Homeಮುಖಪುಟಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾ ಕೆನಡಾದಲ್ಲಿ ಬಂಧನ; ಆತನ ಹಿನ್ನಲೆ ಏನು?

ಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾ ಕೆನಡಾದಲ್ಲಿ ಬಂಧನ; ಆತನ ಹಿನ್ನಲೆ ಏನು?

- Advertisement -
- Advertisement -

ಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾನನ್ನು ಕೆನಡಾದಲ್ಲಿ ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವರದಿಗಳನ್ನು ಗುಪ್ತಚರ ಸಂಸ್ಥೆಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ. ದಲ್ಲಾ ಬಂಧನದ ಕುರಿತು ಕೆನಡಾದ ಅಧಿಕಾರಿಗಳು ಇನ್ನೂ ಯಾವುದೇ ಮಾಹಿತಿಯನ್ನು ಭಾರತದೊಂದಿಗೆ ಹಂಚಿಕೊಂಡಿಲ್ಲ. ಹತರಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಆಪ್ತ ಸಹಾಯಕ ಎಂದು ಕರೆಯಲ್ಪಡುವ ದಲ್ಲಾ, ಕಳೆದ ವರ್ಷ ನಿಜ್ಜರ ಹತ್ಯೆಯ ನಂತರ ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಅನ್ನು ಮುನ್ನಡೆಸುತ್ತಿದ್ದಾನೆ.

ನಿಜ್ಜಾರ್ ಹತ್ಯೆಯ ಹಿಂದೆ ಭಾರತೀಯ ಸರ್ಕಾರಿ ಏಜೆಂಟರ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ನರೇಂದ್ರ ಮೋದಿ ಸರ್ಕಾರವು ಈ ಆರೋಪವನ್ನು ಕಟುವಾಗಿ ತಿರಸ್ಕರಿಸಿದೆ.

ಭಾರತದಲ್ಲಿ ವಿವಿಧ ಅಪರಾಧ ಚಟುವಟಿಕೆಗಳಿಗೆ ಬೇಕಾಗಿರುವ ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ ಬಹಳ ಸಮಯದಿಂದ ಗುಪ್ತಚರ ಏಜೆನ್ಸಿಗಳ ಕಣ್ಣುತಪ್ಪಿಸುತ್ತಿದ್ದಾನೆ.

ಹರ್ದೀಪ್ ನಿಜ್ಜರ್ ಅವರ ಆಪ್ತ ಸಹಾಯಕ ಅರ್ಶ್ ದಲ್ಲಾ ತನ್ನ ಸ್ಲೀಪರ್ ಸೆಲ್ ನೆಟ್‌ವರ್ಕ್ ಮೂಲಕ ಪಂಜಾಬ್‌ನಲ್ಲಿ ಅನೇಕ ಉದ್ದೇಶಿತ ಹತ್ಯೆಗಳನ್ನು ನಡೆಸಿದ್ದಾನೆ ಎಂಬ ಆರೋಪವಿದೆ. ಎನ್ಐಎ ಪ್ರಕಾರ, ಇವರಿಬ್ಬರು ಪ್ರಮುಖ ವ್ಯಕ್ತಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದರು. 2022 ರಲ್ಲಿ, ಡೇರಾ ಸಚ್ಚಾ ಸೌಧದ ಸದಸ್ಯ ಮನೋಹರ್ ಲಾಲ್ ಹತ್ಯೆಯೊಂದಿಗೆ ದಲ್ಲಾ ಮತ್ತು ನಿಜ್ಜರ್ ಸಂಬಂಧ ಹೊಂದಿದ್ದರು. 2024 ರಲ್ಲಿ, ಪಂಜಾಬ್‌ನಲ್ಲಿ ಕಾಂಗ್ರೆಸ್ ನಾಯಕನ ಹತ್ಯೆಯ ಹೊಣೆಯನ್ನು ದಲ್ಲಾ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿಕೊಂಡಿದ್ದ.

ನಿಜ್ಜರ್ ಸಾವಿನ ನಂತರ, ದಲ್ಲಾ ಕೆಟಿಎಫ್‌ ಅನ್ನು ವಹಿಸಿಕೊಂಡ. ಈ ಸಂಘಟನೆಯನ್ನು ಜಗತಾರ್ ಸಿಂಗ್ ತಾರಾ ಅವರು 2011 ರಲ್ಲಿ ಸ್ಥಾಪಿಸಿದರು. ಈ ಹಿಂದೆ ಬಬ್ಬರ್ ಖಾಲ್ಸಾ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ತಾರಾ, 1995 ರಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು.

