಣ್ಣುಗಳನ್ನು ಬಿಟ್ಟಿದೆಯೆಂದು ಅರ್ಥ ಮಾಡಿಕೊಳ್ಳುವ ಅಗತ್ಯ ಪ್ರಪಂಚಕ್ಕಿದೆ. ಈ ಜಾತಿ ವೃಕ್ಷದ ಬೇರಿನಲ್ಲೂ ರಕ್ತವಿದೆ. ಎಲೆಗಳಲ್ಲೂ ರಕ್ತವಿದೆ. ಈ ಪುಸ್ತಕವು ಇದ್ದಕ್ಕಿದ್ದಂತೆ ಹಬ್ಬುತ್ತಿರುವ ಸುಡುತ್ತಿರುವ ಮಾಂಸದ ವಾಸನೆಯನ್ನು ಜಗತ್ತಿಗೆ ಪರಿಚಯಿಸುತ್ತದೆ.

ಜಾತಿ ಬೀಜವು ಹುಟ್ಟಿ ಹಾಕಿರುವ ವಿಚಿತ್ರ ಹಾಗೂ ವಿಷಪೂರಿತ ಬೆಳೆಯ ಮಧ್ಯೆ ಈ ಪುಸ್ತಕ ನಿಮ್ಮನ್ನು ಕರೆದೊಯ್ಯುತ್ತದೆ ಎಂದು ಆನಂದ್ ತಮ್ಮ ಪ್ರಸ್ತಾವನೆಯಲ್ಲಿ ಹೇಳಿದ್ದಾರೆ. ಹೌದು, ಮನುಷ್ಯರು ತಮ್ಮ ಜೀವನ ಮಟ್ಟವನ್ನು ಉತ್ತಮಗೊಳಿಸಿಕೊಳ್ಳಲು ಬೇಕಾದ ಮೂಲಭೂತ ಅಗತ್ಯಗಳಾದ ಆಹಾರ, ಆರೋಗ್ಯ, ಶಿಕ್ಷಣ, ವಸತಿ, ಉದ್ಯೋಗ, ಸಂಬಂಧ ಇತ್ಯಾದಿಗಳ ಬಗ್ಗೆ ತುಡಿಯುವ ಮತ್ತು ದುಡಿದು ಕಾರ್ಯರೂಪಕ್ಕೆ ತರುವ ಬದಲು ಅನಗತ್ಯವೂ, ಅವೈಚಾರಿಕವೂ ಮತ್ತು ಅವೈಜ್ಞಾನಿಕವೂ, ಎಲ್ಲದ್ದಕ್ಕಿಂತ ಮುಖ್ಯವಾಗಿ ಈ ಹೊತ್ತಿಗೆ ಅಪ್ರಸ್ತುತವೂ ಆಗಿರುವ ಜಾತಿಯತೆಯ ಸಂಘರ್ಷ ಮತ್ತು ಭ್ರಮೆಗಳಲ್ಲಿ ಜಗ್ಗಾಡುವುದನ್ನು ನೋಡಿದರೆ ಯಾವುದೇ ಪ್ರಜ್ಞಾವಂತರಿಗೆ ಇದು ಆಘಾತವೇ. ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿ ಸಾಧಿಸಬೇಕಾದ ಹೊತ್ತಿನಲ್ಲಿ ಕ್ಷುಲ್ಲಕ ಶ್ರೇಷ್ಟತೆಯ ಗೀಳಿನ ಅಮಲಿನಲ್ಲಿ ತೇಲಾಡುತ್ತಿರುವುದು ಮತ್ತು ಅದರಿಂದ ಜೀವಗಳನ್ನು ನಾಶಪಡಿಸುತ್ತಾ ಬದುಕನ್ನು ಛಿದ್ರಗೊಳಿಸಿಕೊಳ್ಳುತ್ತಾ ಇರುವುದನ್ನು ನೋಡಿದರೆ ಈ ನಮ್ಮ ಭಾರತೀಯ ಸಮಾಜಕ್ಕೆ ಮುಕ್ತಿಯೇ ಇಲ್ಲವೇನೋ ಎಂಬ ಭಯವಾಗುತ್ತದೆ.

