Homeಮುಖಪುಟಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾ ಕೆನಡಾದಲ್ಲಿ ಬಂಧನ; ಆತನ ಹಿನ್ನಲೆ ಏನು?

ಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾ ಕೆನಡಾದಲ್ಲಿ ಬಂಧನ; ಆತನ ಹಿನ್ನಲೆ ಏನು?

- Advertisement -
- Advertisement -

ಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾನನ್ನು ಕೆನಡಾದಲ್ಲಿ ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವರದಿಗಳನ್ನು ಗುಪ್ತಚರ ಸಂಸ್ಥೆಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ. ದಲ್ಲಾ ಬಂಧನದ ಕುರಿತು ಕೆನಡಾದ ಅಧಿಕಾರಿಗಳು ಇನ್ನೂ ಯಾವುದೇ ಮಾಹಿತಿಯನ್ನು ಭಾರತದೊಂದಿಗೆ ಹಂಚಿಕೊಂಡಿಲ್ಲ. ಹತರಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಆಪ್ತ ಸಹಾಯಕ ಎಂದು ಕರೆಯಲ್ಪಡುವ ದಲ್ಲಾ, ಕಳೆದ ವರ್ಷ ನಿಜ್ಜರ ಹತ್ಯೆಯ ನಂತರ ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಅನ್ನು ಮುನ್ನಡೆಸುತ್ತಿದ್ದಾನೆ.

ನಿಜ್ಜಾರ್ ಹತ್ಯೆಯ ಹಿಂದೆ ಭಾರತೀಯ ಸರ್ಕಾರಿ ಏಜೆಂಟರ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ನರೇಂದ್ರ ಮೋದಿ ಸರ್ಕಾರವು ಈ ಆರೋಪವನ್ನು ಕಟುವಾಗಿ ತಿರಸ್ಕರಿಸಿದೆ.

ಭಾರತದಲ್ಲಿ ವಿವಿಧ ಅಪರಾಧ ಚಟುವಟಿಕೆಗಳಿಗೆ ಬೇಕಾಗಿರುವ ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ ಬಹಳ ಸಮಯದಿಂದ ಗುಪ್ತಚರ ಏಜೆನ್ಸಿಗಳ ಕಣ್ಣುತಪ್ಪಿಸುತ್ತಿದ್ದಾನೆ.

ಹರ್ದೀಪ್ ನಿಜ್ಜರ್ ಅವರ ಆಪ್ತ ಸಹಾಯಕ ಅರ್ಶ್ ದಲ್ಲಾ ತನ್ನ ಸ್ಲೀಪರ್ ಸೆಲ್ ನೆಟ್‌ವರ್ಕ್ ಮೂಲಕ ಪಂಜಾಬ್‌ನಲ್ಲಿ ಅನೇಕ ಉದ್ದೇಶಿತ ಹತ್ಯೆಗಳನ್ನು ನಡೆಸಿದ್ದಾನೆ ಎಂಬ ಆರೋಪವಿದೆ. ಎನ್ಐಎ ಪ್ರಕಾರ, ಇವರಿಬ್ಬರು ಪ್ರಮುಖ ವ್ಯಕ್ತಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದರು. 2022 ರಲ್ಲಿ, ಡೇರಾ ಸಚ್ಚಾ ಸೌಧದ ಸದಸ್ಯ ಮನೋಹರ್ ಲಾಲ್ ಹತ್ಯೆಯೊಂದಿಗೆ ದಲ್ಲಾ ಮತ್ತು ನಿಜ್ಜರ್ ಸಂಬಂಧ ಹೊಂದಿದ್ದರು. 2024 ರಲ್ಲಿ, ಪಂಜಾಬ್‌ನಲ್ಲಿ ಕಾಂಗ್ರೆಸ್ ನಾಯಕನ ಹತ್ಯೆಯ ಹೊಣೆಯನ್ನು ದಲ್ಲಾ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿಕೊಂಡಿದ್ದ.

ನಿಜ್ಜರ್ ಸಾವಿನ ನಂತರ, ದಲ್ಲಾ ಕೆಟಿಎಫ್‌ ಅನ್ನು ವಹಿಸಿಕೊಂಡ. ಈ ಸಂಘಟನೆಯನ್ನು ಜಗತಾರ್ ಸಿಂಗ್ ತಾರಾ ಅವರು 2011 ರಲ್ಲಿ ಸ್ಥಾಪಿಸಿದರು. ಈ ಹಿಂದೆ ಬಬ್ಬರ್ ಖಾಲ್ಸಾ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ತಾರಾ, 1995 ರಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು.