ಅರ್ಶ್ ದಲ್ಲಾ ಅವರ ನೆಟ್‌ವರ್ಕ್ ಕೆನಡಾ, ಯುನೈಟೆಡ್ ಸ್ಟೇಟ್ಸ್, ದುಬೈ, ಯುರೋಪ್, ಫಿಲಿಪೈನ್ಸ್, ಥೈಲ್ಯಾಂಡ್ ಮತ್ತು ಮಧ್ಯಪ್ರಾಚ್ಯವನ್ನು ವ್ಯಾಪಿಸಿದೆ. ಎನ್‌ಐಎಯ ಚಾರ್ಜ್‌ಶೀಟ್ ಪ್ರಕಾರ, ದಲ್ಲಾ ಕೆನಡಾ ಗ್ಯಾಂಗ್‌ಸ್ಟರ್ ಗೌರವ್ ಪಾಟಿಯಲ್, ಅಲಿಯಾಸ್ ಸೌರವ್ ಠಾಕೂರ್ ಅವರ ಸಹಯೋಗದೊಂದಿಗೆ ಭಯೋತ್ಪಾದಕ-ದರೋಡೆಕೋರ ಜಾಲವನ್ನು ನಿರ್ವಹಿಸುತ್ತಿದ್ದಾನೆ.

ಆತನ ಕಾರ್ಯಾಚರಣೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ನೀಡುತ್ತಿದೆ ಎಂದು ಅನುಮಾನಿಸಲಾಗಿದೆ. ಡ್ರೋನ್‌ಗಳನ್ನು ಬಳಸಿ ಪಾಕಿಸ್ತಾನದಿಂದ ಪಂಜಾಬ್‌ಗೆ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುವಲ್ಲಿಯೂ ದಲ್ಲಾ ತೊಡಗಿಸಿಕೊಂಡಿದ್ದಾನೆ. ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಸಹಭಾಗಿತ್ವದಲ್ಲಿ ದಲ್ಲಾ ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ್ದಾನೆ ಎಂಬ ಆರೋಪಗಳಿವೆ.

ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹಿಂದೂ ಯುವಕನ ಹತ್ಯೆಗೆ ಈತ ಸಂಚು ರೂಪಿಸಿದ್ದ ಎನ್ನಲಾಗಿದೆ. ತನ್ನ ಸ್ಲೀಪರ್ ಸೆಲ್ ನೆಟ್‌ವರ್ಕ್‌ನಿಂದ ಯುವಕನ ಶಿರಚ್ಛೇದನದ ವೀಡಿಯೊವನ್ನು ಡಲ್ಲಾಗೆ ಕಳುಹಿಸಲಾಗಿದೆ.

ಕೆನಡಾದಲ್ಲಿ, ದಲ್ಲಾ ಗ್ಯಾಂಗ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಹಿಂಸಾತ್ಮಕ ಘರ್ಷಣೆಗಳಲ್ಲಿ ತೊಡಗಿಸಿಕೊಂಡಿದೆ. ದೀರ್ಘಕಾಲದಿಂದ ಅವರೊಂದಿಗೆ ಪೈಪೋಟಿಯನ್ನು ಹೊಂದಿದ್ದಾರೆ. 2023 ರಲ್ಲಿ, ಬಿಷ್ಣೋಯ್ ಗ್ಯಾಂಗ್ ದಲ್ಲಾ ಅವರ ನಿಕಟ ಸಹವರ್ತಿ ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನಿಕೆ ಅವರ ವಿನ್ನಿಪೆಗ್ ಮನೆಗೆ ನುಗ್ಗಿ ಅವರನ್ನು ಗುಂಡಿಕ್ಕಿ ಕೊಂದರು ಎಂದು ವರದಿಯಾಗಿದೆ.

ಪಂಜಾಬ್ ಮತ್ತು ಹರಿಯಾಣದ ಯುವಕರನ್ನು ನೇಮಿಸಿಕೊಳ್ಳಲು ದಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುತ್ತಿದ್ದಾನೆ ಎಂದು ವರದಿಯಾಗಿದೆ. ಅವರು ವಿದೇಶದಲ್ಲಿ ನೆಲೆಸಲು ಸಹಾಯ ಮಾಡುವ ಭರವಸೆಯೊಂದಿಗೆ ಆಮಿಷ ಒಡ್ಡುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ದಲ್ಲಾ ಈ ನೇಮಕಾತಿಗಳನ್ನು ಕುಶಲತೆಯಿಂದ ನಿರ್ವಹಿಸುತ್ತಾನೆ ಎನ್ನಲಾಗಿದೆ.

ಕೆನಡಾದಲ್ಲಿ ನೆಲೆಸಿರುವ ಪಂಜಾಬ್‌ನ ಅನೇಕ ದರೋಡೆಕೋರರಲ್ಲಿ ದಲ್ಲಾ ಕೂಡ ಸೇರಿದ್ದಾರೆ. ಕೆನಡಾದ ಅಧಿಕಾರಿಗಳು ದೇಶದಲ್ಲಿ ಅಶಾಂತಿಗೆ ಸಂಚು ರೂಪಿಸುತ್ತಿರುವ ಖಲಿಸ್ತಾನಿ ಉಗ್ರರನ್ನು ಹಸ್ತಾಂತರಿಸುವಂತೆ ಭಾರತದಿಂದ ಹೆಚ್ಚುತ್ತಿರುವ ಒತ್ತಡವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ; ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...