ಈ ಲೇಖನ ಬರೆಯಲು ಪುಸ್ತಕವನ್ನು ಮತ್ತೊಮ್ಮೆ ಕಣ್ಣಾಡಿಸಲು ಯತ್ನಿಸಿದಾಗ ಕರುಳು ಹಿಂಡಿದಂತಾಗಿ ಬರೆಯುವುದೇ ಬೇಡ ಎನ್ನಿಸಿದಂತೂ ನಿಜ. ಆದರೆ, ರೋಗ ಪತ್ತೆ ಹಚ್ಚಿ ಅದನ್ನು ತೋರದಿದ್ದರೆ ಅದಕ್ಕೆ ಚಿಕಿತ್ಸೆ ನೀಡುವುದಾದರೂ ಹೇಗೆ? ವ್ರಣ ಉಲ್ಬಣವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅರಿವಾಗುವುದಾದರೂ ಹೇಗೆ?

ಜಾತಿದ್ವೇಷದ ವರ್ತುಲವನ್ನು ಬಲಗೊಳಿಸಿರುವ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆಗಳ ವಿರುದ್ಧವಾಗಿ ಬಲವಾದ ಧ್ವನಿಯನ್ನು ಎತ್ತುತ್ತಿರುವುದರಿಂದಲೇ ಆನಂದ್ ತೇಲ್ತುಂಬ್ಡೆಯ ಮೇಲೆ ಆಪಾದನೆಗಳನ್ನು ಹೊರೆಸಿ ಅವರನ್ನು ಬಂಧಿಸಿರುವುದು. ಈ ದೇಶದಲ್ಲಿ ಜಾತಿಯತೆಯ ರೋಗವನ್ನು ನಿವಾರಿಸುವ ಮಾತಿರಲಿ, ರೋಗವಿದೆ ಎಂದು ಹೇಳಿದರೇನೇ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರೆ, ಮುಂದಿನ ದುರ್ದಿನಗಳನ್ನು ಯಾರಾದರೂ ದೂರದೃಷ್ಟಿಯಿರುವವರು ಕಲ್ಪಿಸಿಕೊಳ್ಳಬಹುದು.

ಖೈರ್ಲಾಂಜಿ ಹತ್ಯಾಕಾಂಡವನ್ನು ಖಂಡಿಸಿ 2006ರ ನವಂಬರ್ ನಲ್ಲಿ ಮಹಾರಾಷ್ಟ್ರದಾದ್ಯಂತ ದಲಿತ ಸಮುದಾಯ ದಂಗೆ ಎದ್ದು ಕೆಲವೆಡೆ ಮಿಲಿಟೆಂಟ್ ಹೋರಾಟಗಳನ್ನು ನಡೆಸಿತು. ಈ ಪ್ರತಿರೋಧದಲ್ಲಿ ಇನ್ನಿತರ ಸಮುದಾಯಗಳ ಸಾಮಾಜಿಕ ಕಾರ್ಯಕರ್ತರು, ಬುದ್ಧಿಜೀವಿಗಳು, ಬರಹಗಾರರೂ ಪಾಲ್ಗೊಂಡಿದ್ದರು. ಆದರೆ ಸರ್ಕಾರ ಈ ಪ್ರತಿರೋಧವನ್ನು ಕ್ರೂರವಾಗಿ ದಮನಿಸಿತು. ಹೋರಾಟ ನಿರತರನ್ನು ಬಂಧಿಸಿ ಹಲವರ ವಿರುದ್ಧ ರಾಜದ್ರೋಹದ ಆರೋಪ ಹೊರಿಸಿ ಹಿಂಸಿಸಿತು. ಲಂಕೇಶ್ ಪ್ರಕಾಶನ ಸದಾ ನ್ಯಾಯದ ಪರ ನಿಲ್ಲುತ್ತದೆ ಮತ್ತು ಅಂತಹ ರಾಜದ್ರೋಹಿಗಳ ಪರ ನಿಲ್ಲಲು ಹಿಂಜರಿಯುವುದಿಲ್ಲ ಎಂದು ಗೌರಿ ಲಂಕೇಶ್ ಹೇಳಿದ್ದರು. ಶಿವಸುಂದರ್ ಸಂಪಾದಿಸಿರುವ ಖೈರ್ಲಾಂಜಿಯ ಕನ್ನಡಾನುವಾದ ತಪ್ಪದೇ ಓದಿ.


ಇದನ್ನೂ ಓದಿ: ಎಷ್ಟೇ ಕಷ್ಟ ಎದುರಾದರೂ ಅಧಿಕಾರಕ್ಕೆ ಸತ್ಯ ಹೇಳಲು ಹಿಂಜರಿಯದವರು – ಡಾ.ರಾಜೇಂದ್ರ ಚೆನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...