Homeಮುಖಪುಟಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ - ಕೇಂದ್ರ ಸರ್ಕಾರ

ಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ – ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಜುಲೈನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲ್ಯಾಂಡ್‌ಲೈನ್‌ ಫೋನ್‌ಗೆ ಖಲಿಸ್ತಾನ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಧ್ವನಿಯಲ್ಲಿ ಮೊದಲೆ ರೆಕಾರ್ಡ್ ಮಾಡಲಾದ ಸಂದೇಶವನ್ನು ಕಳುಹಿಸಲಾಗಿದ್ದು, ಅದರಲ್ಲಿ ಭಾರತೀಯ ಸಂಸತ್ತು ಮತ್ತು ಕೆಂಪು ಕೋಟೆ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ನ್ಯಾಯಮಂಡಳಿಗೆ ತಿಳಿಸಿದೆ ಎಂದು ಗುರುವಾರ ದಿ ಹಿಂದೂ ವರದಿ ಮಾಡಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ಅಷ್ಟೆ ಅಲ್ಲದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದರಾದ ಎ.ಎ. ರಹೀಮ್ ಮತ್ತು ವಿ. ಶಿವದಾಸನ್ ಅವರ ಮೊಬೈಲ್ ಫೋನ್‌ಗಳಿಗೆ ಕೂಡಾ ಅದೇ ಸಂದೇಶವನ್ನು ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಪತ್ರಿಕೆಯ ವರದಿ ಹೇಳಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 27 ರಂದು ನ್ಯಾಯಮಂಡಳಿ ನೀಡಿದ ಆದೇಶವು, ಪನ್ನುನ್ ಅವರ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮೇಲಿನ ಕೇಂದ್ರ ಸರ್ಕಾರದ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಎತ್ತಿಹಿಡಿದಿದೆ. ಐದು ವರ್ಷಗಳ ಹಿಂದೆ 2019 ರಲ್ಲಿ ಈ ಸಂಘಟನೆಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು ಮತ್ತು ಜುಲೈ 10 ರಂದು ಈ ಆದೇಶವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಲಾಯಿತು.

ಅಮೆರಿಕನ್ ಮತ್ತು ಕೆನಡಾದ ಪ್ರಜೆಯಾದ ಪನ್ನುನ್, ಸಿಖ್ಖರಿಗೆ ಸ್ವತಂತ್ರ ದೇಶವಾದ ಖಲಿಸ್ತಾನವನ್ನು ನೀಡಬೇಕು ಎಂದು ಪ್ರತಿಪಾದಿಸುವ ಪ್ರತ್ಯೇಕವಾದಿಯಾಗಿದ್ದಾರೆ. 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಘೋಷಿಸಲಾಯಿತು.

2021 ರಿಂದ, ಸಿಖ್ಸ್ ಫಾರ್ ಜಸ್ಟೀಸ್ ಭಾರತದಿಂದ ಪ್ರತ್ಯೇಕ ಸಿಖ್ ದೇಶವನ್ನು ರಚಿಸಬೇಕು ಎಂಬ ಬಗ್ಗೆ ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹಲವಾರು ಅನಧಿಕೃತ “ಜನಮತಸಂಗ್ರಹ” ಗಳನ್ನು ಆಯೋಜಿಸಿದೆ. 2018 ರಿಂದ ಹಲವಾರು ರಾಜ್ಯ ಪೊಲೀಸ್ ಪಡೆಗಳು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಖ್ ಫಾರ್ ಜಸ್ಟೀಸ್ ವಿರುದ್ಧ ಕನಿಷ್ಠ 122 ಪ್ರಕರಣಗಳನ್ನು ದಾಖಲಿಸಿವೆ. ಈವರೆಗೆ ಪ್ರಕರಣಗಳಲ್ಲಿ ಒಟ್ಟು 105 ಜನರನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ಮಾಡಿದೆ.

ರಕ್ಷಣಾ ಸಚಿವರಿಗೆ ಕಳುಹಿಸಲಾಗಿದೆ ಎಂಬ ಬೆದರಿಕೆ ಧ್ವನಿಯಲ್ಲಿ, ಸಿಖ್ಖರು ಭಾರತ ಸರ್ಕಾರದ ಅಡಿಯಲ್ಲಿ “ಅಸ್ತಿತ್ವದ ಬೆದರಿಕೆಗಳನ್ನು” ಎದುರಿಸುತ್ತಿದ್ದಾರೆ ಮತ್ತು ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಮಾಡಲು ಬಯಸದಿದ್ದರೆ ಸಂಸದರು ಮನೆಯಲ್ಲೇ ಇರಬೇಕೆಂದು ಪನ್ನುನ್ ಎಚ್ಚರಿಸಿದ್ದಾರೆ ಎಂದು ನ್ಯಾಯಮಂಡಳಿಗೆ ಕೇಂದ್ರ ಸರ್ಕಾರ ನೀಡಿದ ಅಫಿಡವಿಟ್ ಸಲ್ಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

“ಈ ಕರೆ ಅಂತರರಾಷ್ಟ್ರೀಯ ಸಂಖ್ಯೆಯಿಂದ ಬಂದಿದ್ದು, ಇಂಟರ್‌ಪೋಲ್ ಸಹಾಯದಿಂದ ಬಳಕೆದಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಗೃಹ ಸಚಿವಾಲಯವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. 2023 ರಲ್ಲಿ ಪಂಜಾಬ್‌ನಲ್ಲಿ ನಡೆದ ರೈಲ್ವೆ ಧ್ವಂಸ ಪ್ರಕರಣಗಳಲ್ಲಿ ಸಿಖ್ಸ್ ಫಾರ್ ಜಸ್ಟೀಸ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಅಲ್ಲದೆ, ಮಾರ್ಚ್ 14, 2023 ರಂದು, ಭಟಿಂಡಾದ ಲೆಹ್ರಾ ಮಾವುತ್ ಗ್ರಾಮದಲ್ಲಿ ಹಳಿಯ ಕ್ಲಿಪ್‌ಗಳನ್ನು ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರು ತೆಗೆದುಹಾಕಿದ್ದಾರೆ ಎಂದು ಅಫಿಡವಿಟ್ ಆರೋಪಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನಾಲ್ಕು ದಿನಗಳ ನಂತರ, ಪನ್ನುನ್ ಅವರ ನಿರ್ದೇಶನದ ಮೇರೆಗೆ ಅವರು ಪತ್ರಾಲಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಿಂದ ಸುಮಾರು 50 ಕ್ಲಾಂಪ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಸರ್ಕಾರ ಅರೋಪಿಸಿದೆ.

ಇದನ್ನೂಓದಿ:  ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...