HomeಚಳವಳಿNIAಯಿಂದ ಸಮನ್ಸ್‌ ಪಡೆದಿದ್ದ 'ಖಾಲ್ಸಾ ಏಡ್‌' ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

- Advertisement -
- Advertisement -

ಕಳೆದ ಎರಡು ತಿಂಗಳಿಂದ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆನ್ನೆಲುಬಿನಂತಿರುವ ಖಾಲ್ಸಾ ಏಡ್‌ ಎಂಬ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ 2021ರ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದೆ. ಈ ಸಂಸ್ಥೆಗೆ ದೇಣಿಗೆ ಹರಿದು ಬರುತ್ತಿರುವ ಹಿನ್ನೆಲೆಯನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ(NIA)ವು ಜನವರಿ 16 ರಂದು ಸಮನ್ಸ್‌ ನೀಡಿತ್ತು.

ಕೆನಡಾದ ಸಂಸದರಾದ ಉಪಲ್‌ ಅವರು ಖಾಲ್ಸಾ ಸಂಸ್ಥೆಯನ್ನು ನಾಮನಿರ್ದೇಶನಕ್ಕೆ ಮನವಿ ಮಾಡಿ ಜನವರಿ 14 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ಇಂಗ್ಲೆಂಡಿನ ಮೂಲದ ಖಾಲ್ಸಾ ಏಡ್‌ ಸಂಸ್ಥೆ 1999 ರಲ್ಲಿ ರವೀಂದರ್‌ ಸಿಂಗ್‌ ಅವರಿಂದ ಸ್ಥಾಪನೆಯಾಯಿತು. ಸಿಖ್‌ ಸಮುದಾಯದ ಈ ಸಂಸ್ಥೆಯು ನಿಧಾನವಾಗಿ ವಿಶ್ವದಾದ್ಯಂತ ತನ್ನ ಸೇವಾ ಚಟುವಟಿಕೆಗಳನ್ನು ವಿಸ್ತರಿಸಿದೆ. “ಮನುಕುಲವನ್ನು ಒಂದೆಂದು ಭಾವಿಸಿ, ಮಾನವೀಯತೆಯ ಸೇವೆ” ಮಾಡುವುದು ಈ ಸಂಸ್ಥೆಯ ಧ್ಯೇಯ.

ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ನಿರಂತರವಾಗಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ಖಾಲ್ಸಾ ಏಡ್‌, ಪ್ರವಾಹ ಸೇರಿದಂತೆ ಯಾವುದೇ ರೀತಿಯ ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಎಲ್ಲ ರೀತಿಯ ನೆರವನ್ನು ಒದಗಿಸಿದೆ.

ಇಲ್ಲಿ ಉಲ್ಲೇಖಿಸಬಹುದಾದ ಕೆಲವು ನೆರವಿನ ಚಟುವಟಿಕೆಗಳು ಇಂತಿವೆ

  • 1999ರ ಟರ್ಕಿ ಭೂಕಂಪದ ವೇಳೆ ಸಂತ್ರಸ್ತರಿಗೆ ಮೂಲ ಸೌಕರ್ಯ.
  • 2000 ದಲ್ಲಿ ಒರಿಸಾದಲ್ಲಿ ಚಂಡಮಾರುತದಿಂದ ಉಂಟಾದ ಅನಾಹುತದ ರಕ್ಷಣಾ ಕಾರ್ಯಕ್ಕೆ ಸ್ವಯಂ ಸೇವಕರ ರವಾನೆ
  • ಆಫ್‌ಘಾನಿಸ್ತಾನದಲ್ಲಿ 2003 ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಉಪಕರಣ ಹಾಗೂ ಆರ್ಥಿಕ ನೆರವು.
  • 2016 ರಲ್ಲಿ ಲಂಡನ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ಸಂತ್ರಸ್ತರಿಗೆ ಶಿಬಿರಗಳ ಸ್ಥಾಪನೆ ಮತ್ತು ನೆರವು.
  • ಬಾಂಗ್ಲಾ-ಮಯನ್ಮಾರ್‌ ಗಡಿಯಲ್ಲಿದ್ದ ರೊಹಿಂಗ್ಯಾ ನಿರಾಶ್ರಿತರಿಗೆ ಸೇವೆ.
  • 2018 ರಲ್ಲಿ ಇಡೀ ಕೇರಳವನ್ನು ನಡುಗಿಸಿದ ಪ್ರವಾಹದ ವೇಳೆ ಅತಿ ದೊಡ್ಡ ನೆರವಿನ ಕಾರ್ಯವನ್ನು ನಡೆಸಿದ ಹೆಗ್ಗಳಿಕೆ ಖಾಲ್ಸಾ ಸಂಸ್ಥೆಯದ್ದು.

ಈಗ ಪಂಜಾಬಿನಿಂದ ಆರಂಭವಾಗಿ ಕೃಷಿ ನೀತಿಗಳ ವಿರುದ್ಧ ನಡೆಯುತ್ತಿರುವ ಭಾರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಒದಗಿಸಿದ್ದು, ಬಟ್ಟೆ, ಊಟ, ವೈದ್ಯಕೀಯ ನೆರವು ಸೇರಿದಂತೆ ಎಲ್ಲ ರೀತಿಯಲ್ಲೂ ಬೆಂಬಲಕ್ಕೆ ನಿಂತಿದ್ದೆ. ಸರ್ಕಾರ ವಿರುದ್ಧದ ಹೋರಾಟಕ್ಕೆ ಈ ರೀತಿಯಲ್ಲಿ ಬೆನ್ನಿಗೆ ನಿಂತ ಕಾರಣಕ್ಕೆ ಭಯೋತ್ಪಾದಕ ಸಂಸ್ಥೆ ಎಂದು ದೂಷಿಸಿದ್ದು ಅಲ್ಲದೆ, ವಿಚಾರಣೆಗೆ ಕರೆದಿತ್ತು.

ಇದನ್ನೂ ಓದಿ: ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಆದರೆ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...