Homeಅಂತರಾಷ್ಟ್ರೀಯಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

- Advertisement -
- Advertisement -

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮ್ಯಾನ್‌ಹ್ಯಾಟನ್‌ ಫೆಡರಲ್ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಗಳು ಹೇಳಿವೆ.

ಪನ್ನುನ್ ಹತ್ಯೆಗಾಗಿ 1,00,000 ಡಾಲರ್ ಹಣ ನೀಡುವುದಾಗಿ ಒಪ್ಪಿಕೊಂಡಿದ್ದ ಮತ್ತು ಅದರಲ್ಲಿ 15,000 ಡಾಲರ್ ಅನ್ನು ಮುಂಗಡವಾಗಿ ಪಾವತಿಸಿದ್ದ ಆರೋಪ ಈತನ ಮೇಲಿದೆ.

ಗುಪ್ತಾ ಹಂತಕನೆಂದು ಭಾವಿಸಿ ಸಂಪರ್ಕಿಸಿದ್ದು ಅಸಲಿಗೆ ಅಮೆರಿಕದ ರಹಸ್ಯ ಪೊಲೀಸ್ ಅಧಿಕಾರಿಯಾಗಿದ್ದರಿಂದ ಈ ಸಂಚು ವಿಫಲವಾಯಿತು ಎನ್ನಲಾಗಿದೆ. ಈ ತಪ್ಪೊಪ್ಪಿಗೆಯ ಹಿನ್ನೆಲೆಯಲ್ಲಿ ಆತನಿಗೆ ಗರಿಷ್ಠ 40 ವರ್ಷಗಳವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.

ಈ ಸಂಚಿನಲ್ಲಿ ಭಾರತದ ಮಾಜಿ ಗುಪ್ತಚರ ಅಧಿಕಾರಿ ವಿಕಾಸ್ ಯಾದವ್ ನಿರ್ದೇಶನ ನೀಡಿದ್ದರು ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ಆರೋಪಿಸಿದೆ.

ಅಮೆರಿಕ ಮತ್ತು ಕೆನಡಾ ಪೌರತ್ವ ಹೊಂದಿರುವ, ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ (ಎಸ್‌ಎಫ್‌ಜೆ) ಸಂಘಟನೆಯ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ನ್ಯೂಯಾರ್ಕ್‌ನಲ್ಲಿ ಸಂಚು ರೂಪಿಸಲಾಗಿತ್ತು ಎಂದು ಅಮೆರಿಕ ಆರೋಪ ಮಾಡಿದೆ. ಈ ಪ್ರಕರಣದಲ್ಲಿ ಹತ್ಯೆಗೆ ಸುಪಾರಿ, ಸಂಚು ಮತ್ತು ಹಣದ ಒಪ್ಪಂದ ಮಾಡಿಕೊಂಡ ಆರೋಪ ನಿಖಿಲ್ ಗುಪ್ತಾ ಮೇಲಿದೆ.

ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಅಧಿಕಾರಿ ಎನ್ನಲಾದ ವಿಕಾಸ್ ಯಾದವ್ ಪರವಾಗಿ ಈ ಹತ್ಯೆಯನ್ನು ಕಾರ್ಯಗತಗೊಳಿಸಲು ಮಧ್ಯವರ್ತಿಯಾಗಿ ಕೆಲಸ ಮಾಡಿದ ಆರೋಪ ನಿಖಿಲ್ ಗುಪ್ತಾ ವಿರುದ್ದ ಮಾಡಲಾಗಿದೆ. ಗುಪ್ತಾಗೆ ಪನ್ನುನ್ ಹತ್ಯೆಯ ನಿರ್ದೇಶನ ನೀಡಿದ್ದು ಇವರೇ ಎಂಬುವುದು ಅಮೆರಿಕದ ವಾದ.

ನಿಖಿಲ್ ಗುಪ್ತಾ ಹಂತಕನೆಂದು ಭಾವಿಸಿ ಒಬ್ಬ ವ್ಯಕ್ತಿಯನ್ನು ಸಂಪರ್ಕಿಸಿದ್ದ. ಆದರೆ ಆ ವ್ಯಕ್ತಿ ಅಮೆರಿಕದ ಮಾದಕದ್ರವ್ಯ ಜಾರಿ ಸಂಸ್ಥೆಯ (ಡಿಇಎ) ರಹಸ್ಯ ಏಜೆಂಟ್ ಆಗಿದ್ದರು. ಈ ಕಾರಣದಿಂದ ಇಡೀ ಸಂಚು ಅಮೆರಿಕದ ಅಧಿಕಾರಿಗಳಿಗೆ ಮೊದಲೇ ತಿಳಿಯಿತು ಎನ್ನಲಾಗಿದೆ.

ಭಾರತ ಸರ್ಕಾರವು ಈ ಸಂಚಿನಲ್ಲಿ ತನ್ನ ಪಾತ್ರವನ್ನು ನಿರಾಕರಿಸಿದೆ. ಆದರೆ, ಅಮೆರಿಕ ನೀಡಿದ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಲು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿದೆ

ಪ್ರಸ್ತುತ ನಿಖಿಲ್ ಗುಪ್ತಾ ತಪ್ಪೊಪ್ಪಿಕೊಂಡಿರುವುದರಿಂದ ಆತನಿಗೆ ಸುಮಾರು 40 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಅಮೆರಿಕದ ಎಫ್‌ಬಿಐ ವಿಕಾಸ್ ಯಾದವ್ ವಿರುದ್ಧ ‘ವಾಂಟೆಡ್’ ನೋಟಿಸ್ ಜಾರಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...