Homeಮುಖಪುಟಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ - ಕೇಂದ್ರ ಸರ್ಕಾರ

ಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ – ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಜುಲೈನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲ್ಯಾಂಡ್‌ಲೈನ್‌ ಫೋನ್‌ಗೆ ಖಲಿಸ್ತಾನ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಧ್ವನಿಯಲ್ಲಿ ಮೊದಲೆ ರೆಕಾರ್ಡ್ ಮಾಡಲಾದ ಸಂದೇಶವನ್ನು ಕಳುಹಿಸಲಾಗಿದ್ದು, ಅದರಲ್ಲಿ ಭಾರತೀಯ ಸಂಸತ್ತು ಮತ್ತು ಕೆಂಪು ಕೋಟೆ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ನ್ಯಾಯಮಂಡಳಿಗೆ ತಿಳಿಸಿದೆ ಎಂದು ಗುರುವಾರ ದಿ ಹಿಂದೂ ವರದಿ ಮಾಡಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ಅಷ್ಟೆ ಅಲ್ಲದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದರಾದ ಎ.ಎ. ರಹೀಮ್ ಮತ್ತು ವಿ. ಶಿವದಾಸನ್ ಅವರ ಮೊಬೈಲ್ ಫೋನ್‌ಗಳಿಗೆ ಕೂಡಾ ಅದೇ ಸಂದೇಶವನ್ನು ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಪತ್ರಿಕೆಯ ವರದಿ ಹೇಳಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 27 ರಂದು ನ್ಯಾಯಮಂಡಳಿ ನೀಡಿದ ಆದೇಶವು, ಪನ್ನುನ್ ಅವರ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮೇಲಿನ ಕೇಂದ್ರ ಸರ್ಕಾರದ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಎತ್ತಿಹಿಡಿದಿದೆ. ಐದು ವರ್ಷಗಳ ಹಿಂದೆ 2019 ರಲ್ಲಿ ಈ ಸಂಘಟನೆಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು ಮತ್ತು ಜುಲೈ 10 ರಂದು ಈ ಆದೇಶವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಲಾಯಿತು.

ಅಮೆರಿಕನ್ ಮತ್ತು ಕೆನಡಾದ ಪ್ರಜೆಯಾದ ಪನ್ನುನ್, ಸಿಖ್ಖರಿಗೆ ಸ್ವತಂತ್ರ ದೇಶವಾದ ಖಲಿಸ್ತಾನವನ್ನು ನೀಡಬೇಕು ಎಂದು ಪ್ರತಿಪಾದಿಸುವ ಪ್ರತ್ಯೇಕವಾದಿಯಾಗಿದ್ದಾರೆ. 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಘೋಷಿಸಲಾಯಿತು.

2021 ರಿಂದ, ಸಿಖ್ಸ್ ಫಾರ್ ಜಸ್ಟೀಸ್ ಭಾರತದಿಂದ ಪ್ರತ್ಯೇಕ ಸಿಖ್ ದೇಶವನ್ನು ರಚಿಸಬೇಕು ಎಂಬ ಬಗ್ಗೆ ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹಲವಾರು ಅನಧಿಕೃತ “ಜನಮತಸಂಗ್ರಹ” ಗಳನ್ನು ಆಯೋಜಿಸಿದೆ. 2018 ರಿಂದ ಹಲವಾರು ರಾಜ್ಯ ಪೊಲೀಸ್ ಪಡೆಗಳು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಖ್ ಫಾರ್ ಜಸ್ಟೀಸ್ ವಿರುದ್ಧ ಕನಿಷ್ಠ 122 ಪ್ರಕರಣಗಳನ್ನು ದಾಖಲಿಸಿವೆ. ಈವರೆಗೆ ಪ್ರಕರಣಗಳಲ್ಲಿ ಒಟ್ಟು 105 ಜನರನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ಮಾಡಿದೆ.

ರಕ್ಷಣಾ ಸಚಿವರಿಗೆ ಕಳುಹಿಸಲಾಗಿದೆ ಎಂಬ ಬೆದರಿಕೆ ಧ್ವನಿಯಲ್ಲಿ, ಸಿಖ್ಖರು ಭಾರತ ಸರ್ಕಾರದ ಅಡಿಯಲ್ಲಿ “ಅಸ್ತಿತ್ವದ ಬೆದರಿಕೆಗಳನ್ನು” ಎದುರಿಸುತ್ತಿದ್ದಾರೆ ಮತ್ತು ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಮಾಡಲು ಬಯಸದಿದ್ದರೆ ಸಂಸದರು ಮನೆಯಲ್ಲೇ ಇರಬೇಕೆಂದು ಪನ್ನುನ್ ಎಚ್ಚರಿಸಿದ್ದಾರೆ ಎಂದು ನ್ಯಾಯಮಂಡಳಿಗೆ ಕೇಂದ್ರ ಸರ್ಕಾರ ನೀಡಿದ ಅಫಿಡವಿಟ್ ಸಲ್ಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

“ಈ ಕರೆ ಅಂತರರಾಷ್ಟ್ರೀಯ ಸಂಖ್ಯೆಯಿಂದ ಬಂದಿದ್ದು, ಇಂಟರ್‌ಪೋಲ್ ಸಹಾಯದಿಂದ ಬಳಕೆದಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಗೃಹ ಸಚಿವಾಲಯವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. 2023 ರಲ್ಲಿ ಪಂಜಾಬ್‌ನಲ್ಲಿ ನಡೆದ ರೈಲ್ವೆ ಧ್ವಂಸ ಪ್ರಕರಣಗಳಲ್ಲಿ ಸಿಖ್ಸ್ ಫಾರ್ ಜಸ್ಟೀಸ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಅಲ್ಲದೆ, ಮಾರ್ಚ್ 14, 2023 ರಂದು, ಭಟಿಂಡಾದ ಲೆಹ್ರಾ ಮಾವುತ್ ಗ್ರಾಮದಲ್ಲಿ ಹಳಿಯ ಕ್ಲಿಪ್‌ಗಳನ್ನು ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರು ತೆಗೆದುಹಾಕಿದ್ದಾರೆ ಎಂದು ಅಫಿಡವಿಟ್ ಆರೋಪಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನಾಲ್ಕು ದಿನಗಳ ನಂತರ, ಪನ್ನುನ್ ಅವರ ನಿರ್ದೇಶನದ ಮೇರೆಗೆ ಅವರು ಪತ್ರಾಲಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಿಂದ ಸುಮಾರು 50 ಕ್ಲಾಂಪ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಸರ್ಕಾರ ಅರೋಪಿಸಿದೆ.

ಇದನ್ನೂಓದಿ:  ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...