HomeಚಳವಳಿNIAಯಿಂದ ಸಮನ್ಸ್‌ ಪಡೆದಿದ್ದ 'ಖಾಲ್ಸಾ ಏಡ್‌' ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

- Advertisement -
- Advertisement -

ಕಳೆದ ಎರಡು ತಿಂಗಳಿಂದ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆನ್ನೆಲುಬಿನಂತಿರುವ ಖಾಲ್ಸಾ ಏಡ್‌ ಎಂಬ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ 2021ರ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದೆ. ಈ ಸಂಸ್ಥೆಗೆ ದೇಣಿಗೆ ಹರಿದು ಬರುತ್ತಿರುವ ಹಿನ್ನೆಲೆಯನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ(NIA)ವು ಜನವರಿ 16 ರಂದು ಸಮನ್ಸ್‌ ನೀಡಿತ್ತು.

ಕೆನಡಾದ ಸಂಸದರಾದ ಉಪಲ್‌ ಅವರು ಖಾಲ್ಸಾ ಸಂಸ್ಥೆಯನ್ನು ನಾಮನಿರ್ದೇಶನಕ್ಕೆ ಮನವಿ ಮಾಡಿ ಜನವರಿ 14 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ಇಂಗ್ಲೆಂಡಿನ ಮೂಲದ ಖಾಲ್ಸಾ ಏಡ್‌ ಸಂಸ್ಥೆ 1999 ರಲ್ಲಿ ರವೀಂದರ್‌ ಸಿಂಗ್‌ ಅವರಿಂದ ಸ್ಥಾಪನೆಯಾಯಿತು. ಸಿಖ್‌ ಸಮುದಾಯದ ಈ ಸಂಸ್ಥೆಯು ನಿಧಾನವಾಗಿ ವಿಶ್ವದಾದ್ಯಂತ ತನ್ನ ಸೇವಾ ಚಟುವಟಿಕೆಗಳನ್ನು ವಿಸ್ತರಿಸಿದೆ. “ಮನುಕುಲವನ್ನು ಒಂದೆಂದು ಭಾವಿಸಿ, ಮಾನವೀಯತೆಯ ಸೇವೆ” ಮಾಡುವುದು ಈ ಸಂಸ್ಥೆಯ ಧ್ಯೇಯ.

ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ನಿರಂತರವಾಗಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ಖಾಲ್ಸಾ ಏಡ್‌, ಪ್ರವಾಹ ಸೇರಿದಂತೆ ಯಾವುದೇ ರೀತಿಯ ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಎಲ್ಲ ರೀತಿಯ ನೆರವನ್ನು ಒದಗಿಸಿದೆ.

ಇಲ್ಲಿ ಉಲ್ಲೇಖಿಸಬಹುದಾದ ಕೆಲವು ನೆರವಿನ ಚಟುವಟಿಕೆಗಳು ಇಂತಿವೆ

  • 1999ರ ಟರ್ಕಿ ಭೂಕಂಪದ ವೇಳೆ ಸಂತ್ರಸ್ತರಿಗೆ ಮೂಲ ಸೌಕರ್ಯ.
  • 2000 ದಲ್ಲಿ ಒರಿಸಾದಲ್ಲಿ ಚಂಡಮಾರುತದಿಂದ ಉಂಟಾದ ಅನಾಹುತದ ರಕ್ಷಣಾ ಕಾರ್ಯಕ್ಕೆ ಸ್ವಯಂ ಸೇವಕರ ರವಾನೆ
  • ಆಫ್‌ಘಾನಿಸ್ತಾನದಲ್ಲಿ 2003 ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಉಪಕರಣ ಹಾಗೂ ಆರ್ಥಿಕ ನೆರವು.
  • 2016 ರಲ್ಲಿ ಲಂಡನ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ಸಂತ್ರಸ್ತರಿಗೆ ಶಿಬಿರಗಳ ಸ್ಥಾಪನೆ ಮತ್ತು ನೆರವು.
  • ಬಾಂಗ್ಲಾ-ಮಯನ್ಮಾರ್‌ ಗಡಿಯಲ್ಲಿದ್ದ ರೊಹಿಂಗ್ಯಾ ನಿರಾಶ್ರಿತರಿಗೆ ಸೇವೆ.
  • 2018 ರಲ್ಲಿ ಇಡೀ ಕೇರಳವನ್ನು ನಡುಗಿಸಿದ ಪ್ರವಾಹದ ವೇಳೆ ಅತಿ ದೊಡ್ಡ ನೆರವಿನ ಕಾರ್ಯವನ್ನು ನಡೆಸಿದ ಹೆಗ್ಗಳಿಕೆ ಖಾಲ್ಸಾ ಸಂಸ್ಥೆಯದ್ದು.

ಈಗ ಪಂಜಾಬಿನಿಂದ ಆರಂಭವಾಗಿ ಕೃಷಿ ನೀತಿಗಳ ವಿರುದ್ಧ ನಡೆಯುತ್ತಿರುವ ಭಾರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಒದಗಿಸಿದ್ದು, ಬಟ್ಟೆ, ಊಟ, ವೈದ್ಯಕೀಯ ನೆರವು ಸೇರಿದಂತೆ ಎಲ್ಲ ರೀತಿಯಲ್ಲೂ ಬೆಂಬಲಕ್ಕೆ ನಿಂತಿದ್ದೆ. ಸರ್ಕಾರ ವಿರುದ್ಧದ ಹೋರಾಟಕ್ಕೆ ಈ ರೀತಿಯಲ್ಲಿ ಬೆನ್ನಿಗೆ ನಿಂತ ಕಾರಣಕ್ಕೆ ಭಯೋತ್ಪಾದಕ ಸಂಸ್ಥೆ ಎಂದು ದೂಷಿಸಿದ್ದು ಅಲ್ಲದೆ, ವಿಚಾರಣೆಗೆ ಕರೆದಿತ್ತು.

ಇದನ್ನೂ ಓದಿ: ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಆದರೆ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...