ಅರ್ಶ್ ದಲ್ಲಾ ಅವರ ನೆಟ್‌ವರ್ಕ್ ಕೆನಡಾ, ಯುನೈಟೆಡ್ ಸ್ಟೇಟ್ಸ್, ದುಬೈ, ಯುರೋಪ್, ಫಿಲಿಪೈನ್ಸ್, ಥೈಲ್ಯಾಂಡ್ ಮತ್ತು ಮಧ್ಯಪ್ರಾಚ್ಯವನ್ನು ವ್ಯಾಪಿಸಿದೆ. ಎನ್‌ಐಎಯ ಚಾರ್ಜ್‌ಶೀಟ್ ಪ್ರಕಾರ, ದಲ್ಲಾ ಕೆನಡಾ ಗ್ಯಾಂಗ್‌ಸ್ಟರ್ ಗೌರವ್ ಪಾಟಿಯಲ್, ಅಲಿಯಾಸ್ ಸೌರವ್ ಠಾಕೂರ್ ಅವರ ಸಹಯೋಗದೊಂದಿಗೆ ಭಯೋತ್ಪಾದಕ-ದರೋಡೆಕೋರ ಜಾಲವನ್ನು ನಿರ್ವಹಿಸುತ್ತಿದ್ದಾನೆ.

ಆತನ ಕಾರ್ಯಾಚರಣೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ನೀಡುತ್ತಿದೆ ಎಂದು ಅನುಮಾನಿಸಲಾಗಿದೆ. ಡ್ರೋನ್‌ಗಳನ್ನು ಬಳಸಿ ಪಾಕಿಸ್ತಾನದಿಂದ ಪಂಜಾಬ್‌ಗೆ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುವಲ್ಲಿಯೂ ದಲ್ಲಾ ತೊಡಗಿಸಿಕೊಂಡಿದ್ದಾನೆ. ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಸಹಭಾಗಿತ್ವದಲ್ಲಿ ದಲ್ಲಾ ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ್ದಾನೆ ಎಂಬ ಆರೋಪಗಳಿವೆ.

ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹಿಂದೂ ಯುವಕನ ಹತ್ಯೆಗೆ ಈತ ಸಂಚು ರೂಪಿಸಿದ್ದ ಎನ್ನಲಾಗಿದೆ. ತನ್ನ ಸ್ಲೀಪರ್ ಸೆಲ್ ನೆಟ್‌ವರ್ಕ್‌ನಿಂದ ಯುವಕನ ಶಿರಚ್ಛೇದನದ ವೀಡಿಯೊವನ್ನು ಡಲ್ಲಾಗೆ ಕಳುಹಿಸಲಾಗಿದೆ.

ಕೆನಡಾದಲ್ಲಿ, ದಲ್ಲಾ ಗ್ಯಾಂಗ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಹಿಂಸಾತ್ಮಕ ಘರ್ಷಣೆಗಳಲ್ಲಿ ತೊಡಗಿಸಿಕೊಂಡಿದೆ. ದೀರ್ಘಕಾಲದಿಂದ ಅವರೊಂದಿಗೆ ಪೈಪೋಟಿಯನ್ನು ಹೊಂದಿದ್ದಾರೆ. 2023 ರಲ್ಲಿ, ಬಿಷ್ಣೋಯ್ ಗ್ಯಾಂಗ್ ದಲ್ಲಾ ಅವರ ನಿಕಟ ಸಹವರ್ತಿ ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನಿಕೆ ಅವರ ವಿನ್ನಿಪೆಗ್ ಮನೆಗೆ ನುಗ್ಗಿ ಅವರನ್ನು ಗುಂಡಿಕ್ಕಿ ಕೊಂದರು ಎಂದು ವರದಿಯಾಗಿದೆ.

ಪಂಜಾಬ್ ಮತ್ತು ಹರಿಯಾಣದ ಯುವಕರನ್ನು ನೇಮಿಸಿಕೊಳ್ಳಲು ದಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುತ್ತಿದ್ದಾನೆ ಎಂದು ವರದಿಯಾಗಿದೆ. ಅವರು ವಿದೇಶದಲ್ಲಿ ನೆಲೆಸಲು ಸಹಾಯ ಮಾಡುವ ಭರವಸೆಯೊಂದಿಗೆ ಆಮಿಷ ಒಡ್ಡುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ದಲ್ಲಾ ಈ ನೇಮಕಾತಿಗಳನ್ನು ಕುಶಲತೆಯಿಂದ ನಿರ್ವಹಿಸುತ್ತಾನೆ ಎನ್ನಲಾಗಿದೆ.

ಕೆನಡಾದಲ್ಲಿ ನೆಲೆಸಿರುವ ಪಂಜಾಬ್‌ನ ಅನೇಕ ದರೋಡೆಕೋರರಲ್ಲಿ ದಲ್ಲಾ ಕೂಡ ಸೇರಿದ್ದಾರೆ. ಕೆನಡಾದ ಅಧಿಕಾರಿಗಳು ದೇಶದಲ್ಲಿ ಅಶಾಂತಿಗೆ ಸಂಚು ರೂಪಿಸುತ್ತಿರುವ ಖಲಿಸ್ತಾನಿ ಉಗ್ರರನ್ನು ಹಸ್ತಾಂತರಿಸುವಂತೆ ಭಾರತದಿಂದ ಹೆಚ್ಚುತ್ತಿರುವ ಒತ್ತಡವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ; ